ರಾಜಸ್ಥಾನ | ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಲು ಆದೇಶಿಸಿದ ಸರ್ಕಾರ

Date:

Advertisements

ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ.

ಕಾಯಕಲ್ಪ್ ಯೋಜನೆಯಡಿ ಈ ಆದೇಶ ಹೊರಸಲಾಗಿದೆ. ಪ್ರಾಯೋಗಿಕವಾಗಿ 10 ವಿಭಾಗಗಳ ಒಟ್ಟು 20 ಕಾಲೇಜುಗಳಲ್ಲಿ ಈ ಆದೇಶವನ್ನು ಜಾರಿಗೆ ತರಲಾಗುವುದು ಎಂದು ರಾಜಸ್ಥಾನ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

“ಉನ್ನತ ಶಿಕ್ಷಣದ ಬಗ್ಗೆ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕು. ಕಾಲೇಜುಗಳ ಶೈಕ್ಷಣಿಕ ವಾತಾವರಣ ವಿದ್ಯಾರ್ಥಿಗಳು ಸಕಾರಾತ್ಮಕ ಭಾವನೆಯನ್ನು ಹೊಂದುವಂತಿರಬೇಕು. ಆದಕ್ಕಾಗಿ, ಕಾಲೇಜುಗಳ ಗೇಟ್‌ಗಳಿಗೆ ಕಿತ್ತಳೆ (ಕೇಸರಿ) ಬಣ್ಣ ಬಳಿಯಲು ನಿರ್ಧರಿಸಲಾಗಿದೆ” ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Advertisements

ಈ ಆದೇಶವನ್ನು ಕಾಂಗ್ರೆಸ್ ಟೀಕಿಸಿದೆ. ಈ ಆದೇಶವು ಶಿಕ್ಷಣದ ಕೇಸರಿಕರಣದ ಭಾಗವಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ವಿದ್ಯಾರ್ಥಿ ಘಟಕ, ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ವಿನೋದ ಜಾಖರ್ ಮಾತನಾಡಿ, “ರಾಜ್ಯದಲ್ಲಿ ಸಾವಿರಾರು ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದರೂ ಕಾಲೇಜುಗಳಲ್ಲಿ ಕಟ್ಟಡಗಳಿಲ್ಲ, ಬೆಂಚುಗಳಿಲ್ಲ, ಸರ್ಕಾರ ರಾಜಕೀಯಕ್ಕಾಗಿ ಸಾರ್ವಜನಿಕ ಹಣವನ್ನು ಖರ್ಚು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X