ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

Date:

Advertisements

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು. ಶಾಲೆಯ ಅವ್ಯವಸ್ಥೆಯ ಬಗ್ಗೆ ಕಳೆದ ಡಿಸೆಂಬರ್ 25, 2023ರಂದು ಈದಿನ.ಕಾಮ್ ವರದಿ ಮಾಡಿತ್ತು.

ಜೊತೆಗೆ ನಿರಂತರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ಫಾಲೋಅಪ್ ಮಾಡಿರುವುದರಿಂದ ಶಾಲೆಯ ನವೀಕರಣಕ್ಕೆ ಸರ್ಕಾರವು 1.80 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಬೀಳುವ ಹಂತದಲ್ಲಿರುವ ಹಳೆ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ಈಗಾಗಲೇ ಆರಂಭಿಸಲಾಗಿದೆ.

ಆಳಂದ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯ ಬಾಗಿಲುಗಳು ಕೂಡ ಮುರಿದಿದ್ದವು. ಪರಿಣಾಮ, ತರಗತಿ ನಡೆಯುವ ಕೊಠಡಿಯಲ್ಲಿಯೇ ಅಡುಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೊಸ ಅಡುಗೆ ಕೋಣೆ ನಿರ್ಮಿಸಿಕೊಡಬೇಕೆಂದು ಶಾಲೆಯ ಅಡುಗೆ ಸಿಬ್ಬಂದಿ ಕೂಡ ಬೇಡಿಕೆ ಇಟ್ಟಿದ್ದರು.

Advertisements

“ಶಾಲೆಯಲ್ಲಿ ಮೊದಲೇ ತರಗತಿಗಳಿಗೆ ಅಗತ್ಯವಿರುವಷ್ಟು ಕೊಠಡಿಗಳು ಇಲ್ಲ. ಅಡುಗೆ ಕೋಣೆ ಶಿಥಿಲಗೊಂಡಿದೆ. ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿದ್ದು, ಯಾವಾಗ ಬೇಕಿದ್ದರೂ ಬೀಳುವ ಆತಂಕವಿದೆ. ಅದನ್ನು ಕೆಡವಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಆದರೆ, ಹಳೆಯ ಕಟ್ಟಡದಲ್ಲಿಯೇ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.

“ಕೆಲವು ಕೊಠಡಿಗಳು ಕೂಡ ತರಗತಿ ನಡೆಸಲು ಯೋಗ್ಯವಾಗಿಲ್ಲ. ಸರ್ಕಾರ ಕಟ್ಟಡಗಳ ದುರಸ್ತಿ, ನವೀಕರಣ ಹಾಗೂ ಪ್ರಗತಿಗೆ ಅಗತ್ಯವಾಗಿ ಹೆಚ್ಚಿನ ಒತ್ತು ನೀಡಬೇಕು” ಎಂದು ಆಗ್ರಹಿಸಿದ್ದರು.

“ಶಾಲಾ ಪ್ರಗತಿ, ನಿರ್ವಹಣೆಗೆ ಗ್ರಾಮ ಪಂಚಾಯತಿ ಆಡಳಿತದ ಹೊಂದಾಣಿಕೆಯೊಂದಿಗೆ ಮಕ್ಕಳ ಪೋಷಕರ ಎಸ್‌ಡಿಎಂಸಿ ಸಮಿತಿ ರಚಿಸಿದ್ದರೂ ಶಾಲೆಗಳು ಸಮಸ್ಯೆಯಿಂದ ಬಿಡುಗಡೆಗೊಂಡಿಲ್ಲ. ಅನೇಕ ಶಾಲಾ ಕಟ್ಟಡಗಳು ಸೋರುತ್ತಿವೆ. ಗೋಡೆ ಮೇಲೆ ಮಳೆ ನೀರು ಇಳಿದು ಅಪಾಯದ ಸ್ಥಿತಿಗೆ ತಲುಪಿವೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ಶಾಲೆಯ ಪರಿಸ್ಥಿತಿಯ ಬಗ್ಗೆ ವರದಿ ಮಾಡಿ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಈಗ ಶಾಲೆಯ ಹಳೆ ಕೋಣೆಗಳನ್ನು ಕೆಡವಿ ಹೊಸ ಕೋಣೆಗಳ ನಿರ್ಮಾಣಕ್ಕೆ ಒಂದು ಕೋಟಿ 80 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಅಂತಸ್ತಿನ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ದೇವಸ್ಥಾನದ ಕಾರ್ಯಕ್ರಮದಲ್ಲಿ ‘ವಕ್ಫ್‌’ ವಿಚಾರ: ಶಾಸಕ ಯತ್ನಾಳ್‌ಗೆ ಸಾರ್ವಜನಿಕರಿಂದ ಛೀಮಾರಿ

ಈ ಬಗ್ಗೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಜೂನಿಯರ್ ಇಂಜಿನಿಯರ್ ಪ್ರದೀಪ್ ಪಾಟೀಲ, “ಮೊದಲ ಅಂತಸ್ತಿನಲ್ಲಿ ಆರು ಹಾಗೂ ಕೆಳಗಿನ ಅಂತಸ್ತಿನಲ್ಲಿಯೂ ಆರು ಕೋಣೆಗಳು ನಿರ್ಮಾಣ ಮಾಡುತ್ತಿದ್ದೇವೆ. ಆದಷ್ಟು ಶೀಘ್ರವೇ ಕಾಮಗಾರಿ ಮುಗಿಸಲಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಲೆಯ ಪರಿಸ್ಥಿತಿಯ ಬಗ್ಗೆ ವರದಿ ಮಾಡಿದ್ದಕ್ಕೆ ಈ ದಿನ.ಕಾಮ್‌ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2024 11 08 at 12.18.37 667ed234 e1731048718511
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X