ಜ್ಞಾನವಾಪಿ ಮಸೀದಿ ಪ್ರಕರಣ; ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

Date:

Advertisements

ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗದ ರೀತಿಯಲ್ಲಿರುವ ಆಕೃತಿಯನ್ನು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಬನ್ ಡೇಟಿಂಗ್‌ ಸಹಿತ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ನೀಡಿದ್ದ ಅಲಹಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಪೀಠದ ಮುಂದೆ ಜ್ಞಾನವಾಪಿ ಮಸೀದಿ ವ್ಯವಸ್ಥಾಪಕ ಸಮಿತಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಭಾರತೀಯ ಪುರಾತತ್ವ ಸಮೀಕ್ಷೆ ಅಧಿಕಾರಿಗಳ ಮೂಲಕ ಅದು ಶಿವಲಿಂಗ ಹೌದೋ ಅಲ್ಲವೋ, ಹಾಗೇನಾದರೂ ಶಿವಲಿಂಗವೇ ಆಗಿದ್ದಲ್ಲಿ ಅದು ಎಷ್ಟು ವರ್ಷ ಹಳೆಯದು ಎನ್ನುವ ಮಾಹಿತಿಯನ್ನು ವೈಜ್ಞಾನಿಕ ತನಿಖೆ ಮಾಡಿ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್‌ ಆದೇಶ ನೀಡಿತ್ತು.

ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಯನ್ನು ಅನುಮತಿಸಿದ ಅಲಹಾಬಾದ್ ಹೈಕೋರ್ಟ್ ಆದೇಶದ ಪರಿಣಾಮಗಳಿಂದಾಗಿ, ಆದೇಶದಲ್ಲಿ ಸಂಬಂಧಿಸಿದ ನಿರ್ದೇಶನಗಳ ಅನುಷ್ಠಾನವನ್ನು ಮುಂದಿನ ದಿನಾಂಕದವರೆಗೆ ಮುಂದೂಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಈ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಿದೆ ಎಂದು ಕೋರ್ಟ್ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಚುನಾವಣಾ ಫಲಿತಾಂಶ : ‘ಬಿಜೆಪಿ ಮುಕ್ತ ದಕ್ಷಿಣ ಭಾರತ’ದ ಮುನ್ಸೂಚನೆಯೇ?

ಜ್ಞಾನವಾಪಿ ಮಸೀದಿ ಆವರಣದಲ್ಲಿ ದೊರೆತಿರುವ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ನೊಂದಿಗೆ ವೈಜ್ಞಾನಿಕ ಸರ್ವೆಯನ್ನು ಮಾಡಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ನೀಡಿತ್ತು. ಕಳೆದ ವರ್ಷ ಇಡೀ ಮಸೀದಿಯ ವಿಡಿಯೋಗ್ರಫಿ ಸರ್ವೇ ಮಾಡುವ ವೇಳೆ ಜ್ಞಾನವಾಪಿ ಸಮೀದಿಯ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಇದನ್ನು ಮುಸ್ಲಿಂ ಸಮುದಾಯ ವಜುಕಾನಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದರು. ಸರ್ವೆಯ ವಿಡಿಯೋಗಳನ್ನು ನೋಡಿದ ಬಳಿಕ ಹಿಂದು ಸಮುದಾಯದವರು ಇದು ಶಿವಲಿಂಗ ಎಂದು ಹೇಳಿದ್ದರೆ, ಮುಸ್ಲಿಮರು ಇದನ್ನು ಕಾರಂಜಿ ಎಂದಿದ್ದರು.

ವಜುಕಾನಾ ಎನ್ನುವುದು ಮುಸ್ಲಿಮರು ಮಸೀದಿ ಪ್ರವೇಶಿಸುವ ಮುನ್ನ ಕೈಕಾಲುಗಳನ್ನ ಸ್ವಚ್ಛಗೊಳಿಸುವ ಸ್ಥಳವಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿಯೇ ಇರುವ ಮಸೀದಿಯ ಆವರಣದ ಸಂಪೂರ್ಣ ವಿಡಿಯೋಗ್ರಫಿ ಸರ್ವೇ ಮಾಡಬೇಕು ಎಂದು ಕೋರ್ಟ್‌ ಸೂಚನೆ ನೀಡಿದ ಬಳಿಕ, ಕಳೆದ ವರ್ಷದ ಮೇ 16 ರಂದು ಇಲ್ಲಿ ಶಿವಲಿಂಗ ಇರುವ ಬಗ್ಗೆ ಪತ್ತೆಯಾಗಿತ್ತು.

ಇದಕ್ಕೂ ಮುನ್ನ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಾರಾಣಸಿ ಜಿಲ್ಲಾ ಕೋರ್ಟ್‌, ಕಾರ್ಬನ್‌ ಡೇಟಿಂಗ್‌ ಸೇರಿದಂತೆ ಶಿವಲಿಂಗದ ವೈಜ್ಞಾನಿಕ ತನಿಖೆಯನ್ನು ಮಾಡುವ ಅರ್ಜಿಯನ್ನು ತಿರಸ್ಕರಿಸಿತ್ತು. ಆಗಸ್ಟ್ 2021 ರಲ್ಲಿ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ, ವಾರಾಣಸಿ ನ್ಯಾಯಾಲಯವು ವಕೀಲ ಕಮಿಷನರ್ ಅನ್ನು ನೇಮಿಸಿತು ಮತ್ತು ಸಂಕೀರ್ಣದ ವಿಡಿಯೋಗ್ರಫಿ ಸಮೀಕ್ಷೆಗೆ ಸಹ ಆದೇಶಿಸಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X