ಹಾವೇರಿ | ಹಣ ಹಂಚುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ

Date:

Advertisements

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರನನ್ನು ಓಲೈಸಲು ಕೆಲವು ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸವಣೂರು ಪಟ್ಟಣದ ಸುಭಾಷ್ ಗಡಿಯವರ ಮನೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಲಾಗುತ್ತಿದೆ ಎಂಬ ನಿಖರ ಮಾಹಿತಿ ತಿಳಿದು ಕೆ ಆರ್ ಎಸ್ ಕಾರ್ಯಕರ್ತರು ಅದನ್ನ ವಿಡಿಯೋ ಮಾಡಲು ಹೋಗಿದ್ದಾರೆ.

ಇದನ್ನು ಖಂಡಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರಿಂದ ಕುಪಿತರಾಗಿ ಬಿಜೆಪಿಯ ಕಾರ್ಯಕರ್ತರಾದ ಮಹೇಶ್ ಮುದಗಲ್ ಮತ್ತು ಸಂತೋಷ ಪಾಟೀಲ ಇತರ ಬೆಂಬಲಿಗರೊಂದಿಗೆ ಮಹಿಳೆಯರೆನ್ನದೆ ಹಲವರ ಮೇಲೆ ಹಲ್ಲೆ ಮಾಡಿ, ಗಾಯಗೊಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ಮತ್ತು ಕೆ ಆರ್ ಎಸ್ ನೂರಾರು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ದಬ್ಬಾಳಿಕೆ ದುಡ್ಡು ಹಂಚಿ ಓಟು ಕೊಳ್ಳುವುದನ್ನು ಖಂಡಿಸಿ ಪ್ರತಿಭಟನೆಗಿಳಿದಿದ್ದಾರೆ. ಎಚ್ಚೆತ್ತ ಪೋಲಿಸರು ಲಾಠಿ ಚಾರ್ಜ್ ಮಾಡಿ ಎಲ್ಲರನ್ನೂ ಚದುರಿಸಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ.

Advertisements

ಪ್ರತಿ ಚುನಾವಣೆಯಲ್ಲಿ ಬೊಮ್ಮಾಯಿಯವರ ಬೆಂಬಲಿಗರಾದ ಸುಭಾಷ್ ಗಡಿಯವರ ಮನೆಯಲ್ಲಿಯೇ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ದುಡ್ಡು ಹಂಚಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶೋಭಾ ನಿಸ್ಸೀಮ್‌ಗೌಡ್ರ ಇವರು ಬಿಜೆಪಿ ಬೊಮ್ಮಾಯಿ ಕಚೇರಿಯಿಂದ ಹಣ ಹಂಚುವುದರಲ್ಲಿ ಪ್ರಮುಖ ಪಾತ್ರಧಾರಿ ಎಂದು ತಿಳಿದುಬಂದಿದೆ. ಎಲ್ಲಾ ಸ್ತ್ರೀ ಶಕ್ತಿ ಸಂಘದವರಿಗೂ ಹಣ ಹಂಚಿರುವ ಆರೋಪ ಕೇಳಿಬಂದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X