ಪರಶುರಾಮ ಥೀಮ್ ಪಾರ್ಕ್ ಅಕ್ರಮ | ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

Date:

Advertisements

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಬಂಧನವಾಗಿದ್ದಾರೆ.

ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವುರು ದೂರು ನೀಡಿದ್ದರು. ಕೃಷ್ಣಶೆಟ್ಟಿ ಅವರ ದೂರು ಆಧರಿಸಿ ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ನ್ಯಾಯಾಲಯದಲ್ಲಿ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಿಸಿತ್ತು. ಅಂದಿನಿಂದ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು.

Advertisements

ಏನಿದು ಪ್ರಕರಣ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ‌ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಸಿಎಂ ಬಸವರಾಜ‌ ಬೊಮ್ಮಾಯಿ ಅವರು ಈ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ‌ ಮೂರ್ತಿ ಲೋಕಾರ್ಪಣೆ ಮಾಡಿದ್ದರು. ಬಳಿಕ, ಕೆಲ ದಿನಗಳ ಕಾಲ ಕಾಮಗಾರಿ ಬಾಕಿ ಇದೆ ಎನ್ನುವ ಕಾರಣಕ್ಕೆ ಥೀಂ ಪಾರ್ಕ್‌ಗೆ ಪ್ರವಾಸಿಗರ ನಿಷೇಧ ಹೇರಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ಇದು ಜನರಿಗೆ ಅನುಮಾನ ಬರುವಂತೆ ಮಾಡಿತ್ತು. ಹೀಗಾಗಿ ತನಿಖೆ ನಡೆಸಿದಾಗ ಮೂರ್ತಿ ಅಸಲಿಯತ್ತು ಹೊರಬಿದ್ದಿತ್ತು. ಹಿತ್ತಾಳೆ ಮೂರ್ತಿಯ ಬದಲು ಫೈಬರ್ ಮೂರ್ತಿ ಸ್ಥಾಪನೆ ಮಾಡಲಾಗಿದೆ ಎಂದು ಆರೋಪ ತಿಳಿದು ಬಂದಿತ್ತು. ಇದಾದ ನಂತರ ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿದ್ದ ಪರಶುರಾಮನ ಮೂರ್ತಿ ಏಕಾಏಕಿ ಕಾಣೆಯಾಗಿತ್ತು. ಈ ಕುರಿತು ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಪರಶುರಾಮ್ ಥೀಮ್ ಪಾರ್ಕ್ ಅಕ್ರಮ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಸಿಐಡಿ ತನಿಖೆ ನಡೆಸುತ್ತಿದೆ. ತನಿಖೆಗೆ ಅಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಈಗಾಗಲೇ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಅಮಾನತು ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X