ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

Date:

Advertisements
  • ಭೂ ವಿಜ್ಞಾನ ಸಚಿವರಾಗಿ ಕಿರಣ್‌ ರಿಜಿಜು ಪ್ರಮಾಣ ವಚನ
  • ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ನೇಮಕ

ಕಿರಣ್‌ ರಿಜಿಜು ಅವರು ತಮ್ಮ ಕಾನೂನು ಖಾತೆ ಬದಲಾವಣೆ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಖಾತೆ ಬದಲಾವಣೆ ಮಾಡಿರುವುದು ಶಿಕ್ಷೆಯಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಭಾಗವಾಗಿದೆ” ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಹೇಳಿದ್ದಾರೆ.

ಸಂಪುಟದಲ್ಲಿ ಮಾಡಿದ ಪ್ರಮುಖ ಬದಲಾವಣೆ ಸಮಯದಲ್ಲಿ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಬದಲಾಯಿಸಲ್ಪಟ್ಟ ಒಂದು ದಿನದ ನಂತರ ಕಿರಣ್‌ ರಿಜಿಜು ಅವರು ದೆಹಲಿಯ ಲೋಧಿ ರಸ್ತೆಯಲ್ಲಿರುವ ಪೃಥ್ವಿ ಭವನದಲ್ಲಿ ಶುಕ್ರವಾರ (ಮೇ 19) ಬೆಳಗ್ಗೆ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

Advertisements

ಖಾತೆಯ ಬದಲಾವಣೆ ಸರ್ಕಾರದ ಕಾರ್ಯವಿಧಾನ ವಾಡಿಕೆಯ ಪ್ರಕ್ರಿಯೆಯಾಗಿದೆ ಎಂದು ರಿಜಿಜು ಉಲ್ಲೇಖಿಸಿದರು.

“ಇದು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಒಂದು ಭಾಗವೇ ಹೊರತು ನನಗೆ ನೀಡಿರುವ ಶಿಕ್ಷೆಯಲ್ಲ” ಎಂದು ಕಿರಣ್‌ ರಿಜಿಜು ಅವರು ಸ್ಪಷ್ಟಪಡಿಸಿದರು.

“ಖಾತೆ ಬದಲಾವಣೆಯು ವಾಡಿಕೆಯ ಪ್ರಕ್ರಿಯೆಯಾಗಿದೆ. ಯಾರಾದರೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ. ಪ್ರತಿಪಕ್ಷಗಳು ನನ್ನ ವಿರುದ್ಧ ಮಾತನಾಡುತ್ತವೆ. ನನಗೆ ಇದು ಹೊಸತಲ್ಲ” ಎಂದು ರಿಜಿಜು ಸುದ್ದಿಗಾರರಿಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ನೂತನ ಸಂಸತ್ ಭವನ | ಪ್ರಧಾನಿ ಮೋದಿಯಿಂದ ಮೇ 28ಕ್ಕೆ ಲೋಕಾರ್ಪಣೆ

ನೂತನ ಕೇಂದ್ರ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಿಸಲಾಯಿತು. ಕಿರಣ್‌ ರಿಜಿಜು ಅವರನ್ನು ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮುಂಚಿತವಾಗಿ ಗುರುವಾರ ನಡೆದ ಹಠಾತ್ ಸಂಪುಟ ಬದಲಾವಣೆಯಲ್ಲಿ ಬದಲಾಯಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X