ಅದಾನಿ ಸಮೂಹಕ್ಕೆ ಕ್ಲೀನ್‌ಚಿಟ್‌ ನೀಡಿದ ಸುಪ್ರೀಂ ಕೋರ್ಟ್ ಸಮಿತಿ

Date:

Advertisements

ಹಿಂಡನ್‌ಬರ್ಗ್ ಆರೋಪಗಳ ನಂತರ ಅದಾನಿ ಸಮೂಹದ ಷೇರುಗಳು ಕುಸಿತ ಕಂಡ ಬಗ್ಗೆ ತನಿಖೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಮೇಲ್ನೋಟಕ್ಕೆ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ನೀಡಿದೆ. ಅಲ್ಲದೆ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಕಡೆಯಿಂದಲೂ ಯಾವುದೇ ನಿಯಂತ್ರಣ ವೈಫಲ್ಯವೂ ಕಂಡುಬಂದಿಲ್ಲ ಎಂದು ಸಮಿತಿ ತಿಳಿಸಿದೆ.

ಅದಾನಿ ಸಮೂಹವು ಯಾವುದೇ ರೀತಿಯಲ್ಲೂ ಷೇರುಗಳ ಬೆಲೆಗಳನ್ನು ತಿರುಚಿಲ್ಲ. ಹಾಗೂ ಚಿಲ್ಲರೆ ಹೂಡಿಕೆದಾರರ ಹಿತ ಕಾಪಾಡಲು ಸಂಘಟಿತ ಸಂಸ್ಥೆಯು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ವಿವಿಧ ವಲಯಗಳ ತಜ್ಞರ ಸುಪ್ರೀಂ ಕೋರ್ಟ್ ಸಮಿತಿ ಹೇಳಿದೆ.

ಷೇರುಗಳು ಈಗ ಸ್ಥಿರವಾಗಿದ್ದು, ಕಂಪನಿಯು ತೆಗೆದುಕೊಂಡ ಕ್ರಮಗಳು ಷೇರಿನ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದೂ ತಿಳಿಸಿದೆ.

Advertisements

ಕನಿಷ್ಠ ಸಾರ್ವಜನಿಕ ಷೇರು ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಯಾವುದೇ ನಿಯಂತ್ರಕ ವೈಫಲ್ಯ ಕಂಡುಬಂದಿಲ್ಲ ಹಾಗೂ ಅನುಸರಣೆಗಳ ಉಲ್ಲಂಘನೆಯೂ ಆಗಿಲ್ಲ. ತನ್ನ ಅನುಮಾನವನ್ನು, ಕಾನೂನು ಉಲ್ಲಂಘನೆಯ ಆರೋಪವಾಗಿ ವಿಚಾರಣೆಗೆ ಒಳಪಡಿಸುವ ದೃಢವಾದ ಪ್ರಕರಣವಾಗಿ ಬದಲಾಯಿಸಬಹುದು ಎಂಬುದನ್ನು ಸಾಬೀತುಪಡಿಸಲು ನಿಯಂತ್ರಕರಿಗೆ ಸಾಧ್ಯವಾಗಲಿಲ್ಲ. ಅದಾನಿ ಸಮೂಹದ ಷೇರುಗಳಲ್ಲಿನ ವಿದೇಶಿ ಬಂಡವಾಳ ಹೂಡಿಕೆದಾರರು ಸೆಬಿಯ ನಿಯಮಗಳಿಗೆ ಬದ್ಧರಾಗಿದ್ದಾರೆ ಎಂಬುದಾಗಿಯೂ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ ಪ್ರಕರಣ; ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ವರದಿಯ ಹಿನ್ನೆಲೆ ಅದಾನಿ ಷೇರುಗಳಲ್ಲಿನ ಬೆಲೆ ತಿರುಚುವಿಕೆಯ ಬಗ್ಗೆ ಪರಿಶೀಲಿಸಲು ಸೆಬಿಗೆ ಸೂಚಿಸಲಾಗಿತ್ತು. ಇದರ ಬಗ್ಗೆ ಸೆಬಿ ತನಿಖೆ ನಡೆಸುತ್ತಿದ್ದು, ಸಮಿತಿಯು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.

ಅಲ್ಲದೆ, ಸಮಿತಿಯ ವರದಿಯು ಶಾಸಕಾಂಗದ ಭಾಗದ ನಿಯಂತ್ರಕ ವೈಫಲ್ಯದ ಪತ್ತೆಗೆ ಬರುವುದು ಕಷ್ಟ. ಆದರೆ ಪರಿಣಾಮಕಾರಿ ಜಾರಿ ನೀತಿಯ ಅವಶ್ಯಕತೆ ಇದೆ. ಆದ್ದರಿಂದ, ಜಾರಿ ನೀತಿಯು ಸೆಬಿ ಅಳವಡಿಸಿಕೊಂಡ ಶಾಸಕಾಂಗ ನೀತಿಗೆ ಅನುಗುಣವಾಗಿರಬೇಕು ಎಂದು ಸುಪ್ರೀಂ ಕೋರ್ಟ್‌ ಸಮಿತಿಯ ವರದಿ ಸಲಹೆ ನೀಡಿದೆ.

ಕೆಲವು ದಿನಗಳ ಹಿಂದೆ, ಅದಾನಿ ಸಮೂಹದ ವಿರುದ್ಧ ಅಮೆರಿಕದ ಶಾರ್ಟ್‌ ಸೆಲ್ಲರ್ಸ್‌ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್ ಮಾಡಿದ ಕಂಪನಿಗಳು ಷೇರು ಬೆಲೆಗಳನ್ನು ತಿರುಚುತ್ತಿದೆ ಎಂಬ ಕುರಿತ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್, ಮಾರುಕಟ್ಟೆ ನಿಯಂತ್ರಕ ಸೆಬಿಗೆ ಆಗಸ್ಟ್ 14, 2023 ರವರೆಗೆ ಮೂರು ತಿಂಗಳ ಸಮಯ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X