ಸಮಾಜದ ಗೌರವಕ್ಕಾಗಿ ದೇವೇಗೌಡರ ಅಪಮಾನ ಸಹಿಸಿಕೊಂಡಿದ್ದೇವೆ: ಮಾಜಿ ಸಂಸದ ಡಿ ಕೆ ಸುರೇಶ್‌

Date:

Advertisements

ದೇವೇಗೌಡರು ಬಾಲಗಂಗಾಧರನಾಥ ಸ್ವಾಮೀಜಿಗಳನ್ನೇ ಬಿಡಲಿಲ್ಲ, ಇನ್ನು ಈ ಸಮಾಜದ ಬೇರೆಯವರನ್ನು ಬಿಡುತ್ತಾರಾ. ಜೆಡಿಎಸ್ ಕಾರ್ಯಕರ್ತರೇ ಜಾತಿ ವ್ಯಾಮೋಹಕ್ಕೆ ಹೋಗಬೇಡಿ. ಯೋಗೇಶ್ವರ್ ಕೂಡ ಒಕ್ಕಲಿಗನೇ. ನಾನು ಒಕ್ಕಲಿಗನೇ. ಬಾಲಕೃಷ್ಣ ಅವರೂ ಒಕ್ಕಲಿಗರೇ. ದೇವೇಗೌಡರು, ಕುಮಾರಸ್ವಾಮಿ ಅವರು ನಮ್ಮನ್ನು ಕಳ್ಳರು, ಸುಳ್ಳರು ಎಂದು ಹೇಳುತ್ತಿದ್ದಾರೆ. ನಾವು ಅವರ ಅಪಮಾನವನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ. ಆದರೆ ಈ ಸಮಾಜದ ಗೌರವಕ್ಕಾಗಿ ನನ್ನ ಮಾತನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡಿದ್ದೇವೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್‌ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡಮಳೂರಿನಲ್ಲಿ ಸೋಮವಾರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಡಿ.ಕೆ. ಸುರೇಶ್ ಅವರು ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಮತಯಾಚಿಸಿದರು.

“ಚನ್ನಪಟ್ಟಣ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸೇವೆ ಮಾಡುತ್ತೇವೆ” ಎಂದರು.

Advertisements

“ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಕ್ಷೇತ್ರದ ಜನರ ಕಷ್ಟ ಕೇಳಲು ಒಂದೇ ಒಂದು ದಿನ ಬರಲಿಲ್ಲ. ಜನರ ಕಷ್ಟ ಕೇಳುವುದಿರಲಿ, ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಲಿಲ್ಲ. ಅವರು ಸಿಎಂ ಆಗಿದ್ದಾಗ ನಿಮ್ಮ ಕಷ್ಟ ಆಲಿಸಿದ್ದಾರಾ ಎಂದು ಆತ್ಮಸಾಕ್ಷಿಯಿಂದ ಹೇಳಿ ಎಂದು ಆ ಕಾರ್ಯಕರ್ತರಲ್ಲಿ ಕೇಳಲು ಬಯಸುತ್ತೇನೆ. ಅವರ ಬಗ್ಗೆ ನಿಮಗೆ ಇಷ್ಟು ಅಂಧ ಅಭಿಮಾನ ಯಾಕೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುತ್ತಿರುವ ದೇವೇಗೌಡರು, ಪ್ರಜ್ವಲ್ ಕೃತ್ಯ ಖಂಡಿಸುವುದಿಲ್ಲವೇಕೆ?

“ಈ ಉಪಚುನಾವಣೆಗೆ ಬಂದಿರುವ ಕುಮಾರಸ್ವಾಮಿ ಅವರು ಎಲ್ಲಾದರೂ ಈ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರಾ? ಅವರಿಗೆ ಕನಸಲ್ಲೆಲ್ಲಾ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಯೋಗೇಶ್ವರ್, ಸಿದ್ದರಾಮಯ್ಯ ಅವರದ್ದೇ ಕನವರಿಕೆ. ಇವರ ಹೊರತಾಗಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದಾರಾ? ಯೋಗೇಶ್ವರ್ ಈ ತಾಲೂಕಿಗೆ ನೀರು ನೀಡಿದ್ದಾರೆ. ನಾವು ಈ ತಾಲೂಕಿಗೆ ವಿದ್ಯುತ್ ನೀಡಿದ್ದೇವೆ, ಗ್ಯಾರಂಟಿ ಯೋಜನೆ ನೀಡಿದ್ದೇವೆ ಎಂದು ಮತ ಕೇಳುತ್ತಿದ್ದೇವೆ” ಎಂದರು.

“ದೇವೇಗೌಡರೇ ನಾನು ಯಾವ ವಿಚಾರ ಮಾತನಾಡಲಿ, ನನಗೆ ಹೃದಯ ಇದೇಯೇ? ಇಲ್ಲವಲ್ಲ? ಕಣ್ಣೀರು ಹಾಕುವವರಿಗೆ ಹೃದಯ ಇರಬೇಕು ಎಂದಿದ್ದೀರಿ. ನಿಮ್ಮ ಹೃದಯ ಯಾವಾಗ ಕೆಲಸ ಮಾಡಬೇಕಿತ್ತು ಗೊತ್ತಾ? ನಿಮ್ಮನ್ನು ಸಾಕಿ ಸಲುಹಿ ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಧಾನಮಂತ್ರಿ ಸ್ಥಾನದವರೆಗೂ ಬೆಳೆಸಿದರಲ್ಲಾ ಅಂತಹ ತಾಯಂದಿರ ಮಾನವನ್ನು ನಿಮ್ಮ ಮೊಮ್ಮಕ್ಕಳು ಹಾರಾಜು ಹಾಕುವಾಗ ಕಣ್ಣೀರು ಹಾಕಬೇಕಿತ್ತು. ನನ್ನ ಮೊಮ್ಮಕ್ಕಳು ತಪ್ಪು ಮಾಡಿದ್ದಾರೆ. ನನ್ನನ್ನು ಕ್ಷಮಿಸಿ ಎಂದು ಕೇಳಬೇಕಿತ್ತು. ಆಗ ನಿಮ್ಮ ಆತ್ಮಗೌರವ ಉಳಿದು, ಘನತೆ ಹೆಚ್ಚುತ್ತಿತ್ತು” ಎಂದು ಕುಟುಕಿದರು.

“ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ನಿಮ್ಮ ಸೇವೆ ಮಾಡಲು ಶಕ್ತಿ ನೀಡಿ. ನಾವೆಲ್ಲರೂ ಈ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಿ ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇವೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ 500 ಕೋಟಿ ವಿಶೇಷ ಅನುದಾನ ತಂದು ಅಭಿವೃದ್ಧಿ ಕೆಲಸ ಆರಂಭಿಸಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X