₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

Date:

Advertisements

ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಳ್ಳುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲ ಸೆಪ್ಟೆಂಬರ್ 30, 2023ರವರೆಗೆ ₹ 2000 ಬ್ಯಾಂಕ್‌ ನೋಟುಗಳಿಗೆ ಠೇವಣಿ ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳ ಚಲಾವಣೆ ಸ್ಥಗಿತಗೊಳ್ಳಲಿದೆ. ಮೇ 23ರಿಂದ ವಿನಿಮಯ ಆರಂಭಗೊಳ್ಳಲಿದ್ದು,ಸೆ.30 ಕೊನೆದಿನವಾಗಿದೆ.

“₹2000 ಮುಖಬೆಲೆಯ ಬ್ಯಾಂಕ್‌ ನೋಟುಗಳಲ್ಲಿ ಸುಮಾರು ಶೇ 89 ಅನ್ನು ಮಾರ್ಚ್ 2017ಕ್ಕಿಂತ ಮೊದಲು ಚಲಾವಣೆಗೆ ತರಲಾಯಿತು ಮತ್ತು ಅವುಗಳ ಅಂದಾಜು ಜೀವಿತಾವಧಿ 4 ರಿಂದ 5 ವರ್ಷಗಳು. ಚಲಾವಣೆಯಲ್ಲಿರುವ ಈ ಬ್ಯಾಂಕ್‌ ನೋಟುಗಳ ಒಟ್ಟು ಮೌಲ್ಯವು ಮಾರ್ಚ್ 31, 2018ಕ್ಕೆ (ಚಲಾವಣೆಯಲ್ಲಿರುವ ನೋಟುಗಳ ಶೇ 37.3) ಗರಿಷ್ಠ ₹ 6.73 ಲಕ್ಷ ಕೋಟಿಗಳಿಂದ ₹ 3.62 ಲಕ್ಷ ಕೋಟಿಗೆ ಇಳಿದಿದೆ. ಮಾರ್ಚ್ 31, 2023 ರಂದು ಚಲಾವಣೆಯಲ್ಲಿರುವ ನೋಟುಗಳು ಕೇವಲ 10.8% ರಷ್ಟಿದೆ ಎಂದು ಆರ್‌ಬಿಐ ತಿಳಿಸಿದೆ.

Advertisements

ಈ ವಿಚಾರವಾಗಿ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಹೇಳಿದೆ. ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.

500 ಮತ್ತು 1000 ರೂಪಾಯಿಗಳ ನೋಟುಗಳ ಅಮಾನ್ಯೀಕರಣದ ನಂತರ 8 ನವೆಂಬರ್ 2016 ರಂದು 2000-ರೂಪಾಯಿ ನೋಟುಗಳನ್ನು ಆರ್‌ಬಿಐ ಬಿಡುಗಡೆ ಮಾಡಿತು. ಇದು 10 ನವೆಂಬರ್ 2016 ರಿಂದ ಚಲಾವಣೆಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X