ಧಾರವಾಡ | ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು: ಬಿ.ಎಫ್.ಹೊಸಮನಿ

Date:

Advertisements

ಸಾರ್ವಜನಿಕರಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಉಚಿತ ಕಾನೂನು ನೆರವು ಮತ್ತು ಸಲಹೆಯನ್ನು ನೀಡುತ್ತದೆ.‌ ಹೀಗಾಗಿ ವಿದ್ಯಾರ್ಥಿಗಳು ಕಾನೂನು ಸೇವೆಗಳ ಉಪಯೋಗ ಪಡೆಯಬೇಕು ಎಂದು ಕಾನೂನು ಸೇವೆಗಳ ಪೆನಲ್ ವಕೀಲೆ ಬಿ ಎಫ್ ಹೊಸಮನಿ ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಮತದಾರರ ಸಾಕ್ಷರತಾ ಕ್ಲಬ್, ರಾಜ್ಯಶಾಸ್ತ್ರ ವಿಭಾಗ, ದಿನಗಳ ದಿನಾಚರಣೆ ಮತ್ತು ಎನ್ಎಸ್ಎಸ್ ಘಟಕಗಳ ಸಂಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸಂಸ್ಕೃತಿ ಮತ್ತು ದೇಶವನ್ನು ಬಲಿಷ್ಠ ಗೊಳಿಸಲು ನಾವು ಮುಂದಾಗಬೇಕಿದೆ. ಸಾಧ್ಯವಾದಷ್ಟು ವ್ಯಾಜ್ಯಗಳನ್ನು ಬಗೆಹರಿಸಿಕೊಂಡು ಸಂತೋಷದಿಂದ ಜೀವನ ಮಾಡಬೇಕು ಎಂದರು.

ಡಾ. ಆಸ್ಮಾ ನಾಜ್ ಬಳ್ಳಾರಿ ಅಧ್ಯಕ್ಷತೆಯ ಸಮಾರೋಪವಾಗಿ ಮಾತನಾಡಿ, ಉಚಿತ ಕಾನೂನು ಸಲಹೆ, ರಾಜಿ ಸಂಧಾನ, ಜನತಾ ನ್ಯಾಯಾಲಯ, ವಾಜ್ಯಪೂರ್ವ ಸಮಸ್ಯೆಗಳ ಪರಿಹಾರ, ಕಾನೂನು ಸಾಕ್ಷರತೆ ಸೇವೆಗಳನ್ನು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶಗಳು ಆಗಿವೆ. ಇದರ ಲಾಭವನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು ಎಂದು ಹೇಳಿದರು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ತಿಪ್ಪೆತೊಟ್ಟಿಯಂತಾದ ಇಂದಿರಾ ಗಾಜಿನ ಮನೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕಾರ್ಯಕ್ರಮದಲ್ಲಿ ಡಾ. ಏನ್ ಬಿ. ನಾಲತವಾಡ, ಡಾ. ನಾಗರಾಜ್ ಗುದಗನವರ, ಡಾ. ತಾಜುನ್ನಿಸ್ಸಾ, ಉಪಸ್ಥಿತರಿದ್ದರು. ಅತಿಥಿಗಳನ್ನು ಪ್ರೊ. ನಾಗರಾಜ ಕನಕಣಿ ಸ್ವಾಗತಿಸಿದರು. ಡಾ. ಸೌಭಾಗ್ಯ ಜಾದವ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X