ಐಪಿಎಲ್ 2023 | ಪಂಜಾಬ್‌ ಕಿಂಗ್ಸ್ – ಆರ್‌ಆರ್‌; ಪ್ಲೇ ಆಫ್‌ ಪ್ರವೇಶಕ್ಕೆ ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

Date:

Advertisements

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣಸಾಡಲಿವೆ. ಎರಡೂ ತಂಡಗಳಿಗೂ ಇದು ಲೀಗ್‌ ಹಂತದಲ್ಲಿ ಕೊನೆಯ ಪಂದ್ಯವಾಗಿದ್ದು ಪ್ಲೇಆಫ್ ಪ್ರವೇಶಕ್ಕೆ ಉಭಯ ತಂಡಗಳು ಗೆಲುವು ಸಾಧಿಸುವ ಅಗತ್ಯವಿದೆ.

ಪಂದ್ಯ ಆರಂಭಗೊಂಡಿದ್ದು ಟಾಸ್‌ ಗೆದ್ದ ಆರ್‌ಆರ್‌ ಫೀಲ್ಡಿಂಗ್‌ ಆಯ್ದುಕೊಂಡಿದೆ. ಪಂಜಾಬ್‌ ಕಿಂಗ್ಸ್ ಬ್ಯಾಟಿಂಗ್‌ ಆರಂಭಿಸಿದ್ದು 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 45 ರನ್‌ ಗಳಿಸಿದೆ.

ಪಂಜಾಬ್‌ ಹಾಗೂ ರಾಜಸ್ಥಾನ್ ತಲಾ 6 ಪಂದ್ಯಗಳನ್ನು ಗೆದ್ದು, 7ರಲ್ಲಿ ಸೋಲು ಕಂಡಿವೆ. ಆದರೆ ನಿವ್ವಳ ರನ್‌ರೇಟ್‌ನಲ್ಲಿ ಉತ್ತಮ ಸ್ಥಿತಿಯಲ್ಲಿರುವ ಆರ್‌ಆರ್‌ ಗೆಲುವು ಸಾಧಿಸಿದರೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಪಂಜಾಬ್‌ ಕಿಂಗ್ಸ್ ಕೂಡ ಅಂಕಪಟ್ಟಿಯ ಮೊದಲ ನಾಲ್ಕರ ಪಟ್ಟಿಯಲ್ಲಿ ಸ್ಥಾನ ಪಡೆಯಬೇಕೆಂದರೆ ಭಾರಿ ಅಂತರದಲ್ಲಿ ಜಯಗಳಿಸಬೇಕಿದೆ. ಇನ್ನೊಂದು ಪ್ರಮುಖ ಅಂಶವೆಂದರೆ ಎರಡೂ ತಂಡಗಳಲ್ಲಿ ಯಾರೇ ಗೆದ್ದರೂ ನಂತರದ ಪಂದ್ಯಗಳಲ್ಲಿ ಬರುವ ಫಲಿತಾಂಶದ ರನ್‌ರೇಟ್‌ ಲೆಕ್ಕಾಚಾರದವರೆಗೂ ಕಾಯುವುದು ಅನಿವಾರ್ಯವಾಗಿದೆ.

Advertisements

ಈ ಬಾರಿಯ ಟೂರ್ನಿಯ ಒಂದು ಮುಖಾಮುಖಿಯ ಪಂದ್ಯವೂ ಸೇರಿದಂತೆ ಎರಡೂ ತಂಡಗಳು ಇಲ್ಲಿಯವರೆಗೂ ಒಟ್ಟು 25 ಐಪಿಎಲ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರಾಜಸ್ಥಾನ್ 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 11 ಪಂದ್ಯಗಳಲ್ಲಿ ಜಯಗಳಿಸಿದೆ. ಎರಡೂ ತಂಡಗಳಿಗೂ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದೆ.

ಈ ಸುದ್ದಿ ಓದಿದ್ದೀರಾ? ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

ರಾಜಸ್ಥಾನ ತಂಡದ ಬ್ಯಾಟಿಂಗ್​ ಶಕ್ತಿ ಎನಿಸಿರುವ ಯಶಸ್ವಿ ಜೈಸ್ವಾಲ್​ ಅವರೇ ತಂಡಕ್ಕೆ ಆಧಾರವಾಗಿದ್ದಾರೆ. ತಂಡದಿಂದ ಗರಿಷ್ಠ ಮೊತ್ತ ಗಳಿಸಿರುವ ಆಟಗಾರ ಆಗಿದ್ದಾರೆ. ಜೋಸ್​ ಬಟ್ಲರ್, ಸಂಜು ಸ್ಯಾಮ್ಸನ್ ಆಗಾಗ್ಗೆ ಅಬ್ಬರಿಸಿದರೆ, ಉಳಿದವರಿಂದ ಅಂತಹ ಪ್ರದರ್ಶನವೂ ಬಂದಿಲ್ಲ. ಬೌಲಿಂಗ್‌ನಲ್ಲಿ​ ಚಹಲ್ ಹೊರತುಪಡಿಸಿ ಇತರೆ ಬೌಲರ್​ಗಳು ವಿಕೆಟ್​ ಪಡೆಯಲು ಪರದಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪಂಜಾಬ್​ ತಂಡದಲ್ಲೂ ಲಿಯಾಮ್​ ಲಿವಿಂಗ್​ಸ್ಟೋನ್​ ಹೊರತುಪಡಿಸಿ ಯಾರೂ ಅಬ್ಬರಿಸುತ್ತಿಲ್ಲ. ಬೌಲಿಂಗ್​​ ವಿಭಾಗವೂ ಅತ್ಯಂತ ಕಳಪೆಯಾಗಿದೆ.

ಪಿಚ್ರಿಪೋರ್ಟ್

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನವು ಬ್ಯಾಟಿಂಗ್ ಸ್ನೇಹಿಯಾಗಿದೆ. ಬ್ಯಾಟರ್​​ಗಳು ಉತ್ತಮವಾಗಿ ರನ್ ಗಳಿಸಲಿದ್ದಾರೆ. ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೂ ಕೊಂಚ ಮಟ್ಟಿಗೆ ನೆರವಾಗಲಿದೆ.

ಪಂಜಾಬ್ಕಿಂಗ್ಸ್​​ ತಂಡ

ಶಿಖರ್ ಧವನ್ (ನಾಯಕ), ಪ್ರಭಾ ಸಿಮ್ರಾನ್ ಸಿಂಗ್, ಅತರ್ವ ತೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್​ ಕೀಪರ್), ಸ್ಯಾಮ್ ಕರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗ್ಗಿಸೋ ರಬಾಡ, ಆರ್ಷ್‌ದೀಪ್ ಸಿಂಗ್.

ರಾಜಸ್ಥಾನ್ರಾಯಲ್ಸ್ತಂಡ

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ, ವಿಕೆಟ್​ ಕೀಪರ್​), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ನವದೀಪ್‌ ಸೈನಿ, ಯುಜ್ವೇಂದ್ರ ಚಹಲ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X