ಚಾಂಪಿಯನ್ಸ್ ಟ್ರೋಫಿಗೆ ತಂಡ ಕಳುಹಿಸಲು ಭಾರತ ನಕಾರ; ಸ್ಪಷ್ಟನೆ ಕೇಳಲು ಪಾಕಿಸ್ತಾನ ನಿರ್ಧಾರ

Date:

Advertisements

ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನಕ್ಕೆ ಭಾರತದ ತಂಡ ಕಳುಹಿಸಲು ಬಿಸಿಸಿಐ ನಿರಾಕರಿಸಿದೆ. ಇದಾದ ಬೆನ್ನಲ್ಲೇ ಈ ಬಗ್ಗೆ ಐಸಿಸಿಯಿಂದ ಸ್ಪಷ್ಟತೆಯನ್ನು ಕೇಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ನಿರ್ಧರಿಸಿದೆ ವರದಿ ವರದಿಯಾಗಿದೆ.

ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸದಿರುವ ಬಗ್ಗೆ ಬಿಸಿಸಿಐ ಐಸಿಸಿಗೆ ತಿಳಿಸಿದೆ. ಅದಾದ ಬಳಿಕ ಐಸಿಸಿ ಈ ಬಗ್ಗೆ ಪಿಸಿಬಿಗೆ ಮಾಹಿತಿ ನೀಡಿದೆ.

ಇನ್ನು “ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ನಡೆಸುವ ಬಗ್ಗೆ ಸದ್ಯಕ್ಕೆ ಯಾವುದೇ ಮಾತುಕತೆ ಇಲ್ಲ” ಎಂದು ಪಿಸಿಬಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಟಿ20 ಕ್ರಿಕೆಟ್ ಸರಣಿ | ಹೊಸ ಆಟಗಾರರಿಗೊಂದು ಉತ್ತಮ ಅವಕಾಶ

ಕಳೆದ ವರ್ಷ ಏಷ್ಯಾಕಪ್‌ನಲ್ಲಿ ಹೈಬ್ರಿಡ್ ಮಾದರಿಯನ್ನು ಅನುಸರಿಸಲಾಗಿದೆ. ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದೆ. ಇತರ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದಿದೆ. ಆದರೆ ಈ ಬಾರಿ ಹೈಬ್ರಿಡ್ ಮಾದರಿಯನ್ನು ನಡೆಸುವ ಬಗ್ಗೆ ಪಿಸಿಬಿ ಮಾತುಕತೆ ನಡೆಸಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್ ಟ್ರೋಫಿಗೆ ತಂಡ ಕಳುಹಿಸಲು ಭಾರತ ನಿರಾಕಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತದ ಪಂದ್ಯಗಳಿಗೆ ದುಬೈ ಆತಿಥ್ಯ ವಹಿಸಬಹುದು ಎಂದು ಊಹಿಸಲಾಗಿದೆ. “ಐಸಿಸಿಗೆ ಅದರ ಕಾನೂನು ವಿಭಾಗದ ಸಲಹೆಯೊಂದಿಗೆ ಇಮೇಲ್ ಕಳುಹಿಸಲಾಗುವುದು. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಭಾರತದ ನಿರ್ಧಾರದ ಬಗ್ಗೆ ಐಸಿಸಿಯಿಂದ ಸ್ಪಷ್ಟೀಕರಣಗಳನ್ನು ಬಯಸಿದೆ” ಎಂದು ವರದಿಯಾಗಿದೆ.

2008ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಎರಡೂ ತಂಡಗಳು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಪರಸ್ಪರ ಸ್ಪರ್ಧಿಸುತ್ತವೆ. ಆದರೆ ಬೇರೆ ದೇಶದಲ್ಲಿ ಈ ಸ್ಪರ್ಧೆಯನ್ನು ನಡೆಸಲಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X