ಬೀದರ್‌ | ಆಸ್ತಿಗಾಗಿ ನಡೆದ ಕೊಲೆಗೆ ಕೋಮು ಬಣ್ಣ ಬಳಿದ ಗೋದಿ ಮಾಧ್ಯಮಗಳು!

Date:

Advertisements

ಆಸ್ತಿಗಾಗಿ ನಡೆದಿದ್ದ ಕೊಲೆಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮೂವರು ಮಕ್ಕಳು ಸೇರಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯದ ಕೆಲವೊಂದು ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿರುವುದು ವರದಿಯಾಗಿದೆ.

ಬೀದ‌ರ್ ತಾಲೂಕಿನ ಮನ್ನಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾತೋಳಿ ಗ್ರಾಮದಲ್ಲಿ ನ.8ರಂದು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಿವುಡ ಹಾಗೂ ಮೂಕ ವ್ಯಕ್ತಿ ಬಸವರಾಜ ನರಸಪ್ಪ ಶೇರಿಕಾರ್ (52) ಎಂಬವರನ್ನು ಆತನ ಪತ್ನಿ ಮತ್ತು ಮೂವರು ಮಕ್ಕಳು ಸೇರಿ ಮನೆಯಲ್ಲಿ ಕೈ ಕಾಲು ಕಟ್ಟಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿತ್ತು.

ಈ ಕೊಲೆಗೆ ಕೋಮುಬಣ್ಣ ಬಳಿಯುವ ಉದ್ದೇಶದಿಂದ ಕೆಲವು ಖಾಸಗಿ ಸುದ್ದಿ ಮಾಧ್ಯಮಗಳು ಮತಾಂತರಕ್ಕೆ ಒಪ್ಪದಿದ್ದಕ್ಕೆ ಮೂಗ ತಂದೆಯನ್ನೇ ಕೊಲೆ ಮಾಡಲಾಗಿದೆ ಎಂದು ವಿವಿಧ ಶೀರ್ಷಿಕೆಯಡಿ ಸುಳ್ಳು ಸುದ್ದಿ ಪ್ರಕಟಿಸಿದವು ಎನ್ನಲಾಗಿದೆ.

Advertisements

ನ.8 ರಂದು ಬೆಳಗ್ಗೆ ಬಸವರಾಜ್ ನರಸಪ್ಪ ಮನೆಗೆ ಹೋಗಿದ್ದಾಗ ಮನೆಯರ ಮಾತು ಕೇಳದ ಕಾರಣಕ್ಕಾಗಿ ಪತ್ನಿ ಅಡೇಮಾ (45) ಪುತ್ರರಾದ ಪ್ರಭಾಕರ್ (25), ಹಣಮಂತ್ (22) ಹಾಗೂ ಪುತ್ರಿ ರತ್ನಮ್ಮಾ (28) ಮನೆಯ ಕೋಣೆಯಲ್ಲಿ ಆತನ ಕೈ ಕಾಲು ಕಟ್ಟಿಹಾಕಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ವ್ಯಕ್ತಿಯ ಸಹೋದರ ಮಲ್ಲಿಕಾರ್ಜುನ್ ನರಸಪ್ಪಅವರು ಮನ್ನಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಕುರಿತು ಸತ್ಯಶೋಧನೆಗಾಗಿ ʼಈದಿನ.ಕಾಮ್‌ʼ ಮೀಡಿಯಾ ತಂಡ ಘಟನೆ ಜರುಗಿದ ಸಾತೋಳಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಾಗ ಇದು ಮತಾಂತರಕ್ಕೆ ಸಂಬಂಧಿಸಿದ ಕೊಲೆ ಅಲ್ಲ ಎಂದು ತಿಳಿದು ಬಂದಿದೆ.

ಕೌಟುಂಬಿಕ ಆಸ್ತಿ ವಿಚಾರಕ್ಕಾಗಿ ನಡೆದ ಕೊಲೆಯನ್ನು ಕೆಲವು ಮಾಧ್ಯಮಗಳು ಮತಾಂತರಕ್ಕೆ ಒಪ್ಪದ ಕೊಲೆ ಎಂದು ಬಿಂಬಿಸಿ ಸುಳ್ಳು ಸುದ್ದಿ ವರದಿ ಮಾಡಿ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರು ಪಡಿಸಿದ್ದೇವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X