2 ಸಾವಿರ ನೋಟು ಹಿಂತೆಗೆತ : ಮೋದಿಯ ತುಘಲಕ್ ದರ್ಬಾರ್ ಎಂದ ಜೈರಾಮ್‌ ರಮೇಶ್

Date:

Advertisements
  • ಟ್ವೀಟ್‌ ಮೂಲಕ ಜೈರಾಮ್‌ ರಮೇಶ್‌ ಟೀಕೆ
  • 2016ರಲ್ಲಿ ₹2000 ಮುಖಬೆಲೆಯ ನೋಟು ಪರಿಚಯ

₹2000 ಮುಖಬೆಲೆಯ ನೋಟು ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಕ್ರಮವನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಟೀಕಿಸಿದ್ದಾರೆ.

₹2000 ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದೆ. ಆದರೆ ಈ ನೋಟುಗಳು ಕಾನೂನಾತ್ಮಕವಾಗಿ ಮಾನ್ಯತೆ ಹೊಂದಿರುತ್ತವೆ ಎಂದು ಆರ್‌ಬಿಐ ಹೇಳಿದೆ.

ಈ ಬೆನ್ನಲ್ಲೇ, ಕೇಂದ್ರ ಸರ್ಕಾರವನ್ನು ಟೀಕಿಸಿರುವ ಜೈರಾಮ್‌ ರಮೇಶ್‌, “ಬ್ಯಾಂಕ್‌ನ ಈ ಕ್ರಮವು, ಮೊದಲು ಕಾರ್ಯನಿರ್ವಹಿಸಿ ನಂತರ ಯೋಚಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಶಿಷ್ಟ್ಯವೆಂದು ತೋರಿಸುತ್ತದೆ” ಎಂದು ರಮೇಶ್‌ ಲೇವಡಿ ಮಾಡಿದ್ದಾರೆ.

Advertisements

“ಮೊದಲು ಕೆಲಸ ನಂತರ ಯೋಚನೆ (ಎಫ್‌ಎಎಸ್‌ಟಿ) ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ (ಪ್ರಧಾನಿ ಮೋದಿ) ವೈಶಿಷ್ಟ್ಯವಾಗಿದೆ. 2016ರ ನವೆಂಬರ್‌ 8 ರಂದು ತುಘಲಕ್ ಶಾಸನದಂತೆ ಭಾರೀ ಅಬ್ಬರದೊಂದಿಗೆ ಪರಿಚಯಿಸಿದ ₹2000 ಮುಖಬೆಲೆಯ ನೋಟುಗಳನ್ನು ಈಗ ಹಿಂತೆಗೆದುಕೊಳ್ಳಲಾಗುತ್ತಿದೆ” ಎಂದು ಕುಟುಕಿದ್ದಾರೆ.

ಜೈರಾಮ್‌ ರಮೇಶ್‌ ಅವರಂತೆ ಕಾಂಗ್ರೆಸ್‌ನ ಇತರ ನಾಯಕರೂ ₹2000 ಮುಖಬೆಲೆಯ ನೋಟು ಹಿಂಪಡೆಯುವಿಕೆಯನ್ನು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ ಪ್ರಕರಣ; ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

“₹2000 ಮುಖಬೆಲೆಯ ನೋಟುಗಳ ಚಲಾವಣೆ ಹಿಂಪಡೆಯಲಾಗುತ್ತಿದೆ. ಈಗ ಅಸ್ತಿತ್ವದಲ್ಲಿರುವ ನೋಟುಗಳನ್ನು ನಾಗರಿಕರು ತಮ್ಮ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್‌ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ 2016ರ ನವೆಂಬರ್‌ 8 ರಂದು 500 ಮತ್ತು 1000 ಮುಖಬೆಲೆಯ ನೊಟುಗಳನ್ನು ಅಮಾನ್ಯೀಕರಣಗೊಳಿಸಿತ್ತು ಮತ್ತು ₹2000 ಮುಖಬೆಲೆಯ ನೋಟನ್ನು ಪರಿಚಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X