ಗದಗ | ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿ: ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ

Date:

Advertisements

ತಾಯ್ನೆಲಕ್ಕಾಗಿ ಶೌರ್ಯದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಏರ್ಪಡಿಸಲಾದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಇತಿಹಾಸವನ್ನು ಗಮನಿಸಿದಾಗ ದೇಶದ ರಕ್ಷಣೆಗಾಗಿ ಅನೇಕ ವೀರ ಮಹಿಳೆಯರು ತಮ್ಮ ಪ್ರಾಣವನ್ನು ಮುಡುಪಾಗಿಟ್ಟಿದ್ದನ್ನು ಸ್ಮರಿಸಬಹುದಾಗಿದೆ. ಅಂತಹ ವೀರ ಮಹಿಳೆಯರ ಸಾಲಿನಲ್ಲಿ ಒನಕೆ ಓಬವ್ವ ಸಹಿತ ವಿರಾಜಮಾನರಾಗಿದ್ದಾರೆ. ಒನಕೆ ಓಬವ್ವ ಅವರ ಸಾಹಸ ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಅಭಿಪ್ರಾಯಪಟ್ಟರು.

Advertisements

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿರುಪಾಕ್ಷ ಉಪನ್ಯಾಸ ನೀಡಿ, ‘ಚಿತ್ರದುರ್ಗದ ನಾಯಕರ ಬಳಿ ಕಹಳೆಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಮುದ್ದಹನುಮಪ್ಪನ ಹೆಂಡತಿಯೇ ಓಬವ್ವ. ಹೈದರ್ ಅಲಿಯು ಚಿತ್ರದುರ್ಗ ಕೋಟೆಯನ್ನು ಅಕ್ರಮಿಸಲು ವಿಫಲ ನಾದನು. ನಂತರ ಹೈದರ್ ಅಲಿಯು ಕುಟಿಲ ಮಾರ್ಗದಿಂದ ಕೋಟೆಯನ್ನು ಭೇದಿಸಲು ಗೂಢಚಾರರನ್ನು ನೇಮಿಸಿ, ತಯಾರಿ ನಡೆಸಿದರು. ಮುದ್ದಹನುಮಪ್ಪನು ಮಧ್ಯಾಹ್ನ ಮನೆಗೆ ಬಂದಾಗ ಓಬವ್ವಳು ಆತನಿಗೆ ಊಟಕ್ಕೆ ಬಡಿಸಿ ಕುಡಿಯುವ ನೀರು ತರಲು ಸಿಹಿ ನೀರಿನ ಕೊಳಕ್ಕೆ ಬಂದಳು. ಕಳ್ಳಗಿಂಡಿಯ ಕಡೆ ಯಿಂದ ಶತ್ರುಗಳ ಅಸ್ಪಷ್ಟ ಮಾತುಗಳು, ಸುಳಿವು ಸಿಕ್ಕ ತಕ್ಷಣವೇ ಕಳ್ಳಗಿಂಡಿಯ ಬಳಿಗೆ ಶತ್ರುಗಳನ್ನು ಎದುರಿಸಲು ಸಿದ್ಧಳಾದಳು. ಒನಕೆಯನ್ನು ಹಿಡಿದು ಒಬ್ಬೊಬ್ಬರಾಗಿ ನುಸುಳಿ ಬಂದವರ ತಲೆಗೆ ಒನಕೆ ಪೆಟ್ಟು ಕೊಟ್ಟು ಕೊಂದು ಹಾಕತೊಡಗಿದಳು’ ಎಂದು ತಿಳಿಸಿದರು.

‘ಊಟ ಮುಗಿಸಿದ ಮುದ್ದಹನುಮಪ್ಪನು ಕುಡಿಯುವ ನೀರು ತರಲು ಹೋದ ಓಬವ್ವಳನ್ನು ಕಾಣಲು ಕೊಳದ ಬಳಿಗೆ ಬಂದಾಗ ಅಲ್ಲಿಯ ಸನ್ನಿವೇಶವನ್ನು ನೋಡಿ ತನ್ನ ಕಹಳೆ ಮೊಳಗಿಸಿದನು. ದುರ್ಗದ ಸೈನಿಕರು ಧಾವಿಸಿ ಬಂದು ಶತ್ರುಗಳನ್ನು ಹೊಡೆದೋಡಿಸಿದರು. ಹೀಗೆ ಶತ್ರುಗಳ ಕುಟಿಲ ಆಕ್ರಮಣವನ್ನು ತಡೆದು ಓಬವ್ವಳು ತನ್ನ ಸಮಯ ಪ್ರಜ್ಞೆ ಹಾಗೂ ಧೈರ್ಯ ಶೌರ್ಯ ಮೆರೆದಿದ್ದು ಎಲ್ಲರಿಗೂ ಆದರ್ಶಪ್ರಾಯವಾಗಿದೆ’ ಎಂದು ಇತಿಹಾಸ ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್., ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತ ದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ., ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾ ಖೆಯ ಅಧಿಕಾರಿಗಳು, ಸಮುದಾಯದ ಮುಖಂಡರು, ಗಣ್ಯರು, ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X