ಬೆಂಗಳೂರು | ಸರ್ಕಾರಿ ನೌಕರರ ಚುನಾವಣೆ; ಮಧು ಬಂಗಾರಪ್ಪನವರ ಮಾರ್ಗದರ್ಶನ ಪಡೆದ ಅಭ್ಯರ್ಥಿಗಳು

Date:

Advertisements

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ನೌಕರರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು ಸಚಿವ ಎಸ್ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮಾರ್ಗದರ್ಶನ ಹಾಗೂ ಸಹಕಾರ ನೀಡುವಂತೆ ಒತ್ತಾಯಿಸಿದರು.

“ಉಳಿದ ನಿರ್ದೇಶಕರ ಸ್ಥಾನಕ್ಕೆ ನಿಮ್ಮ ಮಾರ್ಗದರ್ಶನ ಹಾಗೂ ಸಹಕಾರದಲ್ಲಿ ಒಗ್ಗಟ್ಟಿನಿಂದ ಚುನಾವಣೆ ನಡೆಸಿ ಪರಸ್ಪರ ಒಮ್ಮತದಿಂದ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ, ತಮ್ಮ ಮಾರ್ಗದರ್ಶನದಂತೆ ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿಗೆ ಯಾವುದೇ ಗುಂಪುಗಾರಿಕೆಯಿಲ್ಲದೆ ನ್ಯಾಯ ಸಮ್ಮತವಾಗಿ ಕೆಲಸ ನಿರ್ವಹಿಸುತ್ತೇವೆ” ಎಂದು ಭರವಸೆ ನೀಡಿದರು.

“ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರಿಗೆ ಶುಭ ಹಾರೈಸಿ, ಉಳಿದ 28 ಕ್ಷೇತ್ರಗಳ ಗೆಲುವಿಗೆ ಒಗ್ಗಟ್ಟಿನಿಂದ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಎಲ್ಲರನ್ನು ಗೆಲ್ಲಿಸುವ ಮೂಲಕ ತಂಡಕ್ಕೆ ಇನ್ನಷ್ಟು ಶಕ್ತಿ ತುಂಬುವಂತೆ ಶ್ರಮವಹಿಸಿ” ಎಂದು ಸಚಿವರು ಸೂಚಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಾಜಿ ಸಿಎಂ ನಿಜಲಿಂಗಪ್ಪ ಅವರ ಮನೆ ಖರೀದಿ; ಸರ್ಕಾರದಿಂದ 5 ಕೋಟಿ ರೂ. ಮಂಜೂರು

ಸರ್ಕಾರಿ ನೌಕರರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಾದ ಆರ್ ಮೋಹನ್ ಕುಮಾರ್, ಜಿ ಹೆಚ್ ಸತ್ಯನಾರಾಯಣ, ಹನುಮ ನಾಯ್ಕ, ರಘುರಾಮ್ ದೇವಾಡಿಗ ಸೇರಿದಂತೆ ಎಸ್ ವೈ ರಮೇಶ್, ಚಿನ್ನಪ್ಪ, ಅಂತೋಣಿ ರಾಜು, ವಿ ಲಕ್ಷ್ಮಣ, ಸಿ ರವಿ, ರಾಮು, ಪಾಪಣ್ಣ, ಗಜಾನನ, ಕೃಷ್ಣಾ ರೆಡ್ಡಿ, ಅವಿನ್, ನರಸಿಂಹ ಮೂರ್ತಿ, ನಾಗರಾಜ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X