ರಮೇಶ ಕತ್ತಿಯವರ ರಾಜಿನಾಮೆ ನಂತರ ತೀವ್ರ ಕೂತುಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಯಬಾಗ ಮೂಲದ ಬೆಂಬಲಿತ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಆಯ್ಕೆ ಮಾಡಿದ್ದಾರೆ.
ನಗರದ ಖಾಸಗಿ ಹೊಟೆಲ್ ನಲ್ಲಿ ನಡೆದ ಸಭೆಯಲ್ಲಿ ರಾಯಬಾಗ್ ಮೂಲದ ಅಪ್ಪಾಸಾಹೇಬ್ ಕುಲಗೊಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದು, ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಮುಂದುವರೆಯಲಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಈ ವರದಿ ಓದಿದ್ದೀರಾ? ಧಾರವಾಡ | ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ಮಹೇಶ ಶೇ ತಳವಾರ ಆಯ್ಕೆ
ಸಭೆಯ ಬಳಿಕ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ ಎಲ್ಲ ನಿರ್ದೆಶಕರು,ಸದಸ್ಯರು ಶಾಸಕರ ನಿರ್ಣಯ ಪಡೆದು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಹಾಗೂ ಜಾರಕಿಹೊಳಿ ಸಹೋದರರು ಒಂದೇ ವೇಧಿಕೆಯಲ್ಲಿ ಭಾಗವಹಿಸಿರುವ ಕುರಿತು ಮಾತನಾಡಿ ಇದರಲ್ಲಿ ಎನು ವಿಶೇಷತೆ ಇಲ್ಲ ಅವರ ಪಕ್ಷರ ಅಭ್ಯರ್ಥಿಗಳು ಇರುವದರಿಂದ ಅವರು ಭಾಗವಹಿಸಿದ್ದಾರೆ ಎಂದು ಹೇಳಿದರು.