ಭಾವುಕತೆಯಲ್ಲಿ ಬಂಧಿಸುವ ವಡಿವೇಲು ಕಂಠಸಿರಿಯ ʼರಾಜಾ ಕಣ್ಣುʼ

Date:

Advertisements

ತಮಿಳಿನ ಖ್ಯಾತ ನಿರ್ದೇಶಕ ಮಾರಿ ಸೆಲ್ವರಾಜ್‌ ನಿರ್ದೇಶನದ, ಉದಯನಿಧಿ ಸ್ಟಾಲಿನ್‌, ಫಹಾದ್‌ ಫಾಸಿಲ್‌ ಮತ್ತು ಕೀರ್ತಿ ಸುರೇಶ್‌ ಮುಖ್ಯಭೂಮಿಕೆಯ ಬಹುನಿರೀಕ್ಷಿತ ʼಮಾಮನ್ನನ್ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಭಾಗವಾಗಿ ಚಿತ್ರತಂಡ ಶುಕ್ರವಾರ ಬಿಡುಗಡೆ ಮಾಡಿರುವ ʼರಾಜಾ ಕಣ್ಣುʼ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸದ್ದು ಮಾಡುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ.

ಬಿಡುಗಡೆಯಾದ 24 ಗಂಟೆಗಳಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿರುವ ʼರಾಜಾ ಕಣ್ಣುʼ ಹಾಡಿಗೆ ತಮಿಳಿನ ಜನಪ್ರಿಯ ಹಾಸ್ಯನಟ ವಡಿವೇಲು ಧ್ವನಿಯಾಗಿರುವುದು ವಿಶೇಷ. ಕೇಳುಗರನ್ನು ಭಾವುಕರನ್ನಾಗಿಸುವ ಈ ಹಾಡಿಗೆ ಯುಗಭಾರತಿ ಅವರ ಸಾಹಿತ್ಯವಿದ್ದು, ದಿಗ್ಗಜ ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌ ಅವರ ಹಿನ್ನೆಲೆ ಸಂಗೀತವಿದೆ.

ʼಪರಿಯೆರುಂ ಪೆರುಮಾಳ್‌ʼ ಮತ್ತು ಧನುಷ್‌ ನಟನೆಯ ʼಕರ್ಣನ್‌ʼ ಚಿತ್ರಗಳಿಗೆ ಆ್ಯಕ್ಷನ್ ಕಟ್‌ ಹೇಳುವ ಮೂಲಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಾರಿ ಸೆಲ್ವರಾಜ್‌, ರಾಜಕೀಯ ಹಿನ್ನೆಲೆಯುಳ್ಳ ಕಥಾಹಂದರವನ್ನು ಆಧರಿಸಿ ʼಮಾಮನ್ನನ್ʼ ಚಿತ್ರವನ್ನು ತೆರೆಗೆ ಅಳವಡಿಸಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಚಿತ್ರದ ಟೀಸರ್‌ ಕೂಡ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ರಾಜಕಾರಣ, ಹಳ್ಳಿಗರ ಸಂಘರ್ಷ, ಪೊಲೀಸ್‌ ದೌರ್ಜನ್ಯದ ಸುತ್ತ ಮೂಡಿಬಂದಿದೆ ಎಂಬುದನ್ನು ಟೀಸರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿತ್ತು.

Advertisements

ವಡಿವೇಲು ಈ ಚಿತ್ರದ ಹಾಡಿಗೆ ಮಾತ್ರ ಧ್ವನಿಯಾಗಿಲ್ಲ, ಬದಲಿಗೆ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರವೀನಾ ರವಿ, ಕೌಶಿಕ್‌ ಮಹಾತಾ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಮುಖ್ಯಭೂಮಿಕೆ ನಿಭಾಯಿಸಿರುವ ಉದಯನಿಧಿ ಸ್ಟಾಲಿನ್‌ ಅವರೇ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಸಿನಿಮಾ | ʼಪೂಚಂತೇʼಯ ಪ್ರಸ್ತುತತೆ ಸಾರುವ ʼಡೇರ್‌‌ಡೆವಿಲ್ ಮುಸ್ತಾಫಾʼ

ಸದ್ಯ ʼಮಾಮನ್ನನ್ʼ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ಸಾಗಿದ್ದು, ʼರಾಜಾ ಕಣ್ಣುʼ ಹಾಡಿನ ಮೂಲಕ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿರುವ ಚಿತ್ರತಂಡ ಜೂನ್‌ ತಿಂಗಳಿನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X