ಮಂಡ್ಯ | ಯುವಜನತೆಯ ಒಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಇರಲಿ: ಜಿಲ್ಲಾಧಿಕಾರಿ ಡಾ. ಕುಮಾರ್

Date:

Advertisements

ವಿಶಾಲವಾದ ಪ್ರಪಂಚದಲ್ಲಿ ಕಲಿಯುವುದು ಬಹಳಷ್ಟಿದೆ. ಯಾವಾಗಲೂ ನಮ್ಮ ಕಲಿಕೆ ಒಳ್ಳೆಯ ಆಯ್ಕೆಯ ವಿಷಯವಾಗಿರಬೇಕು. ಆದ್ದರಿಂದ, ಯುವಜನತೆಯ ಒಲವು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆಯೇ ಇರಲಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.

ಅವರು ನ.14ರ ಬುಧವಾರ ಜಿಲ್ಲಾಧಿಕಾರಿ ಭವನದಲ್ಲಿ ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಅರಕೆರೆ ಹೋಬಳಿಯ ನೇರ್ಲೆರೆ ಗ್ರಂಥಾಲಯಕ್ಕೆ ಸುಮಾರು 300 ಸ್ಪರ್ಧಾತ್ಮಕ ಆಯ್ಕೆಯ ವಿಷಯಕ್ಕೆ ಸಂಬಂಧಿಸಿದ ಪುಸ್ತಕಗಳ ವಿತರಣೆ ಸಂದರ್ಭದಲ್ಲಿ ಭಾಗಿಯಾಗಿ ಮಾತನಾಡಿದರು.

ಬಹಳಷ್ಟು ವಿದ್ಯಾರ್ಥಿಗಳಿಗೆ ಯಾವ ರೀತಿ ಓದಬೇಕು, ಯಾವ ಪುಸ್ತಕ ಓದಬೇಕು, ಓದುವುದಕ್ಕೆ ಪುಸ್ತಕವಾದರೂ ಎಲ್ಲಿ ಸಿಗುತ್ತದೆ, ಗ್ರಂಥಾಲಯಕ್ಕೆ ಹೋಗಿ ಓದಬೇಕೋ ಎಂಬ ಸಾಕಷ್ಟು ಗೊಂದಲಗಳು ಅಸ್ಪಷ್ಟತೆಗಳು ಸಾಮಾನ್ಯವಾಗಿ ಸರ್ವೇ ಸಾಮಾನ್ಯವಾಗಿ ಇರುತ್ತವೆ. ಅಂತಹ ಗೊಂದಲಗಳನ್ನು ದೂರ ಮಾಡಲು ಬುದ್ಧ ಭಾರತ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ಈ ನಿಷ್ಕಲ್ಮಶವಾದ ಕೆಲಸ ನಿಜಕ್ಕೂ ಹೆಮ್ಮೆಯ ವಿಷಯ ಎಂದು ಹೇಳಿದರು.

Advertisements
IMG 20241113 WA0186 1

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಬುದ್ಧ ಭಾರತ ಫೌಂಡೇಶನ್ ದೂರದೃಷ್ಟಿಯನ್ನಿಟ್ಟುಕೊಂಡು ಮಕ್ಕಳ ಭವಿಷ್ಯ ರೂಪಿಸಲು ತೆಗೆದುಕೊಂಡ ಕಾರ್ಯ ನಿಜಕ್ಕೂ ಶ್ಲಾಘನೀಯ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಂಚಿತರಾಗದಂತೆ ಕಲಿಕೆ ನಡೆಸಿ ಉತ್ತಮ ಹುದ್ದೆಗೆ ಆಯ್ಕೆಯಾಗಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜ್ ಮಾತನಾಡಿ, ಗ್ರಾಮೀಣ ಬಡಮಕ್ಕಳಿಗೆ ಅನುಕೂಲವಾಗಲೆಂದು ಈ ಪುಸ್ತಕ ವಿತರಣೆಯನ್ನು ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಯುವ ಜನತೆಯೇ ಮುಂದೆ ಬಂದು ಸ್ಪರ್ಧಾತ್ಮಕ ಯುಗದಲ್ಲಿ ಭಾಗಿಯಾಗಬೇಕು, ಕಷ್ಟ ಪಡದೇ ಎಂದಿಗೂ ಸುಖ ಸಿಗುವುದಿಲ್ಲ ಎಂದು ಕಿವಿ ಮಾತು ಹೇಳಿದ ಅವರು, ಈ ಕಾರ್ಯವನ್ನು ನಿರ್ವಹಿಸುತ್ತಿರುವ ಸಂಸ್ಥೆಗೆ ಜಿಲ್ಲಾಡಳಿತದ ವತಿಯಿಂದ ಅಭಿನಂದನೆಯನ್ನು ಸಲ್ಲಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ಸಾಲಗಾರರ ಕಿರುಕುಳ ಶಂಕೆ: ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ರಿಯಲ್‌ ಎಸ್ಟೇಟ್‌ ಉದ್ಯಮಿ

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ವಕೀಲರಾದ ರಾಮಯ್ಯ ಸೇರಿದಂತೆ ಇನ್ನಿತರರ ಗಣ್ಯರು ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X