ಚಿತ್ರದುರ್ಗ | ನರೇಗಾ ಕೆಲಸಕ್ಕೆ ಹಣದ ಬೇಡಿಕೆ: ತಾಂತ್ರಿಕ ಸಹಾಯಕ ಕೆಲಸದಿಂದ ವಜಾ

Date:

Advertisements

ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್‌ಗಳಲ್ಲಿ ಅಕ್ರಮ ಎಸಗಿರುವ ವರದಿ ಆಧರಿಸಿ ಚಿತ್ರದುರ್ಗದಲ್ಲಿ ನರೇಗಾ ಯೋಜನೆಯ ತಾಂತ್ರಿಕ ಸಹಾಯಕರೊಬ್ಬರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮ ಪಂಚಾಯತಿಯ ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು ವಜಾಗೊಂಡಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್ ಜೆ ಸೋಮಶೇಖರ್ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

ಹಿರಿಯೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಅವರು, ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು, ನರೇಗಾ ಯೋಜನೆಯ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳ ಎಂಐಎಸ್ ಮಾಡಿ ಎಫ್‍ಟಿಒಗಳನ್ನು ಸೃಜಿಸಿದ್ದು, ಈ 33 ಕಾಮಗಾರಿಗಳ ಎಂ.ಬಿಯನ್ನು ದಾಖಲಿಸದೆ ಕರ್ತವ್ಯ ಲೋಪವೆಸಗಿದ್ದಾರೆ ಎಂದು ವರದಿ ಸಲ್ಲಿಸಿದ್ದಾರೆ.

Advertisements

ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೂ.3 ಲಕ್ಷದ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಶೇ.4 ನಂತೆ ರೂ.12,000/-ಗಳಿಗೆ ಹಣದ ಬೇಡಿಕೆ ಇಟ್ಟಿರುವ ದೃಶ್ಯ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಮೈಸೂರು | ಸಾಲಗಾರರ ಕಿರುಕುಳ ಶಂಕೆ: ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ರಿಯಲ್‌ ಎಸ್ಟೇಟ್‌ ಉದ್ಯಮಿ

ಕರ್ತವ್ಯಲೋಪ ಮತ್ತು ಹಣದ ಬೇಡಿಕೆ ಇಟ್ಟು ನರೇಗಾ ಯೋಜನೆಯ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವುದರಿಂದ ಇವರ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದೇ ಇರುವುದರಿಂದ ವಿಜಯೇಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X