ಸಚಿವ ಜಮೀರ್‌ ಅಹಮದ್‌ ಹೇಳಿಕೆಯಿಂದ ನಷ್ಟವಾಗಿದೆ: ಸಿ ಪಿ ಯೋಗೇಶ್ವರ್

Date:

Advertisements

ಹೆಚ್‌ ಡಿ ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್‌ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಪರಿಣಾಮ ಬೀರಿದೆ. ಇದರಿಂದ ನನಗೆ ಬರುವ ಒಂದಿಷ್ಟು ಮತಗಳ ಬಂದಂತೆ ಕಾಣುತ್ತಿಲ್ಲ. ನಾನು ನಿರೀಕ್ಷಿಸಿದ ಮತಗಳಲ್ಲಿ ಹಿನ್ನಡೆಯಾಗಲಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಹೇಳಿದರು.

ಚನ್ನಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸಂಪೂರ್ಣವಾಗಿ ಹೋರಾಡಿದ್ದೇನೆ. ಆದರೆ, ದೇವೇಗೌಡರು ಮೊಮ್ಮಗನನ್ನು ಗೆಲ್ಲಿಸಿಕೊಂಡು ಬರಲು ಶಪಥ ಮಾಡಿದಂತೆ ಕಾಣುತ್ತಿದೆ. ಅವರ ಕೊನೆಗಳಿಗೆಯ ಪ್ರಚಾರ ಜೆಡಿಎಸ್‌ಗೆ ಲಾಭವಾಗಿದೆ” ಎಂದರು.

“ಕುಮಾರಸ್ವಾಮಿ ಅವರು ಕ್ಷೇತ್ರ ಉಳಿಸಿಕೊಳ್ಳಲು ಸಾಕಷ್ಟು ತಂತ್ರಗಳನ್ನು ಮಾಡಿದ್ದಾರೆ. ದೇವೇಗೌಡರ ಕಣ್ಣೀರು ಅದು ಬೇರೆಯೇ ಕೆಲಸ ಮಾಡುತ್ತದೆ. ದೇವೇಗೌಡರನ್ನು ಬೈದರೆ ಸಹಿಸಿಕೊಳ್ಳದೇ ಇರುವ ಮತದಾರರು ಇದ್ದಾರೆ. ಕಾಂಗ್ರೆಸ್‌ ಇಲ್ಲಿ ಗೆಲ್ಲುವ ವಾತಾವರಣ ಇರಲಿಲ್ಲ. ನಾನು ಪಕ್ಷೇತರವಾಗಿ ಗೆದ್ದಿದ್ದೇನೆ. ಇನ್ನೂ ಆತ್ಮಸಾಕ್ಷಿ ಕುಗ್ಗಿಲ್ಲ” ಎಂದು ತಿಳಿಸಿದರು.

Advertisements

“ಆಡಳಿತ ಪಕ್ಷ ನಮ್ಮದಿದೆ. ರಾಜ್ಯದಲ್ಲಿ ಸರ್ಕಾರದ ಗ್ಯಾರಂಟಿಗಳು ಕೂಡ ಕ್ಷೇತ್ರದಲ್ಲಿ ಪರಿಣಾಮ ಬೀರಿವೆ. ನಮ್ಮ ಕಾಂಗ್ರೆಸ್‌ ನಾಯಕರು ನನ್ನ ಬೆನ್ನಿಗೆ ನಿಂತು ಸಾಕಷ್ಟು ಹೋರಾಟ ಮಾಡಿದ್ದಾರೆ. ಫಲಿತಾಂಶ ಏನಾಗುತ್ತೋ ಕಾದು ನೋಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

“ಒಕ್ಕಲಿಗ ಜನರು ದೇವೇಗೌಡರ ಕುಟುಂಬಕ್ಕೆ ಅಂಟಿಕೊಂಡಿದ್ದಾರೆ. ಯಾವಾಗ ನಮ್ಮನ್ನು ಒಪ್ಪಿಕೊಳ್ಳುತ್ತಾರೋ ಅವಾಗ ನಾವು ಸಮುದಾಯದ ನಾಯಕರಾಗಲು ಸಾಧ್ಯ. ನೋಡೋಣ ಮುಂದೆ” ಎಂದು ತಿಳಿಸಿದರು.

ಚನ್ನಪಟ್ಟಣ ಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್‌ ಅಹಮದ್‌ ಅವರು ಕಾಲಾ ಕುಮಾರಸ್ವಾಮಿ ಎಂದು ಲೇವಡಿ ಮಾಡಿದ್ದರು. ಚುನಾವಣೆಯಲ್ಲಿ ಜೆಡಿಎಸ್‌ ನಾಯಕರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಒಕ್ಕಲಿಗರನ್ನು ಜಮೀರ್‌ ನಿಂದಿಸಿದ್ದಾರೆ ಎಂದು ಪ್ರಚಾರ ಮಾಡಲಾಯಿತು. ನಂತರ ಮೈಸೂರಿನಲ್ಲಿ ಜಮೀರ್‌ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X