ಬಾಗಲಕೋಟೆ | ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭ: ಶಾಸಕ ವಿಜಯಾನಂದ ಕಾಶಪ್ಪನವರ

Date:

Advertisements

ನೇಕಾರಿಕೆ ದೇವಲ ಮಹರ್ಷಿಗಳು ಸಮಾಜಕ್ಕೆ ನೀಡಿದ ಕೊಡುಗೆ ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ಸವಾಲು ನೇಕಾರರ ಮುಂದಿದೆ. ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭಿಸಲಾಗುವುದು ಎಂದು ಹುನಗುಂದ ಶಾಸಕರಾದ ವಿಜಯಾನಂದ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಾ ಶಂಕರಿ ರಾಮಲಿಂಗ ದೇವಸ್ಥಾನದ ಆವರಣದಲ್ಲಿ ದೇವಾಂಗ ಸಂಘ ಹಾಗೂ ದೇವಲ ಮಹರ್ಷಿಗಳ ಜಯಂತ್ಯುತ್ಸವದ ನಿಮಿತ್ತ ಆಯೋಜಿಸಲಾಗಿದ್ದ ದೇವಾಂಗ ಪುರಾಣದ ಸಮಾರೋಪ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವಾಂಗ ಜಗದ್ಗುರುಗಳ ಅಣತಿಯಂತೆ ಕೂಡಲಸಂಗಮದಲ್ಲಿ ಜನವರಿ ತಿಂಗಳ ಕೊನೆಯ ವಾರದಲ್ಲಿ ರಾಜ್ಯಮಟ್ಟದ ನೇಕಾರ ಸಮಾವೇಶ ಆಯೋಜಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

Advertisements
kashappa1

ಪುರಸ್ಕೃತ ಗುರುದಾಸ ನಾಗಲೋಟಿ ಮಾತನಾಡಿ, ಇಳಕಲ್ ಸೀರೆ ಇಂದಿಗೂ ತನ್ನ ಖ್ಯಾತಿ ಉಳಿಸಿಕೊಂಡಿದೆ. ಮಹಿಳೆಯರು ಮೂಲಕವೂ ಆನ್‌ಲೈನ್ ಖರೀದಿಸುತ್ತಿದ್ದಾರೆ. ದೇವಾಂಗ ಸಮಾಜದ ಯುವಕರು ನೇಕಾರಿಕೆಯಲ್ಲಿ ಶ್ರಮ ವಹಿಸಿ ಕೆಲಸ ಮಾಡಿದರೆ ನೌಕರಿಗಿಂತಲೂ ಹೆಚ್ಚು ಸಂಪಾದಿಸಬಹುದು ಎಂದು ಹೇಳಿದರು.

ಬಾಗಲಕೋಟೆ ಜಿಲ್ಲಾ ದೇವಾಂಗ ನೌಕರ ಸಂಘದ ಅಧ್ಯಕ್ಷ ಬಸವರಾಜ ಕುದರಿ ಅವರು ನೇಕಾರಿಕೆಯ ಸ್ಥಿತಿಗತಿ, ಜಾಗತೀಕರಣವು ನೇಕಾರರ ಜೀವನದ ಮೇಲೆ ಉಂಟು ಮಾಡಿದ ದುಷ್ಪರಿಣಾಮ ಹಾಗೂ ಪರಿಹಾರೋಪಾಯ ಕುರಿತು ಉಪನ್ಯಾಸ ನೀಡಿದರು.

ಹಂಪಿ ಹೇಮಕೂಟ ಗಾಯತ್ರಿ ಸಾನ್ನಿಧ್ಯ ವಹಿಸಿದ್ದರು. ಪೀಠದ ದಯಾನಂದಪುರಿ ಮಾತನಾಡಿದರು. ಬಡವರಿಗೆ ವಸ್ತ್ರ ವಿತರಿಸಲಾಯಿತು.

ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪಡೆದ ನೀಲಕಂಠ ಕಾಳಗಿ, ಸಿದ್ದಪ್ಪ ಮಾದರ (ಸಿತಿಮಾ). ಸುನಂದಾ ಕಂದಗಲ್ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

ಮುನಿಸ್ವಾಮಿಗಳು ದೇವಾಂಗಮಠ, ದೇವಾಂಗ ಅಧ್ಯಕ್ಷ ಅಶೋಕ ಬಿಜ್ಜಲ್, ಬಾಗಲಕೋಟ ಜಿಲ್ಲಾ ದೇವಾಂಗ ಸಮಾಜದ ಅಧ್ಯಕ್ಷ ಸತೀಶ ಸಪ್ಪರದ, ಉತ್ಸವ ಸಮಿತಿ ಅಧ್ಯಕ್ಷ ಅಮೃತ್ ಬಿಜ್ಜಲ್, ಗಾಯತ್ರಿ , ಮಹಿಳಾ ಮಂಡಳದ ಅಧ್ಯಕ್ಷೆ ಲಲಿತಾಬಾಯಿ ಸಪ್ಪರದ, 4 ದೇವಾಂಗ ಪೇಟೆಗಳ ಅಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X