ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಯೋಗಿ ಸರ್ಕಾರ; ಒಂದೇ ದಿನ ಯುಪಿಪಿಎಸ್‌ಸಿ ಪರೀಕ್ಷೆ ನಡೆಸಲು ಅಸ್ತು

Date:

Advertisements

ಸತತ ನಾಲ್ಕು ದಿನಗಳ ಕಾಲ ಯುಪಿಎಸ್‌ಸಿ ಆಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಕೊನೆಗೂ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಣಿದಿದೆ. ಒಂದೇ ದಿನದಲ್ಲಿ ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಯೋಗಿ ಸರ್ಕಾರ ಅಸ್ತು ಎಂದಿದೆ.

ಪಿಸಿಎಸ್ ಮತ್ತು ಆರ್‌ಒ/ಎಆರ್‌ಒ ಪರೀಕ್ಷೆಗಳನ್ನು ಒಂದು ದಿನ ಮತ್ತು ಒಂದೇ ಪಾಳಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಪ್ರಯಾಗ್‌ರಾಜ್‌ನಲ್ಲಿ ಹಲವು ಆಕಾಂಕ್ಷಿಗಳು ಯುಪಿಪಿಎಸ್‌ಸಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ನಾಲ್ಕು ದಿನಗಳ ಪ್ರತಿಭಟನೆಯ ಬಳಿಕ ಸರ್ಕಾರವು ಈ ನಿರ್ಧಾರವನ್ನು ತಳೆದಿದೆ.

ಯುಪಿಎಸ್‌ಸಿ ಕಾರ್ಯದರ್ಶಿ ಅಶೋಕ್‌ಕುಮಾರ್‌ ಗುರುವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. ಅದಾದ ಬಳಿಕ ಆರ್‌ಒ/ಎಆರ್‌ಒ ಪರೀಕ್ಷೆಗಾಗಿ ಆಯೋಗದಿಂದ ಸಮಿತಿಯನ್ನು ರಚಿಸಲಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.

Advertisements

ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್‌ | ‘ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪ್ರಯಾಗ್‌ರಾಜ್‌ನಲ್ಲಿರುವ ಯುಪಿಎಸ್‌ಸಿ ವಿದ್ಯಾರ್ಥಿಗಳ ಬಗ್ಗೆ ಯುಪಿ ಸರ್ಕಾರ ಮತ್ತು ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗದ ವರ್ತನೆ ಅತ್ಯಂತ ಸಂವೇದನಾರಹಿತ ಮತ್ತು ದುರದೃಷ್ಟಕರವಾಗಿದೆ. ಸಾಮಾನ್ಯೀಕರಣದ ಹೆಸರಿನಲ್ಲಿ ಪಾರದರ್ಶಕವಲ್ಲದ ವ್ಯವಸ್ಥೆ ಸ್ವೀಕಾರಾರ್ಹವಲ್ಲ. ಒಂದೇ ಪಾಳಿಯಲ್ಲಿ ಪರೀಕ್ಷೆಗೆ ವಿದ್ಯಾರ್ಥಿಗಳ ಬೇಡಿಕೆಯು ಸಂಪೂರ್ಣವಾಗಿ ಸಮರ್ಥನೀಯವಾಗಿದೆ” ಎಂದು ಹೇಳಿದ್ದಾರೆ.

“ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಬಿಜೆಪಿ ಸರ್ಕಾರದ ಅದಕ್ಷತೆಗೆ ವಿದ್ಯಾರ್ಥಿಗಳೇಕೆ ಬೆಲೆ ತೆರಬೇಕು? ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಬೀದಿಗಿಳಿದು ಹೋರಾಟ ಮಾಡುವಂತಾಗಿದೆ. ಇದೀಗ ಪೊಲೀಸರಿಂದ ಕಿರುಕುಳ ಅನುಭವಿಸುವಂತಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ತಮ್ಮ ಮತ್ತು ತಮ್ಮ ಕುಟುಂಬದ ಕನಸುಗಳನ್ನು ನನಸಾಗಿಸಲು ಮನೆ ಬಿಟ್ಟು ಅಭ್ಯಾಸ ಮಾಡುತ್ತಿರುವ ಯುವಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ನಾವು ಒಪ್ಪುವುದಿಲ್ಲ. ಸ್ಪರ್ಧಾತ್ಮಕ ವಿದ್ಯಾರ್ಥಿಗಳ ಬೇಡಿಕೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅವರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸರ್ವಾಧಿಕಾರದಿಂದ ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X