ಚಿತ್ರದುರ್ಗ | ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ : ಜಿ.ಪಂ. ಸಿಇಓ ಸೋಮಶೇಖರ್

Date:

Advertisements

ಸಿರಿಧಾನ್ಯಗಳು ಒಳ್ಳೆಯ ಪೋಷಕಾಂಶ ಹೊಂದಿದ್ದು, ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸೌಲಭ್ಯಕ್ಕೆ ಉತ್ತಮ ವೇದಿಕೆ ಒದಗಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಓ ಎಸ್ ಜೆ ಸೋಮಶೇಖರ್ ತಿಳಿಸಿದರು.

ಚಿತ್ರದುರ್ಗ ನಗರದ ಎಪಿಎಂಸಿ ಆವರಣದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಿದ್ದ ಸಿರಿಧಾನ್ಯಗಳ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

“ಇಂದಿನ ದಿನಗಳಲ್ಲಿ ಎಲ್ಲಾ ಬೆಳೆಗಳಿಗೆ ರಾಸಾಯನಿಕಗಳನ್ನು ಅತಿ ಹೆಚ್ಚು ಬಳಸಲಾಗುತ್ತಿದ್ದು, ರಾಸಾಯನಿಕಯುಕ್ತ ಆಹಾರಗಳಿಂದ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ. ಆಹಾರ ಪದಾರ್ಥಗಳು ಕಲುಷಿತಗೊಂಡಿದ್ದು ಈ ನಿಟ್ಟಿನಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಿರಿಧಾನ್ಯಗಳ ಬಳಕೆಯಿಂದ ಸಾಧ್ಯ ಎಂದು ಅಭಿಪ್ರಾಯಪಟ್ಟರು.

Advertisements
WhatsApp Image 2024 11 14 at 4.29.12 PM

ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಮಾತನಾಡಿ, ಈ ಸ್ಪರ್ಧೆಯನ್ನು ಸಿರಿಧಾನ್ಯ ಸಿಹಿವಿಭಾಗ , ಮರೆತು ಹೋದ ಖಾದ್ಯ ವಿಭಾಗ ಮತ್ತು ಖಾರದ ವಿಭಾಗ ಎಂದು ಮೂರು ಭಾಗಗಳಾಗಿ ಸ್ಪರ್ಧೆ ಏರ್ಪಡಿಸಲಾಗಿದೆ. 2017ರಿಂದಲೂ ರಾಜ್ಯಮಟ್ಟದ ಸ್ಪರ್ಧೆಯೂ ಸೇರಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಆಚರಿಸಲಾಗುತ್ತದೆ. ಜಾಗತೀಕರಣ ಮತ್ತು ಜಾಗತಿಕ ಮಟ್ಟದಲ್ಲಿ ಆದ ಬದಲಾವಣೆಗಳಿಂದ ನಮ್ಮ ಆಹಾರ ಪದ್ಧತಿ ಮತ್ತು ಆಹಾರ ಧಾನ್ಯಗಳಲ್ಲಿ ಬದಲಾವಣೆಗಳಾಗಿದ್ದು ನಮ್ಮವರ ರೂಢಿಗತ ಆಹಾರ ಪದ್ಧತಿಯಿಂದ ಹಿಮ್ಮುಖರಾಗುತ್ತಿದ್ದೇವೆ. ಹೀಗಾಗಿ, ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದೇವೆ. ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಉತ್ತಮ ಪೋಷಕಾಂಶಗಳನ್ನು ಹೊಂದಿರುವ ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚು ಮಾಡಬೇಕು ಎಂದು ಸಲಹೆ ನೀಡಿದರು.

ಸಿರಿಧಾನ್ಯ ಸಿರಿಧಾನ್ಯ ಪಾಕ ಸ್ಪರ್ಧೆಯ ಮೂರು ವಿಭಾಗಳಿಂದ ಒಟ್ಟು 9 ಮಂದಿ ವಿಜೇತರಿಗೆ ಪ್ರಶಸ್ತಿ ಹಾಗೂ ಬಹುಮಾನ ನೀಡಲಾಗುವುದು. ಸಿಹಿ, ಖಾರ ಸಿರಿಧಾನ್ಯ ಖಾದ್ಯಗಳಿಗೆ ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಪ್ರಥಮ, ದ್ವಿತೀಯ ಹಾಗೂ ತೃತಿಯ ಸ್ಥಾನ ವಿಜೇತರಿಗೆ ಕ್ರಮವಾಗಿ ರೂ.5000/-, 3000/- ಹಾಗೂ 2000/- ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

WhatsApp Image 2024 11 14 at 4.29.11 PM 1

ರಾಜ್ಯಮಟ್ಟದ ಸ್ಪರ್ಧೆಯನ್ನು ಮುಂಬರುವ ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲಾಗುತ್ತದೆ. ರಾಜ್ಯ ಮಟ್ಟದ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ”ಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತರು ಸ್ವತಃ ತಿನಿಸನ್ನು ತಯಾರಿಸಲು ಅವಶ್ಯವಿರುವ ಸಾಮಗ್ರಿಗಳೊಂದಿಗೆ ಸಿದ್ಧರಿರಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಒಟ್ಟು 41 ಜನರು ಭಾಗವಹಿಸಿ, ಸಿರಿಧಾನ್ಯಗಳ ಸಿಹಿ ಹಾಗೂ ಖಾರದ ಖಾದ್ಯಗಳು ಹಾಗೂ ಮರೆತುಹೋದ ವಿವಿಧ ಖಾದ್ಯಗಳಾದ ರಾಗಿಪೇಡ, ರಾಗಿ ಬಿಸ್ಕತ್, ನವಣಕ್ಕಿ ಉಪ್ಪಿಟ್ಟು, ಸಜ್ಜೆ ಕಡಬು, ನವಣೆ ಪೇಡಾ, ಸಾವೆ ಕಿಚಡಿ, ಉದಲೂ ಪಾಯಸ, ಸಜ್ಜೆ ಲಾಡು, ನವಣಕ್ಕಿ ಪಲಾವ್, ಚಿನ್ನಕುರುಳಿ, ಮಾಲ್ದಿ, ಒತ್ತುಶಾವಿಗೆ, ರಾಗಿ ಹಲ್ವ, ಆರ್ಕದ ಅಕ್ಕಿ ಉಂಡೆ, ಸಿರಿಧಾನ್ಯ ಉಂಡೆ, ಒತ್ತುಶಾವಿಗೆ ಕಾಯಿರಸ, ಸಜ್ಜೆರೊಟ್ಟಿ, ಕುಂಬಳಕಾಯಿ ಕಡಬು, ರಾಗಿ ಕಿಲ್ಸ್, ಸಿಹಿ ಪೊಂಗಲ್, ಸಿರಿಧಾನ್ಯ ಹಲ್ವ, ರಾಗಿ ದೋಸೆ, ನವಣಕ್ಕಿ ತಂಬಿಟ್ಟು, ರಾಗಿ ಬೆಲ್ಲದ ಬರ್ಫಿ, ಸಾಮೆ ಬಿಸಿ ಬೇಳೆಬಾತ್, ನವಣಕ್ಕಿ ಚಕ್ಕುಲಿ, ಸಾವೆಅಕ್ಕಿ ನಿಪ್ಪಟ್ಟು, ಸಜ್ಜೆ ಮಸಾಲೆ ರೊಟ್ಟಿ, ಸಾಮೆ ಅಕ್ಕಿಯ ಚಕ್ಕುಲಿ, ಹಾರಕ ಪಲಾವ್, ಬರಗು, ಅರ್ಕ, ಸಾವಯವ ಬೆಲ್ಲದಿಂದ ತಯಾರಿಸಿದ ಕೇಕ್ ಸೇರಿದಂತೆ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯ ಪ್ರದರ್ಶಿಸಿದರು.

WhatsApp Image 2024 11 14 at 4.29.12 PM 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X