ಜಪಾನ್ | ಜಿ7 ಶೃಂಗಸಭೆಯಲ್ಲಿ ಮೋದಿ-ರಿಷಿ ಸುನಕ್‌ ದ್ವಿಪಕ್ಷೀಯ ಮಾತುಕತೆ

Date:

Advertisements
  • ರಿಷಿ ಸುನಕ್‌, ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಜೊತೆಗೂ ಪ್ರಧಾನಿ ಮೋದಿ ಸಭೆ
  • ಜಪಾನ್‌ನ ಹಿರೋಷಿಮಾದಲ್ಲಿ ಮೇ 19-21ರವರೆಗೆ ನಡೆಯುತ್ತಿರುವ ಜಿ7 ಶೃಂಗಸಭೆ

ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾನುವಾರ (ಮೇ 21) ಭಾಗವಹಿಸಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಜೊತೆ ಮುಕ್ತ ವ್ಯಪಾರ ಸೇರಿ ಅನೇಕ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರು ಭಾರತ ಮತ್ತು ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆಗಳ ಪ್ರಗತಿ ಸೇರಿದಂತೆ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ ಪರಿಶೀಲಿಸಿದರು.

ರಿಷಿ ಸುನಕ್ ಹಾಗೂ ಪ್ರಧಾನಿ ಮೋದಿ ಅವರು ವ್ಯಾಪಾರ ಹೂಡಿಕೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಗಾಢಗೊಳಿಸುವ ಸಂಬಂಧ ಚರ್ಚಿಸಿದ್ದಾರೆ.

Advertisements

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್ ಮೂಲಕ ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಹಿತಿ ನೀಡಿದೆ.

“ಹಿರೋಷಿಮಾದಲ್ಲಿ ಪ್ರಧಾನಿ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಎರಡು ದೇಶಗಳಲ್ಲಿ ಎಫ್‌ಟಿಎ ಪ್ರಗತಿ, ಸಮಗ್ರ ಕಾರ್ಯತಂತ್ರಕ್ಕೆ ಉತ್ತೇಜನ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಮಾತನಾಡಿದರು. ರಿಷಿ ಸುನಕ್ ಹಾಗೂ ಪ್ರಧಾನಿ ಮೋದಿ ಅವರು, ಭಾರತ ಹಾಗೂ ಬ್ರಿಟನ್‌ನಲ್ಲಿ ವ್ಯಾಪಾರ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಮತ್ತು ಜನರ ಬಾಂಧವ್ಯ ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಸಹಕಾರ ಗಾಢವಾಗಿಸುವ ಸಂಬಂಧದ ಯೋಜನೆಗಳಿಗೆ ಸಮ್ಮತಿಸಿದರು” ಎಂದು ಸಚಿವಾಲಯ ಹೇಳಿದೆ.

ಭಾರತ ಹಾಗೂ ಬ್ರಿಟನ್ ದೇಶಗಳು ಕಳೆದ ವರ್ಷ ಜನವರಿಯಿಂದ ಎಫ್‌ಟಿಎ ಕುರಿತು ಮಾತುಕತೆ ನಡೆಸುತ್ತಿವೆ. 2022ರ ಅಂದಾಜು 34 ಬಿಲಿಯನ್ ಪೌಂಡ್‌ಗಳ ಮೌಲ್ಯದ ದ್ವಿಪಕ್ಷೀಯ ವ್ಯಾಪಾರ ಸಂಬಂಧ ಹೆಚ್ಚಿಸುವ ಒಪ್ಪಂದದ ಕುರಿತು ರಿಷಿ ಸುನಕ್‌ ಹಾಗೂ ಪ್ರಧಾನಿ ಚರ್ಚೆ ನಡೆಸಿದರು.

ಕಳೆದ ತಿಂಗಳು ಭಾರತ ಹಾಗೂ ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಒಂಬತ್ತನೇ ಸುತ್ತಿನ ಮಾತುಕತೆಯನ್ನು ಚರ್ಚೆಗಳ ಮೂಲಕ ಮುಕ್ತಾಯಗೊಳಿಸಿದ್ದವು.

ರಿಷಿ ಸುನಕ್ ಅವರಿಗೂ ಮುನ್ನ ಶನಿವಾರ (ಮೇ 20) ಪ್ರಧಾನಿ ಮೋದಿ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ನೈರುತ್ಯ ಮಾನ್ಸೂನ್ | ದೇಶದಲ್ಲಿ ಲಘು ಹಾಗೂ ಭಾರೀ ಪ್ರಮಾಣದ ಮಳೆ: ಐಎಂಡಿ

ಯುದ್ಧಪೀಡಿತ ಉಕ್ರೇನ್‌ಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ಮೋದಿ ಝೆಲೆನ್ಸ್ಕಿಗೆ ಭರವಸೆ ನೀಡಿದರು.

ಮೇ 19ರಿಂದ 21ರವರೆಗೆ ಜಪಾನ್‌ನ ಹಿರೋಷಿಮಾದಲ್ಲಿ ಜಿ7 ಶೃಂಗಸಭೆ ನಡೆಯುತ್ತಿದೆ. ಇದರಲ್ಲಿ ಇಂಗ್ಲೆಂಡ್, ಅಮೆರಿಕ, ಜಪಾನ್, ಭಾರತ, ಫ್ರಾನ್ಸ್, ಜರ್ಮನಿ, ಕೆನಡಾ, ಇಟಲಿ ದೇಶದ ನಾಯಕರು ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಗಾಝಾದಲ್ಲಿ ವಿದೇಶಿ ಮಾಧ್ಯಮ ಪ್ರವೇಶ ನಿರ್ಬಂಧ ತೆರವುಗೊಳಿಸಿ: ಇಸ್ರೇಲ್‌ಗೆ 27 ದೇಶಗಳ ಒಕ್ಕೂಟ ಆಗ್ರಹ

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಸರ್ಕಾರವು ವಿಧಿಸಿರುವ ವಿದೇಶಿ ಪತ್ರಕರ್ತರ ನಿರ್ಬಂಧವನ್ನು ತೆಗೆದುಹಾಕಿ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X