ದಾವಣಗೆರೆ | ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ನುಗ್ಗಿದ ಖಾಸಗಿ ಬಸ್

Date:

Advertisements

ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಸ್ಸು ನುಗ್ಗಿದ ಘಟನೆ ದಾವಣಗೆರೆ ನಗರದ ಹೊರವಲಯದಲ್ಲಿ ನಡೆದಿದೆ.

ದಾವಣಗೆರೆ ನಗರದ ಹೊರವಲಯದಲ್ಲಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ಸೊಂದು ಚಲಿಸುತ್ತಿದ್ದ ವೇಳೆ ಅಚಾನಕ್ಕಾಗಿ ಎದುರಾದ ಕಾರನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ರಸ್ತೆ ಬಿಟ್ಟು ಬದಿಯಲ್ಲಿನ ಹಳ್ಳದ ಕಡೆಗೆ ನುಗ್ಗಿದೆ. ಅಷ್ಟರಲ್ಲಿ ಎಚ್ಚೆತ್ತ ಚಾಲಕ ಬ್ರೇಕ್ ಹಾಕಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.

WhatsApp Image 2024 11 14 at 9.48.48 PM

ಎದುರಿಗೆ ಬಂದ ಕಾರು, ಬೈಕನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ, ಬಸ್ನಲ್ಲಿ 35-40 ಪ್ರಯಾಣಿಕರಿದ್ದರು. ಯಾರಿಗೂ ತೀವ್ರ ಸ್ವರೂಪದ ಗಾಯಗಳಾಗಿಲ್ಲ. ಅಷ್ಟಕ್ಕೆ ನಿಯಂತ್ರಿಸಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಕೇವಲ ಹದಿನೈದು ಇಪ್ಪತ್ತು ಅಡಿಗಳಷ್ಟು ಮುಂದೆ ಸಾಗಿದ್ದರೆ ಹಳ್ಳದ ಆಳದ ಕಮರಿಗೆ ಬಿದ್ದು ಸಾವುನೋವುಗಳು ಹೆಚ್ಚುತ್ತಿದ್ದವು ಎಂದು ಅಲ್ಲೇ ಹತ್ತಿರದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಮಾಹಿತಿ ನೀಡಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ನೆರೆಮನೆಗೆ ಆಟವಾಡಲು ಹೋದ ಮಗ, ಬಂದಿದ್ದು ಶವವಾಗಿ : ಹೂತಿದ್ದ ಶವ ಹೊರ ತೆಗೆಸಿದ್ದು ಯಾಕೆ?

ಬಸ್ ನ ಈ ಅವಘಡದಿಂದಾಗಿ ಜಗಳೂರು ರಸ್ತೆಯಲ್ಲಿ ಕೆಲಕಾಲ ರಸ್ತೆ ಓಡಾಟ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

dvg1 1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X