ಶಿವಮೊಗ್ಗ | ಸರ್ಕಾರಿ ನೌಕರರ ಸಂಘದ ಚುನಾವನೆಯ ನಡುವೆಯೇ ತಹಶೀಲ್ದಾರ್ ಗಿರೀಶ್ ದಿಢೀರ್ ವರ್ಗಾವಣೆ

Date:

Advertisements

ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ಕಾವೇರಿದೆ. ಈ ನಡುವೆ ಬಣ ರಾಜಕಾರಣ ಜೋರಾಗಿದೆ. ಭಾರೀ ಹೈಡ್ರಾಮಾಕ್ಕೆ ವೇದಿಕೆ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಚುನಾವಣೆಗೆ ಸ್ಪರ್ಧಿಸಿದ್ದ ಶಿವಮೊಗ್ಗ ತಹಶೀಲ್ದಾರ್ ಬಿ ಎನ್ ಗಿರೀಶ್ ಅವರನ್ನು ದಿಡೀರ್ ವರ್ಗಾವಣೆ ಮಾಡಲಾಗಿದೆ.

ಬಿ ಎನ್ ಗಿರೀಶ್ ಅವರು ಶಿವಮೊಗ್ಗ ತಾಲೂಕು ಕಂದಾಯ ವಿಭಾಗದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಇದೇ ವಿಭಾಗದಿಂದ ಶಿವಮೊಗ್ಗ ಉಪ ವಿಭಾಗದ ಉಪವಿಭಾಗಾಧಿಕಾರಿ ಸತ್ಯನಾರಾಯಣ ಜಿ ಹೆಚ್ ಅವರು ಸ್ಪರ್ಧಿಸಿದ್ದರು. ಇಬ್ಬರ ನಡುವೆ ಭಾರೀ ಪೈಪೋಟಿ ಕಂಡುಬಂದಿತ್ತು.

ಈ ನಡುವೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಮೋಹನ್ ಕುಮಾರ್ ಅವರು, ಸಿ ಎಸ್ ಷಡಾಕ್ಷರಿ ಬಣದಿಂದ ಹೊರಬಂದು ಪ್ರತ್ಯೇಕ ಗುಂಪು ರಚಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿದ್ದರು. ಸದರಿ ಮೋಹನ್ ಕುಮಾರ್ ಗಂಪಿನಲ್ಲಿ ಸತ್ಯನಾರಾಯಣ ಜಿ ಹೆಚ್ ಅವರು ಕೂಡ ಕಾಣಿಸಿಕೊಂಡಿದ್ದರು.

Advertisements

ಈ ನಡುವೆ ಸತ್ಯನಾರಾಯಣ ಅವರ ಎದುರಾಳಿಯಾಗಿ ಕಣಕ್ಕಿಳಿದಿದ್ದ, ತಹಶೀಲ್ದಾರ್ ಬಿ ಎನ್ ಗಿರೀಶ್ ಅವರನ್ನು ನ. 14ರಂದು ವರ್ಗಾವಣೆಗೊಳಿಸಲಾಗಿದೆ. ಅವರ ಸ್ಥಾನಕ್ಕೆ ರಾಜೀವ್ ಎಂಬುವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚುನಾವಣೆಗೆ ಸ್ಪರ್ಧಿಸಿದ್ದ ಕಾರಣದಿಂದಲೇ ಬಿ ಎನ್ ಗಿರೀಶ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಇದು ರಾಜಕೀಯ ಪ್ರೇರಿತ ಎಂಬ ಮಾತುಗಳು ಕೇಳಿಬರಲಾರಂಭಿಸಿವೆ.

ಇದನ್ನು ಓದಿದ್ದೀರಾ? ತನಗೆ ಏಡ್ಸ್‌ ರಕ್ತ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದ ಮುನಿರತ್ನ; ದೇಶವನ್ನೇ ತೊರೆಯಲು ನಿರ್ಧರಿಸಿದ್ದ ಆರ್ ಅಶೋಕ್

ಒಟ್ಟಾರೆ, ಶಿವಮೊಗ್ಗ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಚುನಾವಣೆಯು ದಿನಕ್ಕೊಂದು ತಿರುವು ಪಡೆದುಕೊಳ್ಳಲಾರಂಭಿಸಿದ್ದು, ರಾಜಕೀಯ ಬಣ್ಣ ಪಡೆದುಕೊಳ್ಳಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಯಾವೆಲ್ಲ ಅಧಿಕಾರಿಗಳು ಗುರಿ ಆಗಲಿದ್ದಾರೆ? ಯಾವ ಬಣದ ಕೈ ಮೇಲಾಗಲಿದೆ? ಎಂಬುವುದನ್ನು ಕಾದು ನೋಡಬೇಕಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X