ವಾರಕ್ಕೆ 70 ಗಂಟೆ ದುಡಿಮೆ | ನಾನು ಸತ್ತರೂ ನನ್ನ ಅಭಿಪ್ರಾಯ ಬದಲಿಸಿಕೊಳ್ಳಲ್ಲ: ನಾರಾಯಣ ಮೂರ್ತಿ

Date:

Advertisements

ವಾರಕ್ಕೆ 70 ಗಂಟೆ ದುಡಿಯಬೇಕು ಎಂದು ಕೆಲಸದ ಅವಧಿ ಬಗ್ಗೆ ಈ ಹಿಂದೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಈಗ ಮತ್ತೆ ತಮ್ಮ ಹಳೆಯ ಹೇಳಿಕೆಯನ್ನು ಪುನರುಚ್ಚರಿಸಿ, ಸತ್ತರೂ ನನ್ನ ಅಭಿಪ್ರಾಯವನ್ನು ಬದಲಿಸಿಕೊಳ್ಳಲ್ಲ ಎಂದಿದ್ದಾರೆ.

ನವದೆಹಲಿಯಲ್ಲಿ ನಡೆದ ಸಿಎನ್‌ಬಿಸಿ ಗ್ಲೋಬಲ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಶೆರೀನ್ ಭಾನ್ ಜತೆ ಸಂವಾದದ ವೇಳೆ ವಾರದಲ್ಲಿ ಆರು ದಿನ ಕೆಲಸದ ಕುರಿತಾದ ಅಭಿಪ್ರಾಯವನ್ನು ಸಮರ್ಥಿಸಿಕೊಂಡರು.

“ಉದ್ಯೋಗದ ಅವಧಿ ವಿಸ್ತರಣೆ ಕುರಿತು ನನ್ನ ನಿಲುವು ಬದಲಾಗುವುದಿಲ್ಲ. ಪ್ರತಿಭಾವಂತರು ದಿನಕ್ಕೆ ಕನಿಷ್ಠ 10 ತಾಸು ಕೆಲಸ ಮಾಡಲೇಬೇಕು. ಅಂದಾಗ ನಮ್ಮ ದೇಶ ಸಾಕಷ್ಟು ಅಭಿವೃದ್ಧಿ ಹೊಂದಲು ಸಾಧ್ಯ” ಎಂದು ಹೇಳಿದ್ದಾರೆ.

Advertisements

“ನನ್ನ ಹೇಳಿಕೆಯಿಂದ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ಕೆಲಸದ ಅವಧಿ ವಿಚಾರದಲ್ಲಿ ನಾನು ಸತ್ತರೂ ನನ್ನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವುದಿಲ್ಲ. ಕಠಿಣ ಪರಿಶ್ರಮವೇ ದೇಶದ ಅಭಿವೃದ್ಧಿಗೆ ಮೂಲಾಧಾರ” ಎಂದು ಅಭಿಪ್ರಯಾಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

“ಪ್ರಧಾನಿ ಮೋದಿ ಅವರು ವಾರಕ್ಕೆ 100 ಗಂಟೆವರೆಗೆ ಕೆಲಸ ಮಾಡುತ್ತಾರೆ. ಅವರಿಗೆ ಈ ದೇಶದ ಯುವಕರು ಮೆಚ್ಚುಗೆ ಸೂಚಿಸಬೇಕಾದರೆ ಅವರಂತೆಯೇ ವಾರಕ್ಕೆ ಕನಿಷ್ಠ 70 ತಾಸಾದರೂ ಕೆಲಸ ಮಾಡಬೇಕು. ನಾನು ನನ್ನ ವೃತ್ತಿ ಜೀವನದ ಆರಂಭದಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡುತ್ತಿದ್ದೆ. ಬೆಳಿಗ್ಗೆ 6.30 ಕ್ಕೆ ಕಚೇರಿಯಲ್ಲಿ ಹಾಜರಿರುತ್ತಿದ್ದೆ. ರಾತ್ರಿ 8-30 ಕ್ಕೆ ಮನೆಗೆ ಹೊರಡುತ್ತಿದ್ದೆ. ಸಮರ್ಪಣೆಯಿಂದ ಕೆಲಸ ಮಾಡುತ್ತಿದ್ದೆ. ಕಠಿಣ ಪರಿಶ್ರಮವು ನಮ್ಮ ಸಂಸ್ಕೃತಿಯಲ್ಲೇ ಇದೆ” ಎಂದು ಪ್ರತಿಪಾದಿಸಿದ್ದಾರೆ.

ಜರ್ಮನಿ, ಜಪಾನ್ ದೇಶದವರು ಕಠಿಣ ಪರಿಶ್ರಮದಿಂದಲೇ ದೇಶ ಕಟ್ಟಿದ್ದಾರೆ. ಅದಕ್ಕೆ ಪರ್ಯಾಯ ಯಾವುದೂ ಇಲ್ಲ. 1986 ರಲ್ಲಿ ನನಗೆ ದೊಡ್ಡ ಶಾಕ್ ಆಗಿತ್ತು. ಆಗ ಭಾರತದಲ್ಲಿ ಐಟಿ ಹಾಗೂ ಇತರ ಕೆಲ ವಲಯಗಳಲ್ಲಿ ವಾರದ ಆರು ದಿನ ಬದಲು 5 ದಿನ ಕೆಲಸ ಮಾಡುವ ನೀತಿ ತರಲಾಯಿತು. ಇದರಿಂದ ನಾನು ವಿಚಲಿತನಾಗಿದ್ದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X