ಮೈಸೂರು | ನ್ಯಾ. ರವೀಂದ್ರ ಹೆಗಡೆಯವರಿಗೆ ಆತ್ಮೀಯ ಬೀಳ್ಕೊಡುಗೆ

Date:

Advertisements

ಮೈಸೂರು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ, ಕರ್ನಾಟಕ ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್(ವಿಜಿಲೆನ್ಸ್) ಆಗಿ ವರ್ಗಾವಣೆಗೊಂಡಿರುವ ನ್ಯಾ. ರವೀಂದ್ರ ಹೆಗಡೆ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಮೈಸೂರು ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಿಗೆ ಮೈಸೂರು ಪೇಟ ತೊಡಿಸಿ, ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯ ನೆನಪಿನ ಕಾಣಿಕೆ ಹಾಗೂ ಹೂಗುಚ್ಛ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು.

ನ್ಯಾಯಮೂರ್ತಿ ರವೀಂದ್ರ ಹೆಗಡೆಯವರು ಮಾತನಾಡಿ, “ಮೈಸೂರಿನ ನ್ಯಾಯಾಲಯದಲ್ಲಿ ಕೆಲಸ ಮಾಡುವುದೇ ಒಂದು ಹೆಮ್ಮೆಯ ಸಂಗತಿ. ಇಲ್ಲಿನ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ನನಗೆ ಪೂರ್ಣ ಸಹಕಾರ ನೀಡಿದರು. ಈ ಸಹಕಾರದಿಂದ ಕೆಲವೊಂದಷ್ಟು ಕೆಲಸಗಳನ್ನು ಮಾಡಲು ಸಾಧ್ಯವಾಯಿತು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬಸವಕಲ್ಯಾಣ | ಗ್ರಂಥಾಲಯಗಳಿಂದ ಜ್ಞಾನ ಪರಂಪರೆ ವಿಸ್ತರಣೆ ಸಾಧ್ಯ : ಸಿದ್ದಪ್ಪ ಮೂಲಗೆ

“ಮೈಸೂರಿನಲ್ಲಿ ಕೆಲಸ ಮಾಡಿದ್ದಕ್ಕೆ ನನಗೆ ನೆಮ್ಮದಿಯಿದೆ. ನೀವೆಲ್ಲರೂ ನನಗೆ ಅಂತಹ ಅವಕಾಶ ದೊರಕಿಸಿದ್ದಕ್ಕೆ ನಾನೆಂದೂ ಆಭಾರಿ. ಕ್ಯಾಂಟೀನ್ ಸೌಲಭ್ಯ ಮತ್ತು ಶೌಚಾಲಯಗಳ ಉನ್ನತೀಕರಿಸುವ ಬಗ್ಗೆ ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದರು.

ಈ ವೇಳೆ ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್ ಲೋಕೇಶ್, ಕಾರ್ಯದರ್ಶಿ ಎ ಜಿ ಸುಧೀರ್, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X