ಸಿಎಂ ಕೆಳಗಿಳಿಸಲು ಸಾವಿರ ಕೋಟಿ ಇಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು: ವಿಜಯೇಂದ್ರ ಆರೋಪ

Date:

Advertisements

ಮೊನ್ನೆ ನಡೆದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಿನ್ನಡೆ ಆಗುವುದಾಗಿ ಖಾತ್ರಿಯಾಗಿ, ಕಾಂಗ್ರೆಸ್ಸಿನ ಘಟಾನುಘಟಿ ನಾಯಕರು ಸಾವಿರಾರು ಕೋಟಿಯೊಂದಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೂ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಆಡಳಿತದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರಿಗೂ ಈ ಮಾಹಿತಿ ಸಿಕ್ಕಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಶಾಸಕರ ಖರೀದಿ ವಿಚಾರಕ್ಕೆ ಬರುವ ದಿನಗಳಲ್ಲಿ ಕಾಲವೇ ಉತ್ತರ ಕೊಡಲಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ ಎಂಬುದು ಸ್ವತಃ ಸಿದ್ದರಾಮಯ್ಯನವರಿಗೆ ಮನವರಿಕೆ ಆಗಿದೆ. ಹಾಗಾಗಿ ಬಿಜೆಪಿ ವಿರುದ್ಧ ಈ ರೀತಿ ಆರೋಪ, ಗೂಬೆ ಕೂರಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿದರು. ಯಾವತ್ತು ರಾಜೀನಾಮೆ ಕೊಡುತ್ತಾರೆ? ಯಾರು ಹೊಸ ಸಿಎಂ ಎಂಬುದೇ ಪ್ರಶ್ನೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

Advertisements

ಕಾಂಗ್ರೆಸ್ ಪಕ್ಷದೊಳಗಡೆ ಕುದುರೆ ವ್ಯಾಪಾರ ನಡೆದಿದೆ. ಬಿಜೆಪಿಯಲ್ಲಿ ಇರುವುದು ಕೇವಲ 66 ಶಾಸಕರು ಮಾತ್ರ. ಆ ಪ್ರಶ್ನೆ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ, ನಿಮ್ಮ ಅಕ್ಕಪಕ್ಕ ಇರುವ ಹಿರಿಯ ಸಚಿವರಿಗೆ ತಾವು ಭಯ ಪಡಬೇಕಿದೆ. ಬಿಜೆಪಿ ಬಗ್ಗೆ ಆತಂಕ ಬೇಕಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ವಿಚಾರದಲ್ಲಿ ಬದಲಾವಣೆ ಆಗುವುದಿಲ್ಲ. ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಳಿಕ ಯಾವಾಗ ಬೇಕಿದ್ದರೂ ತೀರ್ಮಾನ ಆಗಲಿದೆ. ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

3 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು

ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್‍ಡಿಎ ಗೆಲ್ಲಲಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಭ್ರಮೆಯಲ್ಲಿತ್ತು. ಆದರೆ, ಅಲ್ಲಿ ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗೆದ್ದೇಗೆಲ್ಲುವ ವಾತಾವರಣ ಇದೆ ಎಂದು ತಿಳಿಸಿದರು. ಅದೇ ರೀತಿ ಸಂಡೂರಿನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನ ವಿಶ್ವಾಸ ಇದೆ. ಶಿಗ್ಗಾಂವಿಯಲ್ಲೂ ಭರತ್ ಬೊಮ್ಮಾಯಿಯವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. 3 ಕ್ಷೇತ್ರಗಳಲ್ಲೂ ಬಿಜೆಪಿ- ಎನ್‍ಡಿಎ ಗೆದ್ದು ಹೊಸ ಇತಿಹಾಸ ಸೃಷ್ಟಿ ಆಗಲಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹತಾಶರಾಗಿ ಮಾತನಾಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಪಕ್ಷದ ಶಾಸಕರಿಗೆ ₹50 ಕೋಟಿಯನ್ನು ಆಮಿಷವಾಗಿ ಒಡ್ಡುತ್ತಿದ್ದು, ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯನವರು ಮಾಡಿದ್ದು ಬಿಜೆಪಿ ವಿರುದ್ಧ ನೇರ ಆರೋಪ ಮಾಡಿದ್ದಾಗಿ ಆಕ್ಷೇಪಿಸಿದರು.

ವಾಸ್ತವಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಸ್ವತಃ ಮುಖ್ಯಮಂತ್ರಿಗಳು, ಅವರ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸಿದ್ದರಾಮಯ್ಯರಿಗೆ ತಮ್ಮ ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ ಎಂದು ಮನವರಿಕೆಯಾಗಿದೆ. ಕಾಂಗ್ರೆಸ್ಸಿನ ಒಳಗಡೆ ಇವತ್ತು ನಾಲ್ಕಾರು ಜನ ಕಾಂಗ್ರೆಸ್ಸಿನ ಹಿರಿಯ ಮುಖಂಡರು ಹೇಗಾದರೂ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಮುಂದಾಗಿದ್ದಾರೆ. ಹೊರಗಡೆಯಿಂದ ಬಂದವರಿಗೆ 5 ವರ್ಷ ಅವಕಾಶ ಕೊಟ್ಟಿದ್ದು, ಈಗ ಮತ್ತೆ 2 ವರ್ಷವಾಗಿದೆ ಎಂಬ ಭಾವನೆ ಇದೆ ಎಂದು ವಿಶ್ಲೇಷಿಸಿದರು.

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ಭ್ರಮೆಯಲ್ಲಿದ್ದರು. ಕರ್ನಾಟಕದ ಭ್ರಷ್ಟಾಚಾರದ ಪರಿಣಾಮವಾಗಿ ಕಾಂಗ್ರೆಸ್ ಹರಿಯಾಣದಲ್ಲಿ ಸೋತಿದೆ. ಈಗ ಮಹಾರಾಷ್ಟ್ರದಲ್ಲೂ ಸೋಲಲಿದ್ದಾರೆ ಎಂದು ವಿವರಿಸಿದರು.

ಎರಡು ಹಂತದಲ್ಲಿ ಹೋರಾಟಕ್ಕೆ ತೀರ್ಮಾನ

ಬಿಜೆಪಿ ಹಿರಿಯರ ಜೊತೆ ಚರ್ಚೆ ನಡೆಸಿದ್ದು, ಎರಡು ಹಂತದಲ್ಲಿ ಹೋರಾಟಕ್ಕೆ ತೀರ್ಮಾನ ಮಾಡಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಒಟ್ಟಾರೆಯಾಗಿ ಎರಡು ಹಂತದಲ್ಲಿ ಹೋರಾಟಕ್ಕೆ ನಿರ್ಧರಿಸಿದ್ದೇವೆ. ಅದರ ಪ್ರಕಾರ 3 ತಂಡಗಳ ರಚನೆ ಮಾಡಿದ್ದೇವೆ ಎಂದು ತಿಳಿಸಿದರು.

ರೈತರ ಪರವಾಗಿ ಹೋರಾಟಕ್ಕೆ ಮುಜುಗರ ಯಾಕೆ? ಅದರ ಬಗ್ಗೆ ನಮ್ಮ ತಕರಾರಿಲ್ಲ ಎಂದ ಅವರು, ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಅಯೋಗ್ಯತನವನ್ನು ಪ್ರದರ್ಶಿಸುತ್ತಿದೆ. ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರಾಜ್ಯದ ರೈತರು ಆತಂಕದಲ್ಲಿದ್ದಾರೆ. ಮಠಮಾನ್ಯಗಳ ಜಮೀನು, ದೇವಸ್ಥಾನಗಳ ಜಮೀನನ್ನು ಕಿತ್ತುಕೊಳ್ಳಲಾಗುತ್ತಿದೆ. ರಾಜ್ಯ ಸರಕಾರ ಸ್ಪಷ್ಟ ಉತ್ತರ ಕೊಡುವವರೆಗೆ, ಎಲ್ಲಿನವರೆಗೆ ರೈತರಿಗೆ ನಿರಾಳತೆ ಸಿಗುವುದಿಲ್ಲವೋ ಅಲ್ಲಿನವರೆಗೆ ದೃಢವಾಗಿ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಎಲ್ಲ ಶಾಸಕರು, ಹಿರಿಯರು, ವಿಧಾನ ಪರಿಷತ್ ಸದಸ್ಯರು, ಕೇಂದ್ರ ಸಚಿವರೂ ಹೋರಾಟದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು. ರೈತರ ಪರವಾಗಿ ಧ್ವನಿ ಎತ್ತಿದ ಪಕ್ಷ ಬಿಜೆಪಿ. ಯಡಿಯೂರಪ್ಪನವರು ರೈತರ ಪರವಾಗಿ ರೈತರ ಹೆಸರಿನಲ್ಲೇ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಿದವರು. ಹಾಗಾಗಿ ರೈತರ ವಿಚಾರದ ಹೋರಾಟದಲ್ಲಿ ಬಿಜೆಪಿ ಹಿಂದೆ ಬೀಳುವ ಪ್ರಶ್ನೆಯೇ ಇಲ್ಲ. ಪಕ್ಷದ ಹಿರಿಯರ ತಂಡವನ್ನು ರಚಿಸಿದ್ದು, ಶೀಘ್ರವೇ ವಿವರ ನೀಡುವುದಾಗಿ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X