ಕೇಂದ್ರ ಸರ್ಕಾರದ ರೈತ ವಿರೋಧಿ ಖಂಡಿಸಿ, ಸ್ವಾಮಿನಾಥನ್ ವರದಿಯ ಶಿಫಾರಸುಗಳ ಜಾರಿಗೆ ಒತ್ತಾಯಿಸಿ ನವೆಂಬರ್ 26ರಂದು ರಾಯಚೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಯ ರಾಜ್ಯ ಮುಖಂಡ ಚಾಮರಸ ಮಾಲಿಪಾಟೀಲ್ ತಿಳಿಸಿದರು.
ಮಾನ್ವಿ ಪಟ್ಟಣದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರ ಹೋರಾಟಕ್ಕೆ ನಾಲ್ಕು ವರ್ಷಗಳು ಕಳೆದರೂ ರೈತರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ರಾಜ್ಯದ ಎಲ್ಲ ರೈತಪರ, ದಲಿತಪರ, ಕಾರ್ಮಿಕಪರ ಸಂಘಟನೆಗಳು ಹಾಗೂ ಪ್ರಗತಿಪರರು ಒಳಗೊಂಡಂತೆ ರಾಜ್ಯದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವನ್ನು ಸ್ಥಾಪಿಸಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ: ಓರ್ವ ಸಾವು
ಸಂಯುಕ್ತ ಕಿಸಾನ್ ಮೋರ್ಚಾ ತಾಲ್ಲೂಕು ಅಧ್ಯಕ್ಷ ಅಶೋಕ ನಿಲೋಗಲ್, ಪದಾಧಿಕಾರಿಗಳಾದ ಲಿಂಗಾರೆಡ್ಡಿ ಪಾಟೀಲ್, ಬಸವರಾಜ ಮಾಲಿಪಾಟೀಲ್. ಗೌರಪ್ಪಲಕ್ಕಂದಿನ್ನಿ, ವೆಂಕಟೇಶ ನಾಯಕ, ಜಿ.ಕೃಷ್ಣಮೂರ್ತಿ, ವೀರೇಶ ನಾಯಕ ಉಪಸ್ಥಿತರಿದ್ದರು.
