ಧಾರವಾಡ | 30ವರ್ಷ ಮೇಲ್ಪಟ್ಟವರು ಮಧುಮೇಹ ತಪಾಸಣೆಗೆ ಒಳಗಾಗಬೇಕು: ಡಾ.ಪರಶುರಾಮ ಎಫ್.ಕೆ

Date:

Advertisements

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ 2024 ಅಂಗವಾಗಿ ನವೆಂಬರ್ 14ರಂದು ಧಾರವಾಡ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ತಪಾಸಣೆಯನ್ನು ಹಮ್ಮಿಕೊಂಡಿದ್ದರು.

ಜನರಲ್ ಫಿಜಿಸಿಯನ್ ಡಾ. ನಿವೇದಿತಾ ಪಾಟೀಲ ಮಾತನಾಡಿ, ಬದಲಾದ ಜೀವನ ಶೈಲಿ, ಅನಿಯಂತ್ರಿತ ಆಹಾರ ಕ್ರಮ, ದೈಹಿಕ ಶ್ರಮ ಇಲ್ಲದಿರುವುದು ಮಧುಮೇಹ ವಿಶ್ವದಾದ್ಯಂತ ಹೆಚ್ಚಾಗಲು ಕಾರಣವಾಗಿವೆ ಎಂದರು.

ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮಾಧಿಕಾರಿ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪರಶುರಾಮ ಎಫ. ಕೆ ಮಾತನಾಡಿ, 30 ವರ್ಷ ಮೇಲ್ಪಟ್ಟ ಎಲ್ಲರು ಮಧುಮೇಹ ತಪಾಸಣೆಗೆ ಒಳಗಾಗಬೇಕು. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಎಲ್ಲಡೆ ಮಧುಮೇಹ ತಪಾಸಣೆ ಲಭ್ಯವಿದ್ದು, ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಮಧುಮೇಹ ಖಚಿತಪಟ್ಟಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ತಿಳಿಸಿದರು.

Advertisements

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ ಮಾತನಾಡಿ, ದೈಹಿಕ ಶ್ರಮವಿಲ್ಲದಿರುವುದು, ಧೂಮಪಾನ, ಮದ್ಯಪಾನ, ಒತ್ತಡದ ಜೀವನಶೈಲಿಯಿಂದ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಅಗತ್ಯ ಮುಂಜಾಗ್ರತಾ ಕ್ರಮಗಳಿಂದ ಮಧುಮೇಹವನ್ನು ದೂರವಿಡಬಹುದು. ಮಧುಮೇಹವಿದ್ದಲ್ಲಿ ವೈದ್ಯಕೀಯ ಸಲಹೆ ಅನುಸಾರವಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಯಮಿತ ಆಹಾರ ಸೇವನೆ ಮತ್ತು ದಿನನಿತ್ಯ ಮುಂಜಾನೆ ನಡಿಗೆಯಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಮುಖ್ಯ ಚಿಕಿತ್ಸಕ ಡಾ. ಸ್ವಾಮಿ, ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್‍ನ ಜನರಲ್ ಫಿಜಿಸಿಯನ್ ಡಾ. ವಾಸಂತಿ ಜೀರಗಳ, ಎನ್.ಪಿ.ಎಚ್.ಸಿ.ಇ ಮತ್ತು ಎನ್.ಪಿ.ಪಿ.ಸಿ ವೈದ್ಯಾಧಿಕಾರಿಗಳು, ಹಿರಿಯ ಶುಶ್ರೂಷಕ ಅಧಿಕಾರಿಗಳು, ಜಿಲ್ಲಾ ಎನ್.ಸಿ.ಡಿ ಘಟಕ ಮತ್ತು ಎನ್.ಸಿಡಿ ಕ್ಲಿನಿಕ್ ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X