ಕೊಡಗು | ಮನೆಯ ಮುಂದಿನ ಗೇಟ್‌ ಮುರಿದು ಕಾಡಾನೆ ದಾಂಧಲೆ

Date:

Advertisements

ಕೊಡಗು ಜಿಲ್ಲೆ ಮಡಿಕೇರಿ, ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹುದುಗೂರು ಗ್ರಾಮದಲ್ಲಿ ಮನೆಯ ಗೇಟ್‌ ಮುರಿದು ಒಳನುಗ್ಗಿದ ಘಟನೆ ನಡೆದಿದೆ.

ಬೆಂಡೆಬೆಟ್ಟ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಹಾರಂಗಿ ನದಿಯನ್ನು ದಾಟಿದ್ದ ಎರಡು ಕಾಡಾನೆಗಳು ರೈತ ಶಿವಕುಮಾರ್ ಅವರ ಮನೆಯ ಮುಂಭಾಗದ ಕಬ್ಬಿಣದ ಗೇಟನ್ನು ಮುರಿದಿವೆ. ಬಳಿಕ ಮನೆಯ ಹತ್ತಿರದ ಜಮೀನಿಗೆ ಪ್ರವೇಶಿಸಿ ಹುಲುಸಾಗಿ ಬೆಳೆದಿದ್ದ ಅಡಿಕೆ ಮತ್ತು ಬಾಳೆ ಗಿಡಗಳನ್ನು ತುಳಿದುಹಾಕಿವೆ.

ಕಾಡಾನೆಗಳು ಹುದುಗೂರು ಮೀಸಲು ಅರಣ್ಯ ಮತ್ತು ಹಾರಂಗಿ ನದಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡುಬಿಟ್ಟಿದ್ದು, ಸಂಜೆ 6 ಗಂಟೆಯ ಬಳಿಕ ಮುಖ್ಯ ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ.

Advertisements

ಈ ಸುದ್ದಿಒ ಓದಿದ್ದೀರಾ? ಚಾಮರಾಜನಗರ | ಹೆಚ್ಚಿದ ಆನೆ ಹಾವಳಿ; ತಡೆಗೆ ಅರಣ್ಯ ಇಲಾಖೆ ಸಿದ್ಧತೆ

“ಕಾಡಾನೆಗಳು ಗ್ರಾಮದಲ್ಲೆಲ್ಲ ದಾಂಧಲೆ ನಡೆಸುತ್ತಿವೆ. ಬೀಡುಬಿಟ್ಟಿರುವ ಆನೆಗಳನ್ನು ಆನೆಕಾಡು ಮೀಸಲು ಅರಣ್ಯ ಪ್ರದೇಶಕ್ಕೆ ಓಡಿಸಬೇಕು” ಎಂದು ಸ್ಥಳೀಯರು, ಹುದಗೂರು ವಲಯ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X