ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಸಚಿವ ಜಮೀರ್‌ ಅ‌ಹಮದ್ ಖಾನ್‌ಗೆ ಲೋಕಾಯುಕ್ತ ನೋಟಿಸ್

Date:

Advertisements

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅ‌ಹಮದ್‌ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಕಚೇರಿ ನೋಟಿಸ್ ಜಾರಿಗೊಳಿಸಿದೆ.

ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ. ಇ.ಡಿ ದಾಳಿಯ ಬಳಿಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ.

ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ. ಯಾವುದೇ ಸಬೂಬು ಹೇಳದೆ ಖುದ್ದು ತಾವೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಜಮೀರ್‌ ಅವರಿಗೆ ಲೋಕಾಯುಕ್ತ ಪೊಲೀಸರು ಹೇಳಿರುವುದಾಗಿ ತಿಳಿದು ಬಂದಿದೆ. ಇದರೊಂದಿಗೆ ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಜಮೀ‌ಅವರಿಗೆ ಮತ್ತೆ ಪೊಲೀಸರ ತನಿಖೆ ಬಿಸಿ ಎದುರಾಗಿದ್ದು, ತಮ್ಮ ಹಣಕಾಸು ವ್ಯವಹಾರದ ಕುರಿತು ಲೆಕ್ಕವನ್ನು ಲೋಕಾಯುಕ್ತಕ್ಕೆ ಸಚಿವರು ಸಲ್ಲಿಸಬೇಕಿದೆ. ತಮ್ಮ ಮೇಲಿನ ಆದಾಯಕ್ಕೂ ಅಧಿಕ ಆಸ್ತಿ ಗಳಿಸಿದ ಆರೋಪದ ವಿಚಾರಣೆಗೆ ಪೂರಕ ದಾಖಲೆ ಸಮೇತ ಬರಲು ಸಚಿವರಿಗೆ ಕಾಲಾವಕಾಶ ನೀಡಲಾಗಿದೆ.‌

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರದ ನಾಗಾ, ಕುಕಿಗಳೂ ಬುಡಕಟ್ಟು ಜನರು ಎಂದು ಪ್ರಧಾನಿಗೆ ನೆನಪಿಸಬೇಕಿದೆ

ಮೂರು ವಾರ ಸಮಯದಲ್ಲಿ ಅವರು ಪುರಾವೆ ಸಂಗ್ರಹಿಸಿ ಬರಲಿ. ವಿಚಾರಣೆ ವೇಳೆ ಅವರು ನೀಡುವ ಹೇಳಿಕೆ ಹಾಗೂ ಸಲ್ಲಿಸುವ ದಾಖಲೆಗಳನ್ನು ಪರಾಮರ್ಶಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ. ತಪ್ಪು ಮಾಹಿತಿ ನೀಡಿದ್ದರೆ ಲೆಕ್ಕಪರಿಶೋಧನೆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ.

ಈ ಹಿಂದೆ ಇದೇ ಪ್ರಕರಣ ವಿಚಾರವಾಗಿ ಜಮೀ‌ರ್ ಅವರನ್ನು ಎಸಿಬಿ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದರು. ಅಲ್ಲದೆ ಸಚಿವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ ಇನ್ನಿತರ ಸ್ಥಳಗಳ ಮೇಲೆ ಎಸಿಬಿ ದಾಳಿ ಸಹ ನಡೆಸಿ ದಾಖಲೆಗಳನ್ನು ಸಂಗ್ರಹಿಸಿತ್ತು. ತರುವಾಯ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X