ಅರವಿಂದ್‌ ಕೇಜ್ರಿವಾಲ್‌ ಭೇಟಿಯಾದ ನಿತೀಶ್‌ ಕುಮಾರ್; ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಹೊರಾಡಲು ಕರೆ

Date:

Advertisements
  • ದೆಹಲಿ ಆಡಳಿತ ಸಂಬಂಧ ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿದ ಕೇಜ್ರಿವಾಲ್
  • ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ಸೋಲಿಸುವಂತೆ ಕರೆ ನೀಡಿದ ವಿಪಕ್ಷಗಳು

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು ಭಾನುವಾರ (ಮೇ 21) ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ನಿವಾಸದಲ್ಲೇ ಸಭೆ ನಡೆದಿದೆ. ಈ ವೇಳೆ 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯನ್ನು ಮಣಿಸಲು ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನದ ಕುರಿತು ಸಭೆ ಕೇಂದ್ರಿತವಾಗಿತ್ತು. ಜೊತೆಗೆ ದೆಹಲಿ ಆಡಳಿತದ ಬಗ್ಗೆ ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಕುರಿತೂ ಚರ್ಚೆಯಾಗಿದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಸಭೆಯಲ್ಲಿ ದೆಹಲಿ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಸಾಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಎಲ್ಲ ಪ್ರತಿಪಕ್ಷಗಳು ವಿರೋಧಿಸಬೇಕಿದೆ ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.

Advertisements

ದೆಹಲಿ ಆಡಳಿತದ ಮೇಲೆ ನಿಯಂತ್ರಣ ಸಾಧಿಸದಂತೆ ಸುಪ್ರೀಂ ಕೋರ್ಟ್‌ ಈಗಾಗಲೇ ಆದೇಶ ನೀಡಿದೆ. ಆದರೆ ಕೇಂದ್ರ ಸರ್ಕಾರ ಈ ಆದೇಶದ ವಿರುದ್ಧ ಸುಗ್ರೀವಾಜ್ಞೆ ತಂದಿದೆ. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಅನ್ನು ಕೇಂದ್ರ ಸರ್ಕಾರ ಶುಕ್ರವಾರ (ಮೇ 19) ಹೊರಡಿಸಿದೆ.

ನಿತೀಶ್‌ ಹಾಗೂ ತೇಜಸ್ವಿ ಯಾದವ್ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, “ನಾನು ಇಂದು ನಿತೀಶ್‌ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಆಡಳಿತಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ಆದೇಶ ನಿರಾಕರಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರ ತಂದಿದೆ. ಆದರೆ ಈ ವಿಷಯದಲ್ಲಿ ನಾನು ದೆಹಲಿ ಜನರ ಪರ ನಿಲ್ಲುತ್ತೇನೆ. ನಿತೀಶ್‌ ಕುಮಾರ್‌ ಅವರು ನಮ್ಮ ಪರವಾಗಿ ಕೇಂದ್ರದ ವಿರುದ್ಧ ಹೋರಾಡಲು ಎಲ್ಲ ಪಕ್ಷಗಳನ್ನು ಒಂದುಗೂಡಿಸುತ್ತಿದ್ದಾರೆ” ಎಂದು ಹೇಳಿದರು.

“ಒಂದು ವೇಳೆ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ತಂದರೆ, ಬಿಜೆಪಿಯೇತರ ಪಕ್ಷಗಳೆಲ್ಲ ರಾಜ್ಯಸಭೆಯಲ್ಲಿ ಒಗ್ಗೂಡಿದರೆ ಬಿಜೆಪಿಗೆ ಹಿನ್ನಡೆ ಉಂಟು ಮಾಡಬಹುದು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶವನ್ನು ಈ ಒಗ್ಗಟ್ಟು ರವಾನಿಸಬಹುದು” ಎಂದು ಕೇಜ್ರಿವಾಲ್ ಹೇಳಿದರು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ನಿತೀಶ್‌ ಕುಮಾರ್‌, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಸೇರಿದಂತೆ ಅನೇಕ ಬಿಜೆಪಿಯೇತರ ನಾಯಕರು ಹಾಜರಿದ್ದರು.

ಅರವಿಂದ್‌ ಕೇಜ್ರಿವಾಲ್‌ ಅವರು ದೆಹಲಿ ಆಡಳಿತದ ಸೇವೆ ನಿಯಂತ್ರಿಸುವ ಕೇಂದ್ರದ ಸುಗ್ರೀವಾಜ್ಞೆಯನ್ನು ಎಲ್ಲ ಪ್ರತಿಪಕ್ಷಗಳು ವಿರೋಧಿಸಬೇಕು ಎಂದು ಶನಿವಾರ ಮನವಿ ಮಾಡಿದ್ದರು.

ರಾಜಧಾನಿಯಲ್ಲಿರುವ ಎಲ್ಲ ಗುಂಪು ಎ ಮತ್ತು ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ನಿರ್ಧರಿಸಲು ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ ಸ್ಥಾಪಿಸುವುದನ್ನು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ.

ದೆಹಲಿ ಮುಖ್ಯಮಂತ್ರಿಯವರು ಪ್ರಾಧಿಕಾರದ ನೇತೃತ್ವ ವಹಿಸುತ್ತಾರೆ. ಇದರಲ್ಲಿ ಕೇಂದ್ರ ಗೃಹ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ ಇರುತ್ತಾರೆ. ಪ್ರಾಧಿಕಾರದಲ್ಲಿ ಎಲ್ಲ ವಿಷಯಗಳು ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಬಹುಪಾಲು ಮತಗಳಿಂದ ನಿರ್ಧರಿಸಲ್ಪಡುತ್ತವೆ ಎಂದು ಸುಗ್ರೀವಾಜ್ಞೆ ಹೇಳುತ್ತದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

ಕೇಂದ್ರದಿಂದ ನೇಮಕಗೊಂಡ ಇಬ್ಬರು ಅಧಿಕಾರಿಗಳು ಚುನಾಯಿತ ಮುಖ್ಯಮಂತ್ರಿಯನ್ನು ತಳ್ಳಿಹಾಕಬಹುದು. ಭಿನ್ನಾಭಿಪ್ರಾಯಗಳಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರ್ಧಾರವು ಅಂತಿಮವಾಗಿರುತ್ತದೆ ಎಂದು ಸುಗ್ರೀವಾಜ್ಞೆ ಹೇಳುತ್ತದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಈ ಸುಗ್ರೀವಾಜ್ಞೆಯು ದೆಹಲಿ ಆಡಳಿತಕ್ಕೆ ಮಾರಕ ಎಂದು ಖಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X