ಬೆಂಗಳೂರಿನಲ್ಲಿ ಧಾರಕಾರ ಮಳೆ | ಸುರಂಗ ಮಾರ್ಗದಡಿ ಸಿಲುಕಿದ್ದ ಮಹಿಳೆ ದುರ್ಮರಣ

Date:

Advertisements

ಸೋಮವಾರ ದಿಢೀರನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಕೆ ಆರ್ ವೃತ್ತದ ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಭಾನುರೇಖಾ ಸೇರಿದಂತೆ ಆರು ಮಂದಿ ಕೆ ಆರ್ ವೃತ್ತದ ಬಳಿಯ ಅಂಡರ್‍‌ ಪಾಸ್‌ನಲ್ಲಿ ಕಾರಿನಲ್ಲಿ ಸಿಲುಕಿದ್ದರು. ಇವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಭಾನುರೇಖಾ ಜೀವನ್ಮರಣ ಹೋರಾಟ ನಡೆಸಿ, ಕೊನೆಯುಸಿರೆಳೆದಿದ್ದಾರೆ.

ವಿಜಯವಾಡದಿಂದ ಬೆಂಗಳೂರಿಗೆ ಈ ಕುಟುಂಬ ಕಾರಿನಲ್ಲಿ ಬಂದಿತ್ತು. ದಟ್ಟವಾಗಿ ಮೋಡ ಕವಿದು ಕಗ್ಗತ್ತಲು ಇದ್ದ ಕಾರಣ ಸುರಂಗ ಮಾರ್ಗದಲ್ಲಿ ನೀರಿನಮಟ್ಟ ಚಾಲಕನ ಅರಿವಿಗೆ ಬಂದಿರಲಿಲ್ಲ. ಕಾರು ಸುರಂಗ ಮಾರ್ಗದಲ್ಲಿ ದಾಟಬಹುದೆಂದು ಮುಂದಕ್ಕೆ ಸಾಗಿದ್ದರು. ಆಟೊ ಚಾಲಕರೊಬ್ಬರು ಕಾರು ಸುರಂಗ ಮಾರ್ಗದ ಮಧ್ಯದಲ್ಲಿ ಸಿಲುಕಿರುವುದನ್ನು ಗಮನಿಸಿ ಸ್ಥಳೀಯರಿಗೆ ಮಾಹಿತಿ ನೀಡಿದ್ದರು.

Advertisements

ಕಾರಿನಲ್ಲಿ ಸಿಲುಕಿಕೊಂಡವರನ್ನು ಸೀರೆ ಮತ್ತು ಏಣಿ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಅದಾದ ನಂತರ ಅಸ್ವಸ್ಥಗೊಂಡಿದ್ದ ಭಾನು ರೇಖಾರನ್ನು ಸೇಂಟ್ ಮಾರ್ಥಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಯ ಸಿಬ್ಬಂದಿ ಅರ್ಧಗಂಟೆ ಆದರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಮೃತ ಯುವತಿಗೆ 5ಲಕ್ಷ ಪರಿಹಾರ ಘೋಷಣೆ

ಘಟನೆಯ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂತಹ ದುರ್ಘಟನೆ ನಡೆಯಬಾರದಿತ್ತು. ಮೃತ ಯುವತಿ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುತ್ತೇವೆ. ಹಾಗೆಯೇ ಕುಟುಂಬಸ್ಥರಿಗೆ ಚಿಕಿತ್ಸೆ ಅವಶ್ಯಕತೆ ಇದ್ದರೆ, ಅದರ ವೆಚ್ಚ ಸರ್ಕಾರವೇ ಭರಿಸಲಿದೆ” ಎಂದರು.

ಮುಂದುವರೆದು, ಮಾತನಾಡಿದ ಅವರು, ಭಾನುರೇಖಾ ಬೆಂಗಳೂರಿನ ಇನ್ಫೋಸಿಸ್ ಉದ್ಯಮಿಯಾಗಿದ್ದರು. ಬೇಸಿಗೆ ರಜೆಯಿದ್ದ ಕಾರಣ ವಿಜಯವಾಡದಿಂದ ಅವರ ಕುಟುಂಬಸ್ಥರು ನಗರ ಸಂಚಾರಕ್ಕೆ ಬಂದಿದ್ದರು. ಈ ವೇಳೆ ಈ ಪ್ರಕರಣ ನಡೆದಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ; ಸೋಮವಾರವೂ ಮಳೆಯಾಗುವ ಸಾಧ್ಯತೆ

ಮಳೆ ಬಂದ ವೇಳೆ ಅಂಡರ್‍‌ಪಾಸ್‌ನಲ್ಲಿ ಯಾರು ಪ್ರಯಾಣಿಸದಂತೆ ಬ್ಯಾರಿಕೇಡ್ ಹಾಕಿದ್ದರು. ಆದರೂ, ವಾಹನ ಚಾಲಕ ಸುರಂಗ ಮಾರ್ಗದಲ್ಲಿ ಕಾರು ಚಲಾಯಿಸಿದ ಕಾರಣ ಕಾರು ನೀರಿನಲ್ಲಿ ಮುಳುಗುವಂತಾಯಿತು. ಘಟನಾ ಸ್ಥಳದಲ್ಲೇ ಭಾನುರೇಖಾ ಹೆಚ್ಚಿನ ಕೊಳಚೆ ನೀರನ್ನು ಕುಡಿದು, ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ಬರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದರು.

ಒಂದು ವೇಳೆ ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡಿದ್ದರೆ, ಆ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಉಳಿದಂತೆ ಮಳೆ ಸಮಸ್ಯೆ ಪರಿಹಾರಕ್ಕೆ ರಾಜಕಾಲುವೆ ತೆರವು, ಚರಂಡಿಗಳ ಹೂಳು ತೆಗೆಯುವಿಕೆ ವಿಚಾರವಾಗಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದುವರೆಯುವುದಾಗಿ” ಹೇಳಿದರು.

ಉಳಿದಂತೆ, ಮಳೆಯ ಬಗ್ಗೆ ಮಾಹಿತಿ ಪಡೆದಿರುವ ಸಿಎಂ ಸಿದ್ದರಾಮಯ್ಯ , ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X