ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

Date:

Advertisements

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ ಅನಿರ್ದಿಷ್ಟಾವಧಿಗೆ ಮಣಿಪುರದ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಇನ್ನು ಪ್ರತಿಭಟನಾಕಾರರು ಇಂಫಾಲ್‌ನಲ್ಲಿ ಶಾಸಕರುಗಳು, ಸಚಿವರುಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಟಯರ್‌ಗಳನ್ನು ಸುಟ್ಟು ರಸ್ತೆ ತಡೆ ನಡೆಸಿದರು. ಕುಕಿ ಬಂಡುಕೋರರು ಆರು ಮಂದಿಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶನಿವಾರ ಮಣಿಪುರದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಇತ್ತೀಚೆಗೆ ಬಂಡುಕೋರರು ಸಿಆರ್‌ಪಿಎಫ್ ಶಿಬಿರ ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿತ್ತು. 10 ಕುಕಿ ಬಂಡುಕೋರರ ಹತ್ಯೆಯಾಗಿತ್ತು. ಈ ವೇಳೆ ನಿರಾಶ್ರಿತರ ಕೇಂದ್ರದಿಂದ ಆರು ಮಂದಿ ನಾಪತ್ತೆಯಾಗಿದ್ದರು. ಅವರನ್ನು ಅಪಹರಣ ಮಾಡಲಾಗಿದೆಯೇ ಅಥವಾ ಅವರು ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತ ಜಾಗಕ್ಕೆ ತಲುಪಿದ್ದಾರೆಯೇ ಎಂಬುದು ಖಚಿತವಾಗಿರಲಿಲ್ಲ.

ಶುಕ್ರವಾರ ಜಿರಿಬಾಮ್ ಜಿಲ್ಲೆಯ ನದಿಯಿಂದ ಮೂರು ಶವಗಳು ಪತ್ತೆಯಾಗಿದ್ದರೆ, ಶನಿವಾರ ಮತ್ತೆ ಮೂರು ಶವಗಳು ಪತ್ತೆಯಾಗಿವೆ. ಆರು ಮಂದಿ ಕೂಡಾ ಮೈತಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ. ಈ ಮೃತದೇಹಗಳು ಅಪಹರಣಕ್ಕೊಳಗಾದವರ ಮೃತದೇಹ ಎಂದು ಹೇಳಲಾಗಿದೆ. ಅಪಹರಣಕ್ಕೆ ಒಳಗಾದ ಜನರನ್ನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಭದ್ರತಾ ಪಡೆಗಳು ವಿಫಲವಾಗಿವೆ ಎಂದು ಆರೋಪಿಸಿ ಮೈತಿ ಸಂಘಟನೆಗಳು ಪ್ರತಿಭಟನೆ ಆರಂಭಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X