ಬೀದರ್‌ | ಕನ್ನಡ ಸಾಹಿತ್ಯದ ಹಿರಿಮೆ ಹೆಚ್ಚಿಸಿದ ಶರಣರು : ಗುರುಬಸವ ಪಟ್ಟದ್ದೇವರು

Date:

Advertisements

ಕನ್ನಡ ಭಾಷೆ, ಅತ್ಯಂತ ಪ್ರಾಚೀನವಾಗಿರುವ ಭಾಷೆಯಾಗಿದೆ. 12ನೇ ಶತಮಾನದಲ್ಲಿ ಬಸವಾದಿ ಶರಣರು ಕನ್ನಡ ಭಾಷೆಗೆ ದೇವಭಾಷೆಯ ಪ್ರಾಶಸ್ತೆಯನ್ನು ನೀಡಿದರು ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ, 842ನೆಯ ಶಿವಾನುಭವ ಗೋಷ್ಠಿ ಮತ್ತು ಶರಣೆ ನೀಲಾಂಬಿಕಾ ಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ʼಕನ್ನಡಗಳಲ್ಲಿಯೇ ವಚನಗಳು ಬರೆಯುವ ಮೂಲಕ ಕನ್ನಡ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ್ದರು. ಇಂದು ನಾವು ಕನ್ನಡ ಭಾಷೆ ಉಳಿಸಿ ಬೆಳೆಸಬೇಕಾಗಿದೆ. ಕನ್ನಡ ನಮ್ಮ ಮಾತೃಭಾಷೆಯಾಗಿದೆ. ಮಾತೃಭಾಷೆಯಲ್ಲಿಯೇ ನಮಗೆ ಕನಸುಗಳನ್ನು ಬೀಳುತ್ತವೆ. ಅದನ್ನು
ನೆನೆಪು ಮಾಡಲು ಮಾತೃ ಭಾಷೆಯ ಶಿಕ್ಷಣ ಅವಶ್ಯಕವಾದದ್ದು. ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆದು ರಾಜ್ಯ ರಾಷ್ಟ್ರಮಟ್ಟದ ಸಾಧನೆ ಮಾಡಬಹುದು ಎಂಬುದಕ್ಕೆ ಅನೇಕ ಉದಾಹರಣೆಗಳು ಇವೆʼ ಎಂದು ನುಡಿದರು. 

Advertisements

ʼಡಾ.ಬಸವಲಿಂಗ ಪಟ್ಟದ್ದೇವರು ಸ್ಥಾಪಿಸಿದ ಚನ್ನಬಸವೇಶ್ವರ ಗುರುಕುಲದಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತ ಮಕ್ಕಳು ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.  ಆ ದಿಸೆಯಲ್ಲಿ ನಾವು ಮನೆಯಲ್ಲಿ ಮನಸ್ಸಿನಲ್ಲಿ ಕನ್ನಡದ ಪ್ರೀತಿ ಬೆಳೆಸಬೇಕು. ಅಂದರೆ ನಮ್ಮ ಸಾಹಿತ್ಯ ಸಂಸ್ಕೃತಿ ಪರಂಪರೆ ಉಳಿದು ಬೆಳೆಯುತ್ತದೆʼ ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೀರಾಚಂದ್ ವಾಘಮಾರೆ ಅವರು ಕಾರ್ಯಕ್ರಮ ಉದ್ಘಾಟಿಸಿದರು. 

ಇದೇ ವೇಳೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೀರಾಚಂದ ವಾಘಮಾರೆ, ನರಸಿಂಹಲು, ಶ್ರೀಕಾಂತ ಬಿರಾದಾರ್ ಅವರನ್ನು ಶ್ರೀಮಠದ ವತಿಯಿಂದ ಸತ್ಕರಿಸಲಾಯಿತು. ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ ಅಧ್ಯಕ್ಷತೆ ವಹಿಸಿದ್ದರು. ಮಲ್ಲಮ್ಮ ಆರ್.ಪಾಟೀಲ್ ಅನುಭಾವ ನೀಡಿದರು. 

ಈ ಸುದ್ದಿ ಓದಿದ್ದೀರಾ? ಬೀದರ್‌ | ವಚನಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ : ಡಾ. ಗಂಗಾಬಿಕಾ ಪಾಟೀಲ್

ಕನ್ನಡಪರ ಸಂಘಟನೆಗಳ ಮುಖಂಡರಾದ ಜೈರಾಜ  ಕೊಳ್ಳಾ, ಸಂತೋಷ ಬಿ.ಜಿ.ಪಾಟೀಲ, ಸಂಗಮೇಶ ಗುಮ್ಮೆ, ಸಂಜುಕುಮಾರ ನಾವದಗಿ,  ಸಂತೋಷ ನಾಟೇಕರ್, ರಾಜಕುಮಾರ ಡಾವರಗಾಂವೆ, ಬಸವರಾಜ ಸಂಪಂಗೆ, ಅನೀಲ ಹಾಲಪುರ್ಗೆ, ಮಾಳಸ್ಕಾಂತ ವಾಘೆ, ಅಕ್ಷಯ ಸೋಮನಾಥ ಮುದ್ದಾ, ಚಂದ್ರಕಲಾ ಪ್ರಭು ಡಿಗ್ಗೆ, ಕೈಲಾಸ ಪಾಟೀಲ್ ಉಪಸ್ಥಿತರಿದ್ದರು. ಗುರುಪ್ರಸಾದ ಶಾಲೆಯ ಮಕ್ಕಳು ನಾಡಗೀತೆ ಹಾಡಿದರು. ದೀಪಕ ಠಮಕೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X