ಕಲಬುರಗಿ | ಕಬ್ಬಿಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ : ಡಿಸಿ ಬಿ.ಫೌಜಿಯಾ ತರನ್ನುಮ್

Date:

Advertisements

ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ರೈತರಿಗೆ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆಯ ದರ (ಎಫ್.ಆರ್.ಪಿ) ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಪ್ರಸಕ್ತ 2024-25ನೇ ಸಾಲಿನಲ್ಲಿ 01.07.2024 ರಿಂದ 30.06.2025ರ ವರೆಗೆ ಅಳಂದ ತಾಲೂಕಿನ ಭೂಸನೂರ ಎನ್.ಎಸ್.ಎಲ್. ಶುಗರ್ಸ್ ಕಾರ್ಖಾನೆ 9,34,763 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 91,956 ಸಕ್ಕರೆ ಉತ್ಪಾದಿಸಲಿದೆ. ಶೇ.9.84 ಸಕ್ಕರೆ ಇಳುವರಿ ಬರಲಿದ್ದು, ಪ್ರತಿ ಮೆ.ಟನ್ ಕಬ್ಬಿಗೆ 3,264 ರೂ.ದರ ನಿಗದಿ ಮಾಡಲಾಗಿದೆ.

ಅಫಜಲಪುರ ತಾಲೂಕಿನ ಚೌಡಾಪುರ ಕೆ.ಪಿ.ಆರ್. ಶುಗರ್ಸ್ ಕಾರ್ಖಾನೆ 11,35,389 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 91,170 ಸಕ್ಕರೆ ಉತ್ಪಾದಿಸಲಿದೆ. ಶೇ.10.12 ಸಕ್ಕರೆ ಇಳುವರಿಯೊಂದಿಗೆ ಪ್ರತಿ ಮೆ.ಟನ್ ಕಬ್ಬಿಗೆ 3,357 ರೂ. ದರ ನಿಗದಿ ಮಾಡಲಾಗಿದೆ.

Advertisements

ಅಫಜಲಪುರ ತಾಲೂಕಿನ ಹವಳಗಾದ ರೇಣುಕಾ ಶುಗರ್ಸ್ ಕಾರ್ಖಾನೆ 8,92,152 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 56,828 ಸಕ್ಕರೆ ಉತ್ಪಾದಿಸಲಿದೆ. ಶೇ.9.15 ಸಕ್ಕರೆ ಇಳುವರಿ ಹೊಂದಿದ್ದು, ಪ್ರತಿ ಮೆ.ಟನ್ ಕಬ್ಬಿಗೆ 3,151 ರೂ.ದರ ನಿಗದಿಪಡಿಸಲಾಗಿದೆ.

ಯಡ್ರಾಮಿ ತಾಲೂಕಿನ ನಾಗರಹಳ್ಳಿಯ ಉಗಾರ ಶುಗರ್ಸ್ ಕಾರ್ಖಾನೆ 3,79,352 ಮೆಟ್ರಿಕ್ ಟನ್ ಕಬ್ಬು ನುರಿಸಲಿದ್ದು, 34,890 ಸಕ್ಕರೆ ಉತ್ಪಾದಿಸಲಿದೆ. ಶೇ.9 ಸಕ್ಕರೆ ಇಳುವರಿಯೊಂದಿಗೆ ಪ್ರತಿ ಮೆ.ಟನ್ ಕಬ್ಬಿಗೆ 3,151 ರೂ. ದರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ಸಾಹಿತ್ಯದ ಹಿರಿಮೆ ಹೆಚ್ಚಿಸಿದ ಶರಣರು : ಗುರುಬಸವ ಪಟ್ಟದ್ದೇವರು

ರೈತರು ಆಯಾ ಸಮೀಪದ ಸಕ್ಕರೆ ಕಾರ್ಖಾನೆಗೆ ಕಬ್ಬು ಮಾರಾಟ ಮಾಡುವ ಮೂಲಕ ಸೌಲಭ್ಯ ಪಡೆಯಬೇಕು ಎಂದು ಡಿ.ಸಿ.ಫೌಜಿಯಾ ತರನ್ನುಮ್ ಅವರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X