ಶಮಿಗೆ ಶುಭ ಸುದ್ದಿ ನೀಡಿದ ಟೀಂ ಇಂಡಿಯಾ

Date:

Advertisements

ಗಾಯದ ಕಾರಣದಿಂದ ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಇದೀಗ ಮತ್ತೆ ವೃತ್ತಿಪರ ಕ್ರಿಕೆಟ್ ತಂಡಕ್ಕೆ ಮರಳಿದ್ದಾರೆ. ಇತ್ತೀಚಿಗೆ ಮಧ್ಯಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಬಂಗಾಳ ತಂಡದ ಪರ ಶಮಿ ಆಡಿದ್ದರು. ಪಂದ್ಯದಲ್ಲಿ 43.2 ಓವರ್ ಎಸೆದ ಶಮಿ ತನ್ನ ಫಿಟ್ನೆಸ್ ಸಾಬೀತುಪಡಿಸಿದ್ದಾರೆ.

ರಣಜಿ ಪಂದ್ಯದಲ್ಲಿ ಏಳು ವಿಕೆಟ್ ಕಬಳಿಸಿದ್ದು ಮತ್ರವಲ್ಲದೆ, ಬ್ಯಾಟಿಂಗ್‌ನಲ್ಲಿ 36 ರನ್ ಪೇರಿಸಿದ್ದರು. ಈ ಪಂದ್ಯವನ್ನು ಬಂಗಾಳ 11 ರನ್ ಅಂತರದಿಂದ ಗೆದ್ದುಕೊಂಡಿತ್ತು. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಬಳಿಕ ಯಾವುದೇ ಅಂತಾರಾಷ್ಟ್ರೀಯ ಪಂದ್ಯವಾಗಿಲ್ಲ.

ರಣಜಿ ಪ್ರದರ್ಶನದ ಬಳಿಕ ಶಮಿ ಅವರನ್ನು ಕೆಲವೇ ದಿನಗಳಲ್ಲಿ ಆರಂಭವಾಗುವ ಬಾರ್ಡರ್ ಗಾವಸ್ಕರ್ ಟ್ರೋಫಿ ಸರಣಿಗೆ ಆಯ್ಕೆ ಮಾಡಲಾಗುವುದು ಎಂದು ವರದಿ ಹೇಳಿದೆ. ಮುಂದಿನ ಶುಕ್ರವಾರದಿಂದ ಪರ್ತ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯಲಿದೆ.

Advertisements

ಈ ಸುದ್ದಿ ಓದಿದ್ದೀರಾ? 428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ನವೆಂಬರ್ 22 ರಂದು ಪರ್ತನಲ್ಲಿ ಪ್ರಾರಂಭವಾಗುವ ಬಾರ್ಡರ್ ಗವಾಸ್ಕರ್ ಟ್ರೋಪಿಗಾಗಿ ಭಾರತ ತಂಡದಲ್ಲಿ ಶಮಿಯನ್ನು ಸೇರಿಸಲು ಶಮಿ ಸಿದ್ಧರಾಗದ್ದಾರೆ. ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಶಮಿ ಆಸ್ಟ್ರೇಲಿಯಾಕ್ಕೆ ತೆರಳಬಹುದು, ಅವರಿಬ್ಬರೂ ಮೊದಲ ಸಂದ್ಯಕ್ಕೆ ಮುಂಚಿತವಾಗಿ ತಂಡವನ್ನು ಸೇರಿಕೊಳ್ಳಬಹುದು ಎಂದು ಹೇಳಿದೆ. ಆದರೆ, ಪರ್ತನಲ್ಲಿ ನಡೆದ ಪಂದ್ಯದ ನಂತರವೇ ಶಮಿ ಅವರನ್ನು ಆಡುವ ಬಳಗಕ್ಕೆ ಸೇರಿಸಲಾಗುವುದು ಎಂದು ವರದಿ ಹೇಳಿದೆ.

ನಾಯಕ ರೋಹಿತ್ ಶರ್ಮಾ ಅವರು ಕೂಡಾ ಎರಡನೇ ಮಗುವಿನ ಜನನದ ಕಾರಣದಿಂದ ತಂಡದ ಬಾಕಿ ಸದಸ್ಯರೊಂದಿಗೆ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿಲ್ಲ. ಕಳೆದ ಶುಕ್ರವಾರ ರೋಹಿತ್ ಪತ್ನಿ ರಿತಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆಯೇ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X