ಮಣಿಪುರ ಸಿಎಂ ನಿವಾಸಕ್ಕೆ ದಾಳಿ ಯತ್ನ; ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು!

Date:

Advertisements

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತೆ ಹೆಚ್ಚಾಗಿದ್ದು, ನಿರಂತರ ಸಾವು ನೋವುಗಳು ಸಂಭವಿಸುತ್ತಿದೆ. ಶನಿವಾರ ಸಿಎಂ ಬಿರೇನ್ ಸಿಂಗ್ ನಿವಾಸಕ್ಕೆ ಪ್ರತಿಭಟನಕಾರರು ದಾಳಿ ನಡೆಸಲು ಯತ್ನಿಸಿದ್ದಾರೆ. ಬಳಿಕ ಮಣಿಪುರದಲ್ಲಿ ಬಂಡುಕೋರರ ವಿರುದ್ದ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಬಿರೇನ್ ಸಿಂಗ್‌ ಸರ್ಕಾರಕ್ಕೆ 24 ಗಂಟೆಗಳ ಅಂತಿಮ ಗಡುವು ನೀಡಿದ್ದಾರೆ.

ಇತ್ತೀಚೆಗೆ ಬಂಡುಕೋರರು ಸಿಆರ್‌ಪಿಎಫ್ ಶಿಬಿರ ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿತ್ತು. 10 ಕುಕಿ ಬಂಡುಕೋರರ ಹತ್ಯೆಯಾಗಿತ್ತು. ಈ ವೇಳೆ ನಿರಾಶ್ರಿತರ ಕೇಂದ್ರದಿಂದ ಆರು ಮಂದಿ ನಾಪತ್ತೆಯಾಗಿದ್ದರು.

ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಆರು ಜನರ ಮೃತದೇಹಗಳು ಜೀರಿ ನದಿಯಲ್ಲಿ ಪತ್ತೆಯಾಗಿದೆ. ಇದಾದ ಬಳಿಕ ಮಣಿಪುರದಲ್ಲಿ ಹಿಂಸಾಚಾರ, ಪ್ರತಿಭಟನೆಗಳು ಮತ್ತಷ್ಟು ಹೆಚ್ಚಾಗಿದೆ. ಪ್ರತಿಭಟನಾಕಾರರು ಸಿಎಂ ಸಿವಾಸ ಸೇರಿದಂತೆ ಹಲವು ಸಚಿವರುಗಳು, ಶಾಸಕರಗಳ ನಿವಾಸಕ್ಕೆ ದಾಳಿ ಯತ್ನ ಮಾಡಿದ್ದಾರೆ. ಇದಾದ ಬಳಿಕ ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದೆ.

Advertisements

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಶನಿವಾರ ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿಂಗ್ ಅವರ ಅಳಿಯ, ಬಿಜೆಪಿ ಶಾಸಕ ಆರ್‌ಕೆ ಇಮೋ ಸಿಂಗ್ ಮನೆಗೂ ದಾಳಿ ನಡೆದಿದೆ. ಪ್ರತಿಭಟನಾಕಾರರು ಶಾಸಕರ ಮನೆಯನ್ನು ಧ್ವಂಸಗೊಳಿಸಿದ್ದು, ಬೆಂಕಿ ಹಚ್ಚಿದ್ದಾರೆ.

ಪೌರಾಡಳಿತ ಸಚಿವ ವೈ ಖೇಮಚಂದ್ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಎಲ್ ಸುಸಿಂದ್ರೋ ಸಿಂಗ್ ಅವರ ಮನೆಗಳ ಮೇಲೆ ಇದೇ ರೀತಿಯ ದಾಳಿಗಳು ನಡೆದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಪಂ ರಂಜನ್ ಅವರ ನಿವಾಸಕ್ಕೂ ಮುತ್ತಿಗೆ ಹಾಕಲಾಗಿದೆ. ರಾಜ್ಯ ಸರ್ಕಾರ ಬೇಡಿಕೆ ಪೂರೈಸದಿದ್ದರೆ ರಾಜೀನಾಮೆ ನೀಡುವುದಾಗಿ ರಂಜನ್ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಈಗಾಗಲೇ ಮಣಿಪುರದ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಾಗೆಯೇ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X