ಮಹಾರಾಷ್ಟ್ರ ಚುನಾವಣೆ | ಮತಗಟ್ಟೆಗಳ ಬಳಿ ಚಪ್ಪಲಿ ನಿಷೇಧಿಸಲು ಅಭ್ಯರ್ಥಿ ಮನವಿ!

Date:

Advertisements

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಕ್ಷೇತ್ರದ ಮತಗಟ್ಟೆಗಳ ಬಳಿ ಚಪ್ಪಲಿಯನ್ನು ನಿಷೇಧಿಸಬೇಕು ಎಂಬ ಮನವಿಯನ್ನು ಮಾಡಿದ್ದಾರೆ.

“ಚಪ್ಪಲಿ ನನ್ನ ಚುನಾವಣಾ ಚಿಹ್ನೆಯಾಗಿದೆ, ಅವುಗಳನ್ನು ಧರಿಸುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ” ಎಂದು ಪರಂದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗುರುದಾಸ್ ಸಂಭಾಜಿ ಕಾಂಬಳೆ ಹೇಳಿದ್ದಾರೆ. ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಚಪ್ಪಲಿಗಳನ್ನು ನಿಷೇಧಿಸುವಂತೆ ಕಾಂಬಳೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ತುಮಕೂರು | ಚುನಾವಣಾ ನೀತಿ ಸಂಹಿತೆ ಜಾರಿ; ಪ್ರಚಾರ ಸಾಮಗ್ರಿಗಳ ತೆರವು

Advertisements

ಭಾರತೀಯ ಚುನಾವಣಾ ಆಯೋಗದ ನೀತಿ ಸಂಹಿತೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಚಿಹ್ನೆಗಳನ್ನು ಮತಗಟ್ಟೆಗಳ ಬಳಿ ಪ್ರದರ್ಶಿಸುವಂತಿಲ್ಲ.

ಮತದಾರರು ಅಥವಾ ಅಧಿಕಾರಿಗಳು ಬೂತ್‌ಗಳ ಬಳಿ ಚಪ್ಪಲಿ ಧರಿಸಲು ಅವಕಾಶ ನೀಡುವುದು ನಿಯಮಗಳನ್ನು ಉಲ್ಲಂಘಿಸಬಹುದು ಎಂದು ಚುನಾವಣಾ ಅಧಿಕಾರಿಗೆ ಬರೆದ ಪತ್ರದಲ್ಲಿ ಕಾಂಬ್ಳೆ ವಾದಿಸಿದ್ದಾರೆ.

“ನನ್ನ ಚುನಾವಣಾ ಚಿಹ್ನೆ ಚಪ್ಪಲಿಯಾಗಿದೆ. ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಚಪ್ಪಲಿ ಧರಿಸುವುದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಈ ಸಮಸ್ಯೆಯನ್ನು ತಡೆಗಟ್ಟಲು, ಚುನಾವಣಾ ಅಧಿಕಾರಿಗಳು, ಅಭ್ಯರ್ಥಿಗಳು ಮತ್ತು ಮತದಾರರು ಸೇರಿದಂತೆ ಎಲ್ಲರಿಗೂ ಚಪ್ಪಲಿಯನ್ನು ನಿಷೇಧಿಸುವಂತೆ ನಾನು ವಿನಂತಿಸುತ್ತೇನೆ. ಯಾರಾದರೂ ಚಪ್ಪಲಿ ಧರಿಸಿದರೆ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಿ” ಎಂದು ಕಾಂಬ್ಳೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X