ಹಣದಾಸೆಗೆ ಸೌಂಡ್‌ ತಗ್ಗಿಸುವ ʻಮಲ್ಟಿಪ್ಲೆಕ್ಸ್‌ʼಗಳು; ಆರ್‌ ಚಂದ್ರು ಆರೋಪ

Date:

Advertisements
  • ಕಬ್ಜʼ ಸಿನಿಮಾ ಪ್ರದರ್ಶನದ ವೇಳೆ ‘ಸೌಂಡ್‌ʼ ತಗ್ಗಿಸಿದ ‘ಮಲ್ಟಿಪ್ಲೆಕ್ಸ್‌ʼ ಸಿಬ್ಬಂದಿ
  • ‘ಮಲ್ಟಿಪ್ಲೆಕ್ಸ್‌ʼನವರಿಗೆ ಚಿತ್ರೋದ್ಯಮದ ಬಗ್ಗೆ ಕಾಳಜಿ ಇಲ್ಲ ಎಂದ ಚಂದ್ರು

ಆರ್‌ ಚಂದ್ರು ಮತ್ತು ಉಪೇಂದ್ರ ಕಾಂಬಿನೇಶನ್‌ನಲ್ಲಿ ತೆರೆಕಂಡಿರುವ ʼಕಬ್ಜʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡು ಚಿತ್ರಮಂದಿರಗಳಲ್ಲಿ ತಕ್ಕಮಟ್ಟಿಗೆ ಪ್ರದರ್ಶನ ಕಾಣುತ್ತಿದೆ. ‘ಕಬ್ಜʼ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂಬ ಅಭಿಪ್ರಾಯಗಳ ನಡುವೆಯೇ ʼಮಲ್ಟಿಪ್ಲೆಕ್ಸ್‌ʼಗಳಲ್ಲಿ ಚಿತ್ರ ಪ್ರದರ್ಶನದ ವೇಳೆ ಬೇಕಂತಲೇ ‘ಸೌಂಡ್‌ ಎಫೆಕ್ಟ್‌ʼ ತಗ್ಗಿಸಲಾಗುತ್ತಿದೆ ಎಂಬ ಚರ್ಚೆ ಶುರುವಾಗಿದೆ. ಪ್ರೇಕ್ಷಕರ ಈ ಮಾತಿಗೆ ನಿರ್ದೇಶಕ ಆರ್‌ ಚಂದ್ರು ಕೂಡ ಧ್ವನಿಗೂಡಿಸಿದ್ದಾರೆ.

‘ಕಬ್ಜʼ ಸಿನಿಮಾ ಯಶಸ್ಸನ್ನು ಚಿತ್ರತಂಡದೊಂದಿಗೆ ಸಂಭ್ರಮಿಸಿರುವ ಆರ್‌ ಚಂದ್ರು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಪತ್ರಕರ್ತರೊಬ್ಬರು, “ಮಲ್ಟಿಪ್ಲೆಕ್ಸ್‌ಗಳಲ್ಲಿ ʼಕಬ್ಜʼ ಸಿನಿಮಾ ಪ್ರದರ್ಶನದ ವೇಳೆ ‘ಸೌಂಡ್‌ʼ ತಗ್ಗಿಸಲಾಗುತ್ತಿದೆ. ಕನ್ನಡದ ಚಿತ್ರಗಳಿಗೇ ಈ ರೀತಿಯ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಏನು ಹೇಳುತ್ತೀರಿ” ಎಂದು ಪ್ರಶ್ನೆ ಹಾಕಿದ್ದಾರೆ.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಚಂದ್ರು, “ಖಂಡಿತವಾಗಿಯೂ ನಮ್ಮಲ್ಲಿ ಈ ಸಮಸ್ಯೆ ಇದೆ. ನಾನು ಈ ವಿಚಾರವನ್ನು ಹೇಳಿದರೆ ಕೆಲವರಿಗೆ ನೋವಾಗುತ್ತದೆ. ಹೇಳದೆ ಹೋದರೆ ತುಂಬಾ ಜನರಿಗೆ ಮೋಸ ಮಾಡಿದಂತಾಗುತ್ತದೆ. ಆದರೂ ಈ ವಿಷಯವನ್ನು ಬಹಿರಂಗಪಡಿಸುತ್ತೇನೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ‘ಸೌಂಡ್‌ ಫ್ರಿಕ್ವೆನ್ಸಿʼಯನ್ನು ಹೆಚ್ಚು ಮಾಡಿದಾಗಲೆಲ್ಲ ಹೆಚ್ಚು ವಿದ್ಯುತ್‌ ಬಳಕೆಯಾಗುತ್ತದೆ. ಮಲ್ಟಿಪ್ಲೆಕ್ಸ್‌ನವರಿಗೆ ಚಿತ್ರಗಳು ಮತ್ತು ಚಿತ್ರತಂಡಗಳ ಬಗ್ಗೆ ಯಾವುದೇ ಕಾಳಜಿ ಇರುವುದಿಲ್ಲ. ಸಿನಿಮಾ ಪ್ರದರ್ಶನದ ವೇಳೆ ಎರಡು ಸ್ಪೀಕರ್‌ಗಳನ್ನು ಬಂದ್‌ ಮಾಡಿ, ಸೌಂಡ್‌ ತಗ್ಗಿಸಿದರೆ ವಿದ್ಯುತ್‌ ಕಡಿಮೆ ಪ್ರಮಾಣದಲ್ಲಿ ಬಳಕೆಯಾಗುವುದರಿಂದ ಒಂದು ಪ್ರದರ್ಶನಕ್ಕೆ ಮಲ್ಟಿಪ್ಲೆಕ್ಸ್‌ನವರಿಗೆ ಕನಿಷ್ಠ 10 ಸಾವಿರ ರೂಪಾಯಿ ಉಳಿತಾಯವಾಗುತ್ತದೆ. ನಾನು ಕೂಡ ಈ ಬಗ್ಗೆ ಕೇಳಿ ತಿಳಿದುಕೊಂಡಿದ್ದೇನೆ. ಈ ರೀತಿಯ ಅನುಭವಗಳು ನನಗೂ ಆಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಜರುಗಿಸಲು ಚಲನಚಿತ್ರ ವಾಣಿಜ್ಯ ಮಂಡಳಿಯ ಜೊತೆ ಚರ್ಚಿಸುತ್ತೇನೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸಲ್ಮಾನ್‌ ಖಾನ್‌ ಜೀವ ಬೆದರಿಕೆ ಪ್ರಕರಣಕ್ಕೆ ಲಂಡನ್‌ ನಂಟು

ಸಿನಿಮಾ ಪ್ರದರ್ಶನದ ವೇಳೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಸೌಂಡ್‌ ತಗ್ಗಿಸಲಾಗುತ್ತದೆ ಎಂಬ ಆರೋಪ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ಹಿಂದೆ ʼಏಕ್‌ ಲವ್‌ ಯಾʼ ಸಿನಿಮಾ ತೆರೆಕಂಡಾಗ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೇಕಂತಲೇ ಸೌಂಡ್‌ ತಗ್ಗಿಸುತ್ತಿದ್ದಾರೆ ಎಂದು ಸ್ವತಃ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X