ಶ್ರೇಯಸ್‌ ಅಯ್ಯರ್‌ ಮುಂಬೈ ತಂಡದ ನಾಯಕನಾಗಿ ನೇಮಕ

Date:

Advertisements

ಮುಂಬೈ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ.

2025 ರ ಐಪಿಎಲ್​ನ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಈ ಹರಾಜಿನಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್‌ ಶ್ರೇಯಸ್ ಅಯ್ಯರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಶ್ರೇಯಸ್ ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲ್ಲಿಸಿಕೊಟ್ಟಿದ್ದರು. ಆದರೆ ಈ ಬಾರಿ ಕೆಕೆಆರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ.

ಐಪಿಎಲ್‌ನಲ್ಲಿ ಅಯ್ಯರ್ ಅವರು ನಾಯಕತ್ವದ ಉತ್ತಮ ದಾಖಲೆ ಹೊಂದಿದ್ದಾರೆ. ಆದ್ದರಿಂದ ಮೆಗಾ ಹರಾಜಿನಲ್ಲಿ ಅವರಿಗೆ ಹೆಚ್ಚಿನ ಬೇಡಿಕೆಯಿದೆ. ಇದಕ್ಕೆ ಪೂರಕವಾಗಿ ಅನೇಕ ತಂಡಗಳು ಈ ಬಾರಿ ಹೊಸ ನಾಯಕರನ್ನು ಹುಡುಕುತ್ತಿವೆ.

Advertisements

ಈ ಸುದ್ದಿ ಓದಿದ್ದೀರಾ? 428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ. ಅಯ್ಯರ್ ಅವರ ಯಶಸ್ವಿ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಮುಖ್ಯವಾದ ಜವಾಬ್ದಾರಿಯನ್ನು ನೀಡಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಇದೇ ನವೆಂಬರ್ 23 ರಿಂದ ಪ್ರಾರಂಭವಾಗಲಿದೆ. ಕಳೆದ ಬಾರಿ ಈ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ, ಮುಂಬೈ ತಂಡವನ್ನು ಮುನ್ನಡೆಸಿದ್ದರು. ಇದೀಗ ರಹಾನೆ ಬದಲಿಗೆ ಅಯ್ಯರ್ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಜಿಂಕ್ಯ ರಹಾನೆ ಈಗ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ. ಫಿಟ್ನೆಸ್ ಕಾರಣಗಳಿಂದ ತಂಡದಿಂದ ಹೊರಬಿದ್ದಿದ್ದ ಪೃಥ್ವಿ ಶಾ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ.

ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ.ಗೆ ನಿಗದಿಪಡಿಸಿದ್ದು, ಅವರ ಹೆಸರು ಮೊದಲ ಸೆಟ್‌ನಲ್ಲಿಯೇ ಕಾಣಿಸಿಕೊಳ್ಳಲಿದೆ. ಅಂದರೆ ಮೆಗಾ ಹರಾಜಿನ ಆರಂಭದಲ್ಲಿಯೇ ಅಯ್ಯರ್‌ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X