ಕಿತ್ತೂರು | ಕಾಂಗ್ರೆಸ್ ಶಾಸಕ ಬಾಬಾ ಸಾಹೇಬ್ ಪಾಟೀಲ್‌ರಿಗೆ ಬಿಜೆಪಿಯಿಂದ ₹100 ಕೋಟಿ ಆಫರ್?

Date:

Advertisements

ಬೆಳಗಾವಿ ಜಿಲ್ಲೆಯ ಕಿತ್ತೂರು ಕಾಂಗ್ರೆಸ್‌ ಶಾಸಕ ಬಾಬಾಸಾಹೇಬ್ ಪಾಟೀಲ್ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಅವರಿಗೆ ಬಿಜೆಪಿಯಿಂದ ₹ 100 ಕೋಟಿ ಆಫರ್ ಮಾಡಲಾಗಿದೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ರವಿ ಗಣಿಗ ನೀಡಿದ್ದಾರೆ.

ಕಿತ್ತೂರು ಶಾಸಕ ಮತ್ತು ಚಿಕ್ಕಮಗಳೂರಿನ ಶಾಸಕರ ಭೇಟಿಯ ಆಡಿಯೋ, ವಿಡಿಯೋ ರೆಕಾರ್ಡ್ ಇದೆ. ಸಮಯ ನೋಡಿ ಬಿಡುಗಡೆ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಹೇಳಿದ ಮಾತು ಸತ್ಯವಾಗಿದೆ. ಕಾಂಗ್ರೆಸ್‌ ಶಾಸಕರನ್ನು ವಿರೋಧ ಪಕ್ಷದವರು ಯಾವಾಗ ಯಾವ ಗೆಸ್ಟ್‌ಹೌಸ್‌ಗೆ ಬಂದಿದ್ದರು, ಯಾವ ಏರ್‌ಪೋರ್ಟ್‌ನಲ್ಲಿ ಸಿಕ್ಕಿದ್ದರು ಎನ್ನುವುದರ ಆಡಿಯೋ, ವಿಡಿಯೋ ಎಲ್ಲ ದಾಖಲೆಗಳಿವೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲಿ ಬಿಡುಗಡೆ ಮಾಡಲಾಗುವದು ಎಂದು ಹೇಳಿದ್ದಾರೆ.

ಶಾಸಕ ರವಿಕುಮಾರ ಗಣಿಗ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್‌, “ಬಿಜೆಪಿಯ ಯಾವ ನಾಯಕರು ನನ್ನ ಸಂಪರ್ಕ ಮಾಡಿಲ್ಲ. ಸರ್ಕಾರದ ಪ್ರಾರಂಭದ ಅವದಿಯಲ್ಲಿ ಬಿಜೆಪಿ ಪಕ್ಷದಿಂದ ಆಫರ್ ಬಂದಿದ್ದು ನಿಜ” ಎಂದಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

“ಸ್ನೇಹ, ವಿಶ್ವಾಸದ ಮೇಲೆ ಬಿಜೆಪಿ ಪಕ್ಷದಲ್ಲಿನ ಸ್ನೇಹಿತರು ಆಹ್ವಾನ ನೀಡಿದ್ದರು. ಸದ್ಯ ನನಗೆ ಯಾವುದೇ ದುಡ್ಡಿನ ಆಫರ್ ಬಂದಿಲ್ಲ. ರವಿಕುಮಾರ್ ಗಣಿಗ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು. ಅವರು ಯಾಕೆ ಹೀಗೆ ಹೇಳಿದ್ದಾರೆ ಎಂದು ಅವರಿಗೆ ಕೇಲುವೆ. ಅವರ ಬಳಿ ಆಡಿಯೋ, ವಿಡಿಯೋ ದಾಖಲೆ ಇದ್ದರೆ ಬಿಡುಗಡೆ ಮಾಡಲಿ” ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X