ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದ್ದರೆ ಕ್ರಮ ಕೈಗೊಳ್ಳಬಹುದು: ಸಚಿವ ಪರಮೇಶ್ವರ್

Date:

Advertisements

ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು “ನಾನು ಈ ಹಿಂದೆ ಪಕ್ಷದ ಶಿಸ್ತುಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರನ್ನು ಅವರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೆವು. ಅಗತ್ಯ ಬಿದ್ದರೆ ಅಮಾನತು ಸಹ ಮಾಡುತ್ತಿದ್ದೆವು” ಎಂದರು.

ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ. ಹೀಗಿದ್ದರೂ ಬಿಜೆಪಿ ಹಾಗೂ ಜೆಡಿಎಸ್‌ನವರು​ ಈ ಬಗ್ಗೆ ಮಾತನಾಡುತ್ತಿದ್ದಾರೆ. ಸಿಎಂ ಅವರನ್ನು ಕಂಡರೆ ಬಿಜೆಪಿ ಅವರಿಗೆ ಹೊಟ್ಟೆ ಉರಿ” ಎಂದು ಹೇಳಿದರು.

Advertisements

ಬಿಜೆಪಿ ವಿರುದ್ಧದ ಶೇ 40 ಕಮಿಷನ್ ಆರೋಪಕ್ಕೆ ದಾಖಲೆ ಇಲ್ಲ ಎಂದು ಲೋಕಾಯುಕ್ತ ತನಿಖೆಯಲ್ಲಿ ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿ “ಲೋಕಾಯುಕ್ತ ಪೊಲೀಸರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎಂದಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯ ಬಿದ್ದರೆ ಮರು ತನಿಖೆಗೆ ಸಿದ್ಧರಿದ್ದೇವೆ’ ಎಂದರು.

“ಶಾಸಕರ ಖರೀದಿಗೆ ಈಗಲೂ ಬಿಜೆಪಿ ಯತ್ನಿಸುತ್ತಿದೆ. ಈ ವಿಚಾರವಾಗಿ ದಾಖಲೆ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

40% ಕಮಿಷನ್ ಪ್ರಕರಣ

“ನಾವು ಕೆಂಪಣ್ಣ ಆಯೋಗ ಬರೆದ ಪತ್ರದ ಮೇಲೆ ಹೋರಾಟ ಮಾಡಿದ್ದೆವು. ನಮಗೆ ಅದೇ ದಾಖಲೆ. ಈಗ ಲೋಕಾಯುಕ್ತದವರು ಯಾವ ಆಧಾರದ ಮೇಲೆ ಸಾಕ್ಷಿ ಇಲ್ಲ ಎನ್ನುತ್ತಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯಬಿದ್ದರೆ ಮರುತನಿಖೆಗೆ ಒಳಪಡಿಸಲು ನಾವು ಸಿದ್ಧ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ​​

ಬೆಂಗಳೂರಿನಲ್ಲಿ ಚಾಕಲೇಟ್​ ರೂಪದಲ್ಲಿ ಡ್ರಗ್ಸ್ ಸಿಗುತ್ತಿರುವ ಕುರಿತ ಪ್ರಶ್ನೆಗೆ, “ಡ್ರಗ್ಸ್ ವಿರುದ್ಧ ಕ್ರಮಕ್ಕೆ ಸರ್ಕಾರ ಸಮರ ಸಾರಿದೆ. ಎಲ್ಲೆಡೆ ಕಡಿವಾಣ ಹಾಕಲು ತೀರ್ಮಾನ ‌ಮಾಡಲಾಗಿದೆ. ಶಾಲಾ, ಕಾಲೇಜುಗಳ ಬಳಿ ಡ್ರಗ್ಸ್​ ಚಾಕಲೇಟ್​ ರೂಪದಲ್ಲಿ ಮಾರಾಟವಾಗುತ್ತಿವೆ ಎಂಬ ಮಾಹಿತಿ ಬಂದರೆ‌ ಕೂಡಲೇ ಮೆಡಿಕಲ್​ ಶಾಪ್​ಗಳ ಲೈಸನ್ಸ್ ರದ್ದು ಮಾಡಲು ಕ್ರಮ ವಹಿಸಲಾಗುವುದು. ಆನೇಕಲ್​ ಭಾಗದಲ್ಲಿ ಪೊಲೀಸರು ಹೆಚ್ಚು ದಾಳಿ ಮಾಡುತ್ತಿದ್ದಾರೆ. ಬೇರೆ ರಾಜ್ಯದಿಂದ ಡ್ರಗ್ಸ್ ಬರುತ್ತಿದ್ದುದನ್ನು ಪೊಲೀಸರು ಹಿಡಿದಿದ್ದಾರೆ. ಹೊರ ದೇಶದಿಂದ ಬಂದು ಡ್ರಗ್ಸ್ ಮಾರಾಟ ಮಾಡುವವರ ಮಾಹಿತಿಯನ್ನು ಹೈ ಕಮಿಷನ್​ ಹಾಗೂ ರಾಯಭಾರಿಗಳಿಗೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಏರ್‌ಪೋರ್ಟ್ ಡ್ರಗ್ಸ್ ಮೂಲಕ ಸಿಕ್ಕಾಪಟ್ಟೆ ಬರುತ್ತಿದೆ. ವಿಶಾಖಪಟ್ಟಣದಲ್ಲಿ ಒಂದೂವರೆ ಸಾವಿರ ಕೆ.ಜಿ‌ ಡ್ರಗ್ಸ್​ ಹಿಡಿದಿದ್ದಾರೆ‌” ಎಂದು ಪರಮೇಶ್ವರ್ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X