ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

Date:

Advertisements
  • ಅರ್ಧ ಗಂಟೆಯಾದರೂ ಯುವತಿಗೆ ಚಿಕಿತ್ಸೆಗೆ ನೀಡದ ವೈದ್ಯರು – ಆರೋಪ
  • ಬೆಂಗಳೂರು ಮಹಾನಗರಿ ವೀಕ್ಷಣೆಗೆ ಆಗಮಿಸಿದ್ದ ಹೈದರಾಬಾದ್ ಕುಟುಂಬ

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಕೆ.ಆರ್‌ ಸರ್ಕಲ್‌ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ಹೈದರಾಬಾದ್ ಮೂಲದ ಇನ್ಫೋಸಿಸ್ ಉದ್ಯೋಗಿ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 ವರ್ಷದ ಯುವತಿ ಭಾನುರೇಖಾ ಮೃತ ದುರ್ದೈವಿ. ಯುವತಿಯ ಸಹೋದರ ಸಂದೀಪ್ ಎಂಬುವವರು ಹಲಸೂರು ಗೇಟ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಳೆ ಬರುವ ಬಗ್ಗೆ ಮುನ್ಸೂಚನೆ ಇದ್ದರು ಬಿಬಿಎಂಪಿ ಅಧಿಕಾರಿಗಳು ಅಂಡರ್‌ಪಾಸ್‌ನಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಯುವತಿಯ ಸಹೋದರ ದೂರಿನಲ್ಲಿ ವಿವರಿಸಿದ್ದಾರೆ.

Advertisements

ದೂರಿನ ಮೇರೆಗೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊಳಚೆ ನೀರು ಕುಡಿದು ಯುವತಿ ಸಾವು

ಭಾನುರೇಖಾ ಬೆಂಗಳೂರಿನ ಇನ್ಫೋಸಿಸ್‌ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪ್ರವಾಸಕ್ಕೆಂದು ತನ್ನ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆತಂದಿದ್ದರು. ಕಬ್ಬನ್ ಪಾರ್ಕ್ ವೀಕ್ಷಣೆ ಮಾಡುವ ವೇಳೆ ಧಾರಾಕಾರ ಮಳೆ ಆರಂಭವಾದ ಕಾರಣ ಪ್ರಗತಿನಗರದಲ್ಲಿರುವ ತನ್ನ ಮನೆಗೆ ವಾಪಾಸಾಗುತ್ತಿದ್ದರು.

ಈ ವೇಳೆ, ಕೆಆರ್ ಸರ್ಕಲ್​ ಬಳಿಯ ಅಂಡರ್​ಪಾಸ್​ನಲ್ಲಿ ನೀರು ತುಂಬಿರುವುದನ್ನು ಗಮನಿಸದ ಕಾರು ಚಾಲಕ ನೀರಿನಲ್ಲಿ ಕಾರು ಚಲಾಯಿಸಿದ್ದಾನೆ. ಅಂಡರ್‌ಪಾಸ್‌ನ ಮಧ್ಯಭಾಗಕ್ಕೆ ತೆರಳುತ್ತಿದ್ದಂತೆ ಕಾರು ಮುಳುಗಡೆಯಾಗ ತೊಡಗಿತು. ಕಾರನ್ನು ಹಿಂದಕ್ಕೆ ಸಾಗಿಸಲು ಯತ್ನಿಸಿದರು ಇದು ಸಾಧ್ಯವಾಗದೆ ಕಾರು ಮುಳುಗಡೆಯಾಗಿತ್ತು. ಇದೇ ಸಮಯದಲ್ಲಿ ಎರಡು ಆಟೋಗಳು ಕೂಡ ಕೆಳರಸ್ತೆಯಲ್ಲಿ ಮುಳುಗಡೆಯಾಗಿದ್ದವು.

ಈ ಸುದ್ದಿ ಓದಿದ್ದೀರಾ? ಎಚ್ಚರ | ಮಳೆ ಬಂದಾಗ ರಾಜಧಾನಿ ಬೆಂಗಳೂರಿನಲ್ಲಿ ಬಳಸದಿರಿ ಕೆಳಸೇತುವೆ!

ಕಾರು ಮುಳುಗಡೆಯಾಗುವುದನ್ನು ಅರಿತ ಸ್ಥಳಿಯರು ಎಚ್ಚೆತ್ತು ಅವರ ಸಹಾಯಕ್ಕೆ ಧಾವಿಸಿದರು. ಕೂಡಲೆ ರಕ್ಷಣಾ ಸಿಬ್ಬಂದಿ ಕೂಡ ಅವರ ರಕ್ಷಣೆಗೆ ಬಂದರು. ಆರು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಯುವತಿ ಚರಂಡಿ ನೀರು ಕುಡಿದು ತೀವ್ರ ಅಸ್ವಸ್ಥವಾಗಿದ್ದರು.

ಹತ್ತಿರದ ಸೇಂಟ್​ ಮಾರ್ಥಾಸ್ ಆಸ್ಪತ್ರೆಗೆ ಯುವತಿಯನ್ನು ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆ ಸಿಬ್ಬಂದಿ ಆರಂಭದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿ, ಸುಮಾರು ಅರ್ಧಗಂಟೆಗಳ ಕಾಲ ಯುವತಿಯನ್ನು ಹೊರಗೆ ಇರಿಸಲಾಗಿತ್ತು. ಬಳಿಕ ಸ್ಥಳೀಯರು ಆಕ್ರೋಶಗೊಂಡ ನಂತರ ಯುವತಿಯನ್ನು ಆಸ್ಪತ್ರೆಯೊಳಗೆ ಸೇರಿಸಿಕೊಂಡು ಚಿಕಿತ್ಸೆ ನೀಡಲು ಆರಂಭಿಸಿದರು. ಈ ವೇಳೆಗಾಗಲೇ ಯುವತಿ ಸಾವನ್ನಪ್ಪಿದ್ದಳು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X