ಶಿವಮೊಗ್ಗ | ಕನ್ನಡ ನೆಲದಲ್ಲಿ ಹುಟ್ಟುವುದೇ ಪುಣ್ಯ: ಅಭಿನವ ಚನ್ನಬಸವ ಸ್ವಾಮೀಜಿ

Date:

Advertisements

ಕನ್ನಡ ಭಾಷೆಯಲ್ಲಿ ಮತ್ತು ಕನ್ನಡ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ದೇಶವನ್ನಾಳುವ ಉತ್ತಮ ಪ್ರಜೆಗಳಾಗುತ್ತಾರೆ. ಕನ್ನಡ ನೆಲದಲ್ಲಿ ಹುಟ್ಟುವುದೇ ಒಂದು ಪುಣ್ಯ ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಜೈ ಕರ್ನಾಟಕ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಯಾವುದೇ ಮಠ ಮಾನ್ಯಗಳು ಹಾಗೂ ಗುರೂಜಿಗಳು ಮಾಡದ ಕೆಲಸವನ್ನು ನಮ್ಮ ಆಟೋ ಚಾಲಕರು ಮಾಡುತ್ತಾರೆ. ಕನ್ನಡ ನಾಡಿನಲ್ಲಿರುವ ಸಂಸ್ಕೃತಿ ಮತ್ತು ವ್ಯವಸ್ಥೆ ಇಡೀ ಭಾರತದಲ್ಲಿ ಎಲ್ಲಿಯೂ ಸಿಗಲು ಸಾಧ್ಯವಿಲ್ಲ. ಮುಖ್ಯವಾಗಿ ಕನ್ನಡ ಭಾಷೆಯನ್ನು ಹಾಗೂ ತಾಯಿ ಭುವನೇಶ್ವರಿಯನ್ನು ಸದಾ ಹಾರೈಸುವವರು ನಮ್ಮ ಆಟೋ ಚಾಲಕರು. ಇವರಿಗೊಂದು ನಮನ ಸಲ್ಲಿಸೋಣ. ಸರ್ಕಾರ ಆಟೋ ಚಾಲಕರಿಗೊಂದು ಭವನವನ್ನು ನಿರ್ಮಿಸಿಕೊಡಬೇಕು. ಇದರಿಂದ ಅವರಿಗೆ ಹೆಚ್ಚು ಅನುಕೂಲವಾಗುತ್ತದೆ” ಎಂದರು.

Advertisements

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿ, “ನವೆಂಬರ್ ತಿಂಗಳು ಬಂದರೆ ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಮುಗಿಲು ಮುಟ್ಟುತ್ತದೆ. ವಿಶೇಷವಾಗಿ ಆಟೋ ಚಾಲಕರು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಾರೆ” ಎಂದರು.

ಜೈ ಕರ್ನಾಟಕ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ ಗೋಪಾಲ ಮಾತನಾಡಿ, “ಕನ್ನಡ ನಾಡು, ನುಡಿ, ಜಲ, ಭಾಷೆ ಯಾವುದಕ್ಕಾದರೂ ಧಕ್ಕೆ ಉಂಟಾದರೆ ನಾವು ಕನ್ನಡಿಗರೆಲ್ಲ ಒಟ್ಟಾಗಿ ಅದರ ವಿರುದ್ಧ ಹೋರಾಡೋಣ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎರಡನೇ ಮಗು ಆಗಲಿಲ್ಲವೆಂದು, ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ವಿಶೇಷವಾಗಿ ಕಾರ್ಯಕ್ರಮದಲ್ಲಿ ಮರಣ ನಂತರ ದೇಹ ದಾನ ಮಾಡಿದ ಸರಸ್ವತಮ್ಮ ಲೋಕೇಶ್, ವೇದಾವತಿ ಮಲ್ಲಪ್ಪ ಹಾಗೂ ವೀರ ಯೋಧರಿಗೆ, ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ, ರಂಗ ಭೂಮಿ ಕಲಾವಿದರಿಗೆ, ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ವಿಶೇಷವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ಕುಮಾರ್, ಗುರುರಾಜ್, ವೀಣಾ ರಾಜೇಶ್, ಕಲೀಮುಲ್ಲಾ ಖಾನ್, ಮಹೇಶ್ ಬೀಸನಗದ್ದ, ಪಿ ಎನ್ ಚಂದ್ರು ಕುಮಾರ್ ಸೇರಿದಂತೆ ಇತರರು ಇದ್ದರು.

ವರದಿ : ಅಮಿತ್ ಆರ್, ಆನಂದಪುರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X