ಕನಕಪುರ | ಭ್ರೂಣ ಪತ್ತೆ ಪ್ರಕರಣ: ಆರೋಪಿ ಡಾ. ದಾಕ್ಷಾಯಿಣಿ ಮತ್ತೆ ನಿಯೋಜನೆಗೆ ಪ್ರಗತಿಪರ ಸಂಘಟನೆಗಳ ವಿರೋಧ

Date:

Advertisements

ಭ್ರೂಣ ಪತ್ತೆ ಮತ್ತು ಹತ್ಯೆಯ ರೂವಾರಿ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನಿಯೋಜನೆ ಮಾಡಿರುವುದು ಕುರಿ ಕಾವಲಿಗೆ ತೋಳ ನಿಯೋಜಿಸಿದಂತೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಕೆಲವು ತಿಂಗಳ ಹಿಂದೆ ಕೆಲವೆಡೆ ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಸ್ತ್ರೀ ರೋಗ ಹಾಗೂ ಹೆರಿಗೆ ತಜ್ಞೆ ಕೆಲಸ ಮಾಡುತ್ತಿದ್ದ ಡಾ. ದಾಕ್ಷಾಯಿಣಿ ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸಿ ಭ್ರೂಣ ಪತ್ತೆ ಯಂತ್ರವನ್ನು ಸ್ಥಳಾಂತರಿಸಿ ನೂರಾರು ಭ್ರೂಣಗಳ ಪತ್ತೆ ಮಾಡಿ ಅಬಾರ್ಷನ್ ಮಾಡಿಸುತ್ತಿದ್ದ ಅಮಾನವೀಯ ಪ್ರಕರಣವನ್ನು ಪ್ರಗತಿಪರ ಸಂಘಟನೆಗಳು ಸಾಕ್ಷಿ ಸಮೇತ ಬಯಲಿಗೆಳೆದಿತ್ತು.

ಮೇಲ್ನೋಟಕ್ಕೆ ಆರೋಪ ಸಾಬೀತಾದ ಪರಿಣಾಮ ಅವರನ್ನು ಶಿಕ್ಷೆಯ ಭಾಗವಾಗಿ ಚಿಕ್ಕಬಳ್ಳಾಪುರದ ಭಟ್ಟರಹಳ್ಳಿ ಎಂಬಲ್ಲಿಗೆ ವರ್ಗ ಮಾಡಲಾಗಿತ್ತು. ಆದರೆ ಅಲ್ಲಿಗೆ ಹೋಗದೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ ಮತ್ತೆ ಅವರ ಪ್ರಭಾವಕ್ಕೆ ಮಣಿದು ಇಲಾಖೆಯು ಅವರನ್ನು ಮರಳಿ ಅದೇ ಸ್ಥಳಕ್ಕೆ ನಿಯೋಜನೆ ಮಾಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

Advertisements

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಭ್ರೂಣ ಪತ್ತೆಯ ಯಂತ್ರದ ದಾಖಲೆಗಳನ್ನು ಕೋರ್ಟ್‌ನ ಮುಂದಿರಿಸಬೇಕಾದ ಆರೋಗ್ಯ ಇಲಾಖೆ ದಾಕ್ಷಾಯಣಿ ಬಗ್ಗೆ ಮೃದು ಧೋರಣೆ ತಳೆದಿರುವುದು ಕಂಡು ಬಂದಿದೆ. ಈಗಾಗಲೇ ಆ ಯಂತ್ರದಲ್ಲಿನ MTP (ಅಬಾರ್ಷನ್)ದಾಖಲೆಗಳನ್ನು ಪಡೆದು ಪ್ರಗತಿಪರ ಸಂಘಟನೆಗಳ ಪರವಾಗಿ ನಾನೇ ನ್ಯಾಯಾಲಯದಲ್ಲಿ ದಾಖಲೆ ಮಂಡಿಸಲು ಅನುಮತಿ ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಲಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

IMG 20241118 WA0035

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೂ ಪತ್ರ ಬರೆಯಲಿದ್ದು, ಸಾಕ್ಷಿ ನಾಶದ ಸಂಭವ ಇರುವ ಕಾರಣ ತಕ್ಷಣವೇ ಅವರನ್ನು ವರ್ಗಾವಣೆ ಮಾಡಲು ಆಗ್ರಹಿಸಲಿದ್ದೇನೆ ಎಂದರು.

ನೂರಾರು ಭ್ರೂಣಗಳ‌ ಕಣ್ಣು ಬಿಡುವ ಮೊದಲೇ ಕೊಂದವರಿಗೆ ಖಂಡಿತ ಶಿಕ್ಷೆಯಾಗಲಿದೆ. ನಮಗೆ ನ್ಯಾಯಲಯದ ಮೇಲೆ ಅಪರಿಮಿತ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯ ರೈತ ಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಮಾತನಾಡಿ, ಡಾ. ದಾಕ್ಷಾಯಣಿ ಪ್ರಾಮಾಣಿಕತೆಯ ಸಚ್ಚಾರಿತ್ರ್ಯವನ್ನು ಒಳಗೊಂಡ ವೈದ್ಯೆಯಲ್ಲ. ಈ ಹಿಂದೆ ಬಡವರೊಬ್ಬರಿಗೆ ಹೆರಿಗೆ ಮಾಡಿಸಲು 5000 ರೂ ಲಂಚ ಕೇಳಿದ ಪ್ರಕರಣವನ್ನು ಆಡಿಯೋ ದಾಖಲೆಯೊಂದಿಗೆ ಮುಂದಿರಿಸಿ ಹೋರಾಟ ಮಾಡಲಾಗಿತ್ತು ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

ಲಂಚ ಕೊಡದವರ ಬಗ್ಗೆ ನಿರ್ಲಕ್ಷ್ಯವಾಗಿ ವರ್ತಿಸುವ ಹಲವಾರು ಆರೋಪ ಅವರ ಮೇಲಿವೆ. ಆದ್ದರಿಂದ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಿ ವೈದ್ಯೋ ನಾರಾಯಣ ಹರಿ ಎಂಬ ಜನರ ನಂಬಿಕೆಗೆ ಅನುಗುಣವಾಗಿ ಸೇವೆ ಸಲ್ಲಿಸುವ ವೈದ್ಯರನ್ನು ನಿಯೋಜನೆ ಮಾಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸುತ್ತದೆ ಎಂದರು.

ಪತ್ರಿಕಾಗೋಷ್ಡಿಯಲ್ಲಿ ನಗರಸಭೆ ಸದಸ್ಯರಾದ ಸ್ಟುಡಿಯೋ ಚಂದ್ರು, ನೇಗಿಲಯೋಗಿ ಸಂಘಟನೆಯ ಕಾಡೇಗೌಡ, ಜೀವನ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಹೊಸದುರ್ಗ, ವೈಭವ ಕರ್ನಾಟಕ ಜಿಲ್ಲಾಧ್ಯಕ್ಷ ಪುಟ್ಟಲಿಂಗಯ್ಯ, ರೇಷ್ಮೆ ಉತ್ಪದಾಕರ ಸಂಘದ ಅಧ್ಯಕ್ಷ ರಾಮಕೃಷ್ಣ, ಕನ್ನಡ ಭಾಸ್ಕರ್, ಜಯಕರ್ನಾಟಕ ಜನಪರ ವೇದಿಕೆ ಗಿರೀಶ್, ಆರ್‌ಟಿಐ ಕಾರ್ಯಕರ್ತ ಕಿಶೋರ್, ರೈತ ಸಂಘದ ಕನಕಪುರ ತಾಲೂಕು ಅಧ್ಯಕ್ಷ ಕುಮಾರ್, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಬಸವರಾಜು, ಮುಖಂಡರಾದ ಮುನಿಶಿವಣ್ಣ, ರವಿ, ಸಿದ್ದರಾಜು, ರವಿಕುಮಾರ್, ಕೆಂಪಣ್ಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X