ಬೀದರ್‌ | ವೈದ್ಯರ ನಿರ್ಲಕ್ಷ್ಯದಿಂದ ವೃದ್ಧೆ ಸಾವು; ಆಸ್ಪತ್ರೆ ಎದುರು ಪ್ರತಿಭಟನೆ

Date:

Advertisements

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ ಬೆಳಗ್ಗೆ ಆರೋಗ್ಯ ಕೇಂದ್ರಕ್ಕೆ ಬಂದ ವೇಳೆ ಕೇಂದ್ರದಲ್ಲಿ ವೈದ್ಯ ಸಿಬ್ಬಂದಿಗಳು ಇಲ್ಲದೇ ಸೂಕ್ತ ಸಮಯಕ್ಕೆ ಚಿಕಿತ್ಸೆಗಾಗಿ ಪರದಾಡಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ಮುಖಂಡರು, ಯುವಕರು ಆಸ್ಪತ್ರೆ ಮುಂಭಾಗದಲ್ಲಿ ಜಮಾಯಿಸಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಾಟೆಗೆ ತೆದುಕೊಂಡಿದ್ದಾರೆ. ವಿಷಯ ತಿಳಿದ ಜಿಲ್ಲಾ ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನಿರಗೂಡೆ ಹಾಗೂ ಟಿಎಚ್‍ಒ ಶಿವಕುಮಾರ ಸಿದ್ದೇಶ್ವರ ಆರೋಗ್ಯ ಕೇಂದ್ರಕ್ಕೆ ಧಾವಿಸಿ ಗ್ರಾಮದ ಮುಖಂಡರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಘಟನೆಯ ಮಾಹಿತಿ ಪಡೆದಿದ್ದಾರೆ.

Advertisements

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ನಾಗರಾಜ ಭೋಜಗುಂಡಿ, ಗ್ರಾಪಂ ಸದಸ್ಯರಾದ ಪ್ರಭು ನೆಳಗಿ, ಸತೀಷ ಪಾಂಡುರಂಗ ಇಮ್ಲೇಕರ್, ರಾಮಣ್ಣ ನರಸಗೊಂಡಿ, ದತ್ತು ಧಗೆ, ಭೀಮಶಾ ಹುಣಸಗೇರಾ, ಜೈರಾಮ ಖಜುರೆ, ಗ್ರಾಪಂ ಸದಸ್ಯ ಅನಿಲ ಪಸಾರ್ಗಿ ಸೇರಿದಂತೆ ಪ್ರಮುಖರಾದ ಭದ್ರೇಶ ಪಾಟೀಲ್, ಶಿವರಾಜ ಗಂಗಶಟ್ಟಿ, ಅಶೋಕಕುಮಾರ ಚಳಕಾಪೂರೆ, ಅಮರ ಪಸಾರ್ಗಿ, ವೀರೇಶ ಸಜ್ಜನ ಹಾಗೂ ಅನೇಕರಿದ್ದರು.

ʼಈ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆಯಾಗಿ ಎಲ್ಲ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗುವುದುʼ ಎಂದು ಡಿಎಚ್‌ಒ ಡಾ.ಜ್ಞಾನೇಶ್ವರ ನಿರಗೂಡೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಮತ್ತು ಸಂಘದ ಗೌರವ ಪ್ರಶಸ್ತಿ ಪ್ರಕಟ

ʼದುಬಲಗುಂಡಿ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಕೆಲ ತಿಂಗಳಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡದೇ ಕೆಲ ಸಿಬ್ಬಂದಿಗಳು ಕಾಲ ಹರಣ ಮಾಡುತ್ತಿದ್ದಾರೆ. ಈ ಆರೋಪದ ಮಧ್ಯೆ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕುʼ ಎಂದು ಗ್ರಾಮಸ್ಥರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X